Andolana originals

ಕಂಜನ್‌ ಪಟ್ಟದ ಆನೆ, ಭೀಮ ನಿಶಾನೆ ಆನೆ!

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನವರಾತ್ರಿ ವೇಳೆ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆ ಆಯ್ಕೆಯಾಗಿವೆ. ಅ. ೩ರಿಂದ ಅ. ೧೨ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದ್ದು, ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯದಲ್ಲಿ ಪಟ್ಟದ ಆನೆ, ಪಟ್ಟದ ಹಸು, ಒಂಟೆ, ಕಳಸ ಹೊತ್ತ ಮಹಿಳೆಯರೊಂದಿಗೆ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗದಿಂದ ಅರಮನೆಯ ಕನ್ನಡಿ ತೊಟ್ಟಿಯವರೆಗೂ ದೇವತಾ ಮೂರ್ತಿಯನ್ನು ತೆಗೆದುಕೊಂಡು ಹೋಗುವ ಪದ್ಧತಿಯಿದೆ.

ಈ ಹಿನ್ನೆಲೆಯಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಭಾನುವಾರ ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದರು. ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಗಂಡಾನೆಗಳಾದ ಭೀಮ, ಕಂಜನ್, ಸುಗ್ರೀವ, ಗೋಪಿ, ಏಕಲವ್ಯ ಹಾಗೂ ಹೆಣ್ಣಾನೆಗಳಾದ ಲಕ್ಷಿ ಮತ್ತು ಹಿರಣ್ಯ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿ ಕರೆದೊಯ್ಯಲಾಗಿತ್ತು. ೫ ಗಂಡಾನೆಗಳನ್ನು ಪರಿಶೀಲಿಸಿದ ಪ್ರಮೋದಾ ದೇವಿ ಒಡೆಯರ್ ಅವರು ಕಂಜನ್ ಆನೆಯನ್ನು ಪಟ್ಟದ ಆನೆಯಾಗಿಯೂ, ಭೀಮಾ ಆನೆಯನ್ನು ಪಟ್ಟದ ನಿಶಾನೆಯಾಗಿಯೂ ಆಯ್ಕೆ ಮಾಡಿದರು.

ಪಟ್ಟದ ಆನೆ, ಪಟ್ಟದ ನಿಶಾನೆ ಆನೆ ಆಯ್ಕೆ ನಡೆದಿದೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರು ೫ ಗಂಡಾನೆ, ೨ ಹೆಣ್ಣಾನೆಗಳನ್ನು ಇಂದು ಪರಿಶೀಲಿಸಿದರು. ಅದರಲ್ಲಿ ಪಟ್ಟದ ಆನೆಯಾಗಿ ಕಂಜನ್ ಆನೆಯನ್ನು ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆಯನ್ನು ಆಯ್ಕೆ ಮಾಡಿದ್ದಾರೆ. -ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್, ವನ್ಯಜೀವಿ ವಿಭಾಗ.

andolana

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

9 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

9 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

9 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

9 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

9 hours ago