ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕಾರ್ಯಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ವಿಶ್ವಕೋಶ-೧೦ ಮತ್ತು ೧೩ನೇ ಸಂಪುಟಗಳ ಬಿಡುಗಡೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಇಂಗ್ಲಿಷ್ ಇದೀಗ ಅನಿ ವಾರ್ಯ. ಉದ್ಯೋಗಾವಕಾಶ ಕ್ಕಾಗಿ ಮತ್ತು ಹೊರ ರಾಜ್ಯ, ವಿದೇಶಗಳಿಗೆ ತೆರಳಲು ಅದು ಅಗತ್ಯ ನಿಜ. ಹಾಗೆಂದ ಮಾತ್ರಕ್ಕೆ ಇಂಗ್ಲಿಷ್ಗಾಗಿ ಕನ್ನಡವನ್ನು ಬಿಡ ಬೇಕೆಂದು ಎಲ್ಲಿಯೂ ಹೇಳಿಲ್ಲ. ಇಂಗ್ಲಿಷ್ ಕಲಿಯಿರಿ, ಕನ್ನಡ ಬಿಡಬೇಡಿ ಎಂದು ಹೇಳಿದರು. ನಮ್ಮ ಮೂಲ ಹುಡುಕಾಟಕ್ಕೆ ಕನ್ನಡ ಭಾಷೆ ಬೇಕು. ಹೀಗಾಗಿ, ಇದನ್ನು ಬಿಡಬಾರದು. ಕನ್ನಡ ಪುಸ್ತಕ, ವಿಶ್ವಕೋಶಗಳನ್ನು ತೆಗೆದುಕೊಂಡು ಓದಬೇಕು. ಮಕ್ಕಳಿಗೂ ಓದುವ ಅಭ್ಯಾಸ ಮಾಡಿಸಿ. ತಾಯಂದಿರೂ ಓದಬೇಕು. ಇದು ನಿಮ್ಮ ಕರ್ತವ್ಯ ಎಂದರು.
ಈಗ ಶುದ್ಧ ಕನ್ನಡದ ಬಳಕೆಯೇ ಇಲ್ಲದಂತಾಗಿದೆ. ಅದರಲ್ಲೂ ಬೆಂಗಳೂರು ಸಮೀಪಿಸುತ್ತಿದ್ದಂತೆಯೇ ಕನ್ನಡದ ಸ್ಥಿತಿ ನೆನೆದರೆ ನೋವಾಗುತ್ತದೆ. ಜಗತ್ತಿನ ಎಲ್ಲಿಗೇ ಹೋದರೂ ನಾನು ಕನ್ನಡಿಗಳೇ. ಹಲವು ಭಾಷೆಗಳು ಗೊತ್ತಿದ್ದರೂ ಕನ್ನಡವೇ ನನ್ನ ತಾಯಿ. ತಲೆತಲಾಂತರದಿಂದ ಬಂದಿರುವ ಈ ಕನ್ನಡ ಪರಂಪರೆಯನ್ನು ಮರೆಯ ಬಾರದು. ಇದುವೇ ನಿಜವಾದ ಆಸ್ತಿ. ಬಂಗಾರ, ಹಣ, ನಿವೇಶನವಲ್ಲ ಎಂದರು.
ಉತ್ತಮ ಆಡಳಿತಗಾರನಿಗೆ ಪಾರದರ್ಶಕತೆ ಇರಬೇಕು. ಉತ್ತರದಾಯಿತ್ವವೂ ಮುಖ್ಯ. ಮಾತುಗಳು ಕೃತಿಯಾಗಬೇಕು. ತಪ್ಪು ಮಾಡಿದ್ದರೆ ಕ್ಷಮೆ ಕೇಳ ಬೇಕು. ಆಗ ಬೇರೆಯವರು ತಪ್ಪು ಮಾಡಿದಾಗ ಅದನ್ನು ಪ್ರಶ್ನಿಸಲು ಧೈರ್ಯ ಬರುತ್ತದೆ. -ಸುಧಾ ಮೂರ್ತಿ, ರಾಜ್ಯಸಭಾ ಸದಸ್ಯೆ
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…