ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನವರಾತ್ರಿ ವೇಳೆ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆ ಆಯ್ಕೆಯಾಗಿವೆ. ಅ. ೩ರಿಂದ ಅ. ೧೨ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದ್ದು, ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯದಲ್ಲಿ ಪಟ್ಟದ ಆನೆ, ಪಟ್ಟದ ಹಸು, ಒಂಟೆ, ಕಳಸ ಹೊತ್ತ ಮಹಿಳೆಯರೊಂದಿಗೆ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗದಿಂದ ಅರಮನೆಯ ಕನ್ನಡಿ ತೊಟ್ಟಿಯವರೆಗೂ ದೇವತಾ ಮೂರ್ತಿಯನ್ನು ತೆಗೆದುಕೊಂಡು ಹೋಗುವ ಪದ್ಧತಿಯಿದೆ.
ಈ ಹಿನ್ನೆಲೆಯಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಭಾನುವಾರ ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದರು. ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಗಂಡಾನೆಗಳಾದ ಭೀಮ, ಕಂಜನ್, ಸುಗ್ರೀವ, ಗೋಪಿ, ಏಕಲವ್ಯ ಹಾಗೂ ಹೆಣ್ಣಾನೆಗಳಾದ ಲಕ್ಷಿ ಮತ್ತು ಹಿರಣ್ಯ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿ ಕರೆದೊಯ್ಯಲಾಗಿತ್ತು. ೫ ಗಂಡಾನೆಗಳನ್ನು ಪರಿಶೀಲಿಸಿದ ಪ್ರಮೋದಾ ದೇವಿ ಒಡೆಯರ್ ಅವರು ಕಂಜನ್ ಆನೆಯನ್ನು ಪಟ್ಟದ ಆನೆಯಾಗಿಯೂ, ಭೀಮಾ ಆನೆಯನ್ನು ಪಟ್ಟದ ನಿಶಾನೆಯಾಗಿಯೂ ಆಯ್ಕೆ ಮಾಡಿದರು.
ಪಟ್ಟದ ಆನೆ, ಪಟ್ಟದ ನಿಶಾನೆ ಆನೆ ಆಯ್ಕೆ ನಡೆದಿದೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರು ೫ ಗಂಡಾನೆ, ೨ ಹೆಣ್ಣಾನೆಗಳನ್ನು ಇಂದು ಪರಿಶೀಲಿಸಿದರು. ಅದರಲ್ಲಿ ಪಟ್ಟದ ಆನೆಯಾಗಿ ಕಂಜನ್ ಆನೆಯನ್ನು ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆಯನ್ನು ಆಯ್ಕೆ ಮಾಡಿದ್ದಾರೆ. -ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್, ವನ್ಯಜೀವಿ ವಿಭಾಗ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…