Categories: Andolana originals

ಓದುಗರ ಪತ್ರ: ‘ಕಗ್ಗದ ದೀವಟಿಕೆ’ ಸ್ಪೂರ್ತಿಯಾಯಿತು

ಕಳೆದ ಕೆಲ ತಿಂಗಳುಗಳಿಂದ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಿರುವ ‘ಕಗ್ಗದ ದೀವಟಿಕೆ ಅಂಕಣವು ಡಿ.ವಿ.ಗುಂಡಪ್ಪನವರ ಕಗ್ಗಗಳನ್ನು ವಿವರಣೆ ಸಹಿತ ತಿಳಿಸಿಕೊಡುತ್ತಿದೆ.

ವಿದ್ವಾನ್ ಕೃ.ಪಾ.ಮಂಜುನಾಥ್‌ರವರು ತಮ್ಮ ಬರಹದಲ್ಲಿ ಅಚ್ಚುಕಟ್ಟಾಗಿ ವಿವರಣೆ ನೀಡುತ್ತಿದ್ದು, ಇದನ್ನೇ ಸ್ಫೂರ್ತಿಯಾಗಿಸಿಕೊಂಡು ನಮ್ಮ ಸ್ನೇಹಿತರೆಲ್ಲ ಸೇರಿ ಒಂದು ತಂಡವನ್ನು ಕಟ್ಟಿಕೊಂಡು ವಾರಕ್ಕೊಮ್ಮೆ ಒಂದೆಡೆ ಸೇರಿ ‘ಮಂಕು ತಿಮ್ಮನ ತರಗತಿ’ಯನ್ನು ನಡೆಸುತ್ತಿದ್ದೇವೆ. ಈ ತಂಡದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಎಲ್‌ಐಸಿ ಅಧಿಕಾರಿಗಳು, ಲೇಖಕರು ಹಾಗೂ ಗೃಹಿಣಿಯರು ಸೇರಿದಂತೆ ಒಟ್ಟು ಹದಿನೈದು ಮಂದಿ ಇದ್ದು, ಕಳೆದ 6 ತಿಂಗಳುಗಳಿಂದ ಮಂಕುತಿಮ್ಮನ ಪದ್ಯವನ್ನು ಓದಿ ಭಾವಾರ್ಥವನ್ನು ತಿಳಿದುಕೊಳ್ಳುತ್ತಿದ್ದೇವೆ. ಇವು ನಮಗೆ ಜೀವನದ ಮೌಲ್ಯವನ್ನು ಬೋಧಿಸುತ್ತಿವೆ. ಇದರೊಟ್ಟಿಗೆ ನಿವೃತ್ತ ಪ್ರಾಂಶುಪಾಲ ವಂಕಟೇಶ ಮೂರ್ತಿಯವರು ಮಂಕುತಿಮ್ಮನ ಕಗ್ಗಗಳ ಕುರಿತು ಅಪಾರ ಜ್ಞಾನವನ್ನು ಹೊಂದಿದ್ದು, ಅವರಿಂದಲೂ ಅನೇಕ ವಿಚಾರಗಳು ತಿಳಿಯುತ್ತಿವೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು,

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago