ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನವರಾತ್ರಿ ವೇಳೆ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆ ಆಯ್ಕೆಯಾಗಿವೆ. ಅ. ೩ರಿಂದ ಅ. ೧೨ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದ್ದು, ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯದಲ್ಲಿ ಪಟ್ಟದ ಆನೆ, ಪಟ್ಟದ ಹಸು, ಒಂಟೆ, ಕಳಸ ಹೊತ್ತ ಮಹಿಳೆಯರೊಂದಿಗೆ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗದಿಂದ ಅರಮನೆಯ ಕನ್ನಡಿ ತೊಟ್ಟಿಯವರೆಗೂ ದೇವತಾ ಮೂರ್ತಿಯನ್ನು ತೆಗೆದುಕೊಂಡು ಹೋಗುವ ಪದ್ಧತಿಯಿದೆ.
ಈ ಹಿನ್ನೆಲೆಯಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಭಾನುವಾರ ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದರು. ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಗಂಡಾನೆಗಳಾದ ಭೀಮ, ಕಂಜನ್, ಸುಗ್ರೀವ, ಗೋಪಿ, ಏಕಲವ್ಯ ಹಾಗೂ ಹೆಣ್ಣಾನೆಗಳಾದ ಲಕ್ಷಿ ಮತ್ತು ಹಿರಣ್ಯ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿ ಕರೆದೊಯ್ಯಲಾಗಿತ್ತು. ೫ ಗಂಡಾನೆಗಳನ್ನು ಪರಿಶೀಲಿಸಿದ ಪ್ರಮೋದಾ ದೇವಿ ಒಡೆಯರ್ ಅವರು ಕಂಜನ್ ಆನೆಯನ್ನು ಪಟ್ಟದ ಆನೆಯಾಗಿಯೂ, ಭೀಮಾ ಆನೆಯನ್ನು ಪಟ್ಟದ ನಿಶಾನೆಯಾಗಿಯೂ ಆಯ್ಕೆ ಮಾಡಿದರು.
ಪಟ್ಟದ ಆನೆ, ಪಟ್ಟದ ನಿಶಾನೆ ಆನೆ ಆಯ್ಕೆ ನಡೆದಿದೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರು ೫ ಗಂಡಾನೆ, ೨ ಹೆಣ್ಣಾನೆಗಳನ್ನು ಇಂದು ಪರಿಶೀಲಿಸಿದರು. ಅದರಲ್ಲಿ ಪಟ್ಟದ ಆನೆಯಾಗಿ ಕಂಜನ್ ಆನೆಯನ್ನು ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆಯನ್ನು ಆಯ್ಕೆ ಮಾಡಿದ್ದಾರೆ. -ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್, ವನ್ಯಜೀವಿ ವಿಭಾಗ.
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…