Andolana originals

8 ತಿಂಗಳ ನಂತರ ಎಚ್.ಡಿ ಕೋಟೆಗೆ ಕಬಿನಿ ನೀರು ಪೂರೈಕೆ

ಸೆಪ್ಟೆಂಬರ್‌ನಲ್ಲಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿ; ೨೫ ಲಕ್ಷ ರೂ. ವೆಚ ದಲ್ಲಿ ಹೊಸ ಪೈಪ್‌ಲೈನ್ ಕಾಮಗಾರಿ ಪೂರ್ಣ

 

ಎಚ್. ಡಿ. ಕೋಟೆ: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮುಸುಕಿನ ಗುದ್ದಾಟದಿಂದ ೮ ತಿಂಗಳುಗಳಿಂದ ಸ್ಥಗಿತ ಗೊಂಡಿದ್ದ ಕಬಿನಿ ಕುಡಿಯುವ ನೀರನ್ನು ಪುರಸಭೆ ವ್ಯಾಪ್ತಿಯ ಜನಸಾಮಾನ್ಯರಿಗೆ ಈಗ ಒದಗಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಪಟ್ಟಣದ ನಿವಾಸಿಗಳಿಗೆ ಹಲವು ತಿಂಗಳುಗಳಿಂದ ಕಬಿನಿ ನೀರು ಲಭ್ಯವಿಲ್ಲದೆ ಜನತೆ ಉಪ್ಪು ಮತ್ತು ಅನೇಕ ಲವಣಗಳ ಮಿಶ್ರಿತ, ಆರೋಗ್ಯಕ್ಕೆ ಹಾನಿಕರ ವಾಗುವ ಬೋರ್‌ವೆಲ್ ನೀರನ್ನು ಉಪಯೋಗಿಸುವ ಅನಿವಾರ್ಯತೆ ಎದುರಾಗಿತ್ತು.

ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಲುವಾಗಿ ಎಂ. ಶಿವಣ್ಣ ಸಚಿವರಾಗಿದ್ದ ಸಂದರ್ಭದಲ್ಲಿ ೬ ಕೋಟಿ ರೂ. ವೆಚ್ಚದಲ್ಲಿ ಕಬಿನಿ ಕುಡಿಯುವ ನೀರು ಯೋಜನೆ ರೂಪಿಸಲಾಗಿತ್ತು. ೮ ತಿಂಗಳ ಹಿಂದೆ ಬೊಪ್ಪನಹಳ್ಳಿ ಕೆರೆ ಬಳಿ ಪೈಪ್‌ಲೈನ್ ಹಾಳಾಗಿ ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡಿನ ನಿವಾಸಿಗಳಿಗೆ ಕಬಿನಿ ಕುಡಿಯುವ ಶುದ್ಧ ನೀರು ಇಲ್ಲದೆ ಸಮಸ್ಯೆ ಎದುರಾಗಿತ್ತು.

ಕಳೆದ ಸೆಪ್ಟೆಂಬರ್ ೨೪ರಂದು ‘ಆಂದೋಲನ’ ದಿನಪತ್ರಿಕೆ ಮುಖಪುಟದಲ್ಲಿ ‘ಕಬಿನಿ ದಡದಲ್ಲಿದ್ದರೂ ೨ ತಿಂಗಳಿಂದ ಕುಡಿಯುವ ನೀರಿಲ್ಲ’ ಎಂಬ ಶೀರ್ಷಿಕೆಯಡಿ ಕಬಿನಿ ಕುಡಿಯುವ ನೀರಿನ ಸಮಸ್ಯೆ ಮತ್ತು ದುರಸ್ತಿ ಕಾಮಗಾರಿ ವಿಚಾರವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜಟಾಪಟಿ ಬಗ್ಗೆ ವರದಿ ಪ್ರಕಟಿಸಿದ್ದು, ಇದನ್ನು ಗಮನಿಸಿದ್ದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು, ಪಿ. ಡಿ. ಶುಭ, ಎಸಿ ವಿಜಯ ಕುಮಾರ್, ಪುರಸಭೆ ಸಿಒ ಸುರೇಶ್ ಅವರೊಡನೆ ಸಭೆ ನಡೆಸಿ, ಪುರಸಭೆಯ ಕೆಲ ಸದಸ್ಯರ ಆಕ್ಷೇಪವನ್ನು ತಿರಸ್ಕರಿಸಿ ಪುರಸಭೆಯಲ್ಲಿರುವ ಅನುದಾನದಲ್ಲಿ ೨೫ ಲಕ್ಷ ರೂ. ವೆಚ್ಚದಲ್ಲಿ ಹೊಸ ಪೈಪ್‌ಲೈನ್ ಕಾಮಗಾರಿ ನಡೆಸಿ ಶುದ್ಧ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

೩೫೦ ಮೀಟರ್ ಉದ್ದ ಹೊಸ ಕಬ್ಬಿಣದ ಪೈಪ್‌ಲೈನ್ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ನಿರ್ವಹಿಸಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಸುರೇಶ್ ಮತ್ತು ರಮೇಶ್, ರಾಮಸ್ವಾಮಿ, ಮತ್ತಿತರ ಸಿಬ್ಬಂದಿ ಪರಿಶೀಲಿಸಿ ಹ್ಯಾಂಡ್ ಪೋಸ್ಟಿನಲ್ಲಿರುವ ಕಬಿನಿ ಶುದ್ಧ ನೀರಿನ ಘಟಕಕ್ಕೆ ನೀರು ಸರಬರಾಜು ಮಾಡಿಸಿ, ಘಟಕವನ್ನು ಸ್ವಚ್ಛ ಗೊಳಿಸಿ ಪರಿಶೀಲಿಸಿ ಪಟ್ಟಣದ ಜನತೆಗೆ ಶುಕ್ರವಾರ ದಿಂದ ಕಬಿನಿ ಕುಡಿಯುವ ಶುದ್ಧ ನೀರನ್ನು ಒದಗಿಸು ತ್ತಿದ್ದಾರೆ.

ಕಬಿನಿ ಶುದ್ಧ ಕುಡಿಯುವ ನೀರನ್ನು ಪುರಸಭೆ ವ್ಯಾಪ್ತಿಯಲ್ಲಿ ಈಗ ಪೂರೈಸಲಾಗುತ್ತಿದೆ. ೮ ತಿಂಗಳುಗಳ ಹಿಂದೆ ಕಬಿನಿ ನದಿಯಿಂದ ನೀರು ಸರಬರಾಜಾಗುವ ಕಬ್ಬಿಣದ ಪೈಪ್ ಲೈನ್ ಒಡೆದು ಹೋಗಿತ್ತು. ಪುರಸಭೆಯ ಅನುದಾನದಲ್ಲಿ ಇದರ ದುರಸ್ತಿ ಕಾರ್ಯ ನಡೆಸಲು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ದುರಸ್ತಿ ಕೆಲಸ ನಡೆದಿರಲಿಲ್ಲ. ಸೆಪ್ಟೆಂಬರ್ ತಿಂಗಳಿನಲ್ಲಿ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಮೇಲಽಕಾರಿಗಳು ಪುರಸಭೆ ಅನುದಾನದಲ್ಲಿ ಕಾಮಗಾರಿ ನಡೆಸಲು ಕ್ರಮ ಕೈಗೊಂಡು ಐದಾರು ತಿಂಗಳ ನಂತರ ಕೆಲಸ ಪೂರ್ಣಗೊಳಿಸಿದ್ದಾರೆ. ಕಬಿನಿ ನೀರು ಸರಬರಾಜಿಲ್ಲದೆ ಪಟ್ಟಣದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು. ಹೀಗಾಗಿ ಪುರಸಭೆ ವ್ಯಾಪ್ತಿಯಲ್ಲಿರುವ ೫೮ ಬೋರ್‌ವೆಲ್‌ಗಳ ಮೂಲಕ ಸಮರ್ಪಕವಾಗಿ ನೀರು ಒದಗಿಸಲಾಗಿತ್ತು. ಇನ್ನೂ ಕೆಲವೆಡೆ ಸಮಸ್ಯೆ ಎದುರಾದ ತಕ್ಷಣ ಟ್ಯಾಂಕರ್ ಮೂಲಕ ಸಾರ್ವಜನಿಕರಿಗೆ ನೀರು ಪೂರೈಸಲಾಗಿದೆ. ಈಗ ಕಬಿನಿ ನೀರನ್ನು ಪುರಸಭೆ ವ್ಯಾಪ್ತಿಯಲ್ಲಿ ಪೂರೈಕೆ ಮಾಡುತ್ತಿರುವುದು ಸಂತಸ ತಂದಿದೆ. -ಸುರೇಶ್, ಮುಖ್ಯಾಧಿಕಾರಿ, ಪುರಸಭೆ

ಕಳೆದ ಏಳೆಂಟು ತಿಂಗಳುಗಳಿಂದ ಮನೆಗಳಿಗೆ ಕಬಿನಿ ನೀರು ಪೂರೈಕೆಯಾಗದೆ ಇಲ್ಲಿನ ನಿವಾಸಿಗಳು ಪುರಸಭೆ ಕಚೇರಿ ಬಳಿ ಪ್ರತಿಭಟನೆ ಮಾಡಿದ್ದರು. ಈಗ ಪೈಪ್‌ಲೈನ್ ದುರಸ್ತಿಯಾಗಿ ಮನೆಗಳಿಗೆ ನೀರು ಪೂರೈಕೆಯಾಗುತ್ತಿರುವುದು ಸಂತಸ ತಂದಿದೆ. -ಲಾರಿ ಪ್ರಕಾಶ್, ಪಟ್ಟಣದ ನಿವಾಸಿ

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

9 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

13 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

13 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

14 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

14 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

14 hours ago