Andolana originals

ಏ. 13ರಿಂದ ಚಿಕ್ಕರಸಿನಕೆರೆ ಕಾಲಭೈರವೇಶ್ವರ ಜಾತ್ರಾ ಮಹೋತವ

ರಥೋತ್ಸವಕ್ಕೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ; ಏ. ೧೫ರಂದು ಮಹಾರಥೋತ್ಸವ

  • ಅಣ್ಣೂರು ಸತೀಶ್

ಭಾರತೀನಗರ: ದಕ್ಷಿಣದ ಚಿಕ್ಕಕಾಶಿ ಎಂದೇ ಕರೆಸಿಕೊಳ್ಳುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಏ. 13ರಿಂದ 20ರವರೆಗೆ ವಿಜೃಂಭ ಣೆಯಿಂದ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರೀಕಾಲಭೈರವೇಶ್ವರ ಬಸವಪ್ಪನ ವರ ಪುಣ್ಯಕ್ಷೇತ್ರದಲ್ಲಿ ಏ. 15ರಂದು ಕಾಲ ಭೈರವೇಶ್ವರಸ್ವಾಮಿಯವರ ಮಹಾರಥೋತ್ಸವ ಹಾಗೂ ದೇವತೆಗಳ ಉತ್ಸವ ವಿಜೃಂಭಣೆಯಿಂದ ಜರುಗಲಿದೆ. ರಥೋತ್ಸವಕ್ಕೂ ಮುನ್ನ ಹಿರಿಯ ದಂಪತಿಗಳಿಗೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ದೇವತಾ ಕಾರ್ಯಕ್ರಮಗಳು: ಏ. 13ರ ಭಾನುವಾರ ಬೆಳಿಗ್ಗೆ ಹೋಮ-ಹವನ ಇತ್ಯಾದಿ ಪೂಜಾ ಕಾರ್ಯಗಳು ಜರುಗಲಿವೆ.

ಸಂಜೆ ಚಿಕ್ಕರಸಿನಕೆರೆ, ಗುರುದೇವರಹಳ್ಳಿ, ಹುಣ್ಣನದೊಡ್ಡಿ ಗ್ರಾಮಸ್ಥರಿಂದ ಕೊಂಡ ಬಂಡಿ ಉತ್ಸವ ನಡೆಯಲಿದೆ. ರಾತ್ರಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶ್ರೀ ಕಾರ್ಕಹಳ್ಳಿ ಬಸವೇಶ್ವರಸ್ವಾಮಿ, ಶ್ರೀ ಹೊನ್ನಾರತಿದೇವಿ ಅಮ್ಮನವರು, ಮುಟ್ಟನಹಳ್ಳಿ ಶ್ರೀಕಾಲಭೈರವೇಶ್ವರಸ್ವಾಮಿ, ದೊಡ್ಡ ಅರಸಿನಕೆರೆ, ಶ್ರೀಏಳೂರಮ್ಮ ಕಾಳಮ್ಮ ಹಾಗೂ ಬುಳ್ಳಿಕೆಂಪನದೊಡ್ಡಿ ಗ್ರಾಮದ ನಿಶಾನಿ ದೇವರುಗಳು, ಹುನಗನಹಳ್ಳಿ ಗ್ರಾಮಸ್ಥರಿಂದ ಕರಗದ ಉತ್ಸವ, ಗುರುದೇವರಹಳ್ಳಿ ಶ್ರೀಬಸವೇಶ್ವರಪೂಜೆ ಹಾಗೂ ಛತ್ರದಹೊಸಹಳ್ಳಿ ಗ್ರಾಮದವರಿಂದ ಛತ್ರಿ ಚಾಮರ ಹಾಗೂ ದೇವಾನುದೇವತೆಗಳ ಉತ್ಸವ ನೆರವೇರಲಿದೆ.

ಏ. 14ರ ಸೋಮವಾರ ಬೆಳಿಗ್ಗೆ 6.30ಕ್ಕೆ ಶ್ರೀ ಕಾಲಭೈರವೇಶ್ವರ ಅಗ್ನಿಕೊಂಡ ಆರತಿ, 11. 30ಕ್ಕೆ ಬೇಲೂರು ಕುಲದವರು ಹಾಗೂ ಬಾಣ ಸಮುದ್ರ,ಬೊಪ್ಪಸಮುದ್ರ, ಚಿಕ್ಕಮಾಳಿಗೆ ಕೊಪ್ಪಲು, ಕಾರ್ಕಹಳ್ಳಿ ಗ್ರಾಮದರಿಂದ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6.30ಕ್ಕೆ ಮದ್ದೂರು ತಾಲ್ಲೂಕು, ಸಿ. ಎ. ಕೆರೆ ಹೋಬಳಿಯ ಸರ್ವ ಬಣಜಿಗ ಸಂಘದ ವತಿಯಿಂದ ಶ್ರೀ ವೀರಾಂಜನೇಯ ಸ್ವಾಮಿಯ ಪಲ್ಲಕ್ಕಿ ಉತ್ಸವ, ರಾತ್ರಿ 9 ಗಂಟೆಗೆ ನಾಟಕ ಪ್ರದರ್ಶನ, ಮಧ್ಯ ರಾತ್ರಿ 12 ಗಂಟೆಗೆ ಮನೆಮಂಚಮ್ಮ ದೇವತೆಗಳ ಕರಗ ಉತ್ಸವ ಮತ್ತು ಪೂಜಾ ಮೆರವಣಿಗೆ ನಡೆಯಲಿದೆ.

ರಥೋತ್ಸವ, ಅನ್ನಸಂತರ್ಪಣೆ: ಏ. 15ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿ ಮಹಾ ರಥೋತ್ಸವ ಹಾಗೂ ದೇವತೆಗಳ ಉತ್ಸವ ನಡೆಯಲಿದೆ. ಅರೆಕಲ್‌ದೊಡ್ಡಿ, ಬನ್ನಹಳ್ಳಿ, ಹೊನ್ನಾಯಕನಹಳ್ಳಿ ಹಾಗೂ ಕಾಡಂಕನಹಳ್ಳಿ ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಏ. 16ರ ಬುಧವಾರ ಸಂಜೆ 5 ಗಂಟೆಗೆ ಚಿಕ್ಕರಸಿನಕೆರೆ, ಗುರುದೇವರಹಳ್ಳಿ ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯವರ ಓಕಳಿ ಸೇವೆ ಉತ್ಸವ ನಡೆಯಲಿದೆ. ಏ. 17ರ ಗುರುವಾರ ಸಂಜೆ 5 ಗಂಟೆಗೆ ಹುಣ್ಣನದೊಡ್ಡಿ ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಓಕುಳಿ ಸೇವೆ ಉತ್ಸವ, ಏ. 18 ರ ಶುಕ್ರವಾರ ಛತ್ರದಹೊಸಹಳ್ಳಿ ಗ್ರಾಮದಲ್ಲಿ ಓಕುಳಿ ಸೇವೆ ಉತ್ಸವ ಹಾಗೂ ಏ. 20ರ ಭಾನುವಾರ ಶ್ರೀಚನ್ನಾಪ್ಪಜಿ ಸ್ವಾಮಿಯ ಸಿದ್ಧಬುಕ್ತಿ ಕಾರ್ಯಕ್ರಮ ನಡೆಯಲಿದೆ.

ದೇಗುಲದ ಇತಿಹಾಸ: ಹಿಂದೆ ಚಿಕ್ಕಅರಸಿ ಮತ್ತು ದೊಡ್ಡಅರಸಿ ಎಂಬ ಅಕ್ಕ-ತಂಗಿಯರಿದ್ದರು. ಇವರು ಎರಡು ಕೆರೆಗಳನ್ನು ಕಟ್ಟಿಸಿದರು. ನಂತರ ದಿನಗಳಲ್ಲಿ ಚಿಕ್ಕಅರಸಿ ಬಳಿ ನಿರ್ಮಾಣವಾದ ಗ್ರಾಮವನ್ನು ಚಿಕ್ಕರಸಿನಕೆರೆ ಎಂತಲೂ, ದೊಡ್ಡರಸಿ ಬಳಿ ನಿರ್ಮಾಣವಾದ ಗ್ರಾಮವನ್ನು ದೊಡ್ಡರಸಿನಕೆರೆ ಎಂದು ನಾಮಕರಣ ಮಾಡಲಾಯಿತು ಎಂಬ ಪ್ರತೀತಿ ಇದೆ.

ಶ್ರೀ ಕಾಲಭೈರವೇಶ್ವರಸ್ವಾಮಿಯ ಬಸವ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ಬಸವಪ್ಪನಿಗೆ ಜನರು ನೀಡುವ ಕಾಣಿಕೆಯಿಂದಲೇ ದೇವಸ್ಥಾನದ ಹಲವು ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲಾಗಿದೆ. ಆದರೆ , ೨2016ರ ಮೇ 17ರಂದು ಕಾಲಭೈರವೇಶ್ವರ ದೇವರ ಬಸವಪ್ಪ ಸಾವನ್ನಪ್ಪಿತು. ಈಗ ದೇವರ ಹೆಸರಿಗೆ ಸಮರ್ಪಿಸಿರುವ ಹೊಸ ಬಸವ ಕೂಡ ಪ್ರಮುಖ ಆಕರ್ಷಣೆಯಾಗಿದೆ.

ಶ್ರೀ ಕಾಲಭೈರವೇಶ್ವರಸ್ವಾಮಿ ಚಿಕ್ಕರಸಿನಕೆರೆ ಕ್ಷೇತ್ರದಲ್ಲಿ ನೆಲೆ ನಿಂತಿದ್ದು, ಕ್ಷೇತ್ರವು ಅಭಿವೃದ್ಧಿ ಹೊಂದಿದೆ. ಆದಿಚುಂಚನಗಿರಿ ಕ್ಷೇತ್ರಕ್ಕೆ ಒಳಪಟ್ಟ ನಂತರ ಉತ್ತಮ ಅಭಿವೃದ್ಧಿಯಾಗಿ ಜನರ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಡಾ. ನಿರ್ಮಲಾನಂದನಾಥ ಸ್ವಾಮೀಜಿ

ದಕ್ಷಿಣದ ಚಿಕ್ಕಕಾಶಿ ಎಂದೇ ಪ್ರಸಿದ್ಧವಾಗಿರುವ ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಲು ಬರುವವರು ಶಿಸ್ತುಬದ್ಧವಾಗಿ ನಡೆದು ಕೊಳ್ಳುವುದರ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಯಜಮಾನ್ ಶಿವಲಿಂಗಯ್ಯ, ಅಧ್ಯಕ್ಷರು, ಕಾಲಭೈರವೇಶ್ವರ ಟ್ರಸ್ಟ್

ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ಪುಣ್ಯಕ್ಷೇತ್ರ ರಾಜ್ಯಾದ್ಯಂತ ಪ್ರಚಲಿತ ಗೊಂಡಿದ್ದು ಲಕ್ಷಾಂತರ ಭಕ್ತರನ್ನು ಹೊಂದಿದೆ. ಏ. 13 ರಿಂದ 20ರವರೆಗೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಪುಟ್ಟರಾಜು, ಯಜಮಾನರು, ಚಿಕ್ಕರಸಿನಕೆರೆ

 

ಆಂದೋಲನ ಡೆಸ್ಕ್

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

3 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

3 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

3 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

3 hours ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

3 hours ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

3 hours ago