ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕಾರ್ಯಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ವಿಶ್ವಕೋಶ-೧೦ ಮತ್ತು ೧೩ನೇ ಸಂಪುಟಗಳ ಬಿಡುಗಡೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಇಂಗ್ಲಿಷ್ ಇದೀಗ ಅನಿ ವಾರ್ಯ. ಉದ್ಯೋಗಾವಕಾಶ ಕ್ಕಾಗಿ ಮತ್ತು ಹೊರ ರಾಜ್ಯ, ವಿದೇಶಗಳಿಗೆ ತೆರಳಲು ಅದು ಅಗತ್ಯ ನಿಜ. ಹಾಗೆಂದ ಮಾತ್ರಕ್ಕೆ ಇಂಗ್ಲಿಷ್ಗಾಗಿ ಕನ್ನಡವನ್ನು ಬಿಡ ಬೇಕೆಂದು ಎಲ್ಲಿಯೂ ಹೇಳಿಲ್ಲ. ಇಂಗ್ಲಿಷ್ ಕಲಿಯಿರಿ, ಕನ್ನಡ ಬಿಡಬೇಡಿ ಎಂದು ಹೇಳಿದರು. ನಮ್ಮ ಮೂಲ ಹುಡುಕಾಟಕ್ಕೆ ಕನ್ನಡ ಭಾಷೆ ಬೇಕು. ಹೀಗಾಗಿ, ಇದನ್ನು ಬಿಡಬಾರದು. ಕನ್ನಡ ಪುಸ್ತಕ, ವಿಶ್ವಕೋಶಗಳನ್ನು ತೆಗೆದುಕೊಂಡು ಓದಬೇಕು. ಮಕ್ಕಳಿಗೂ ಓದುವ ಅಭ್ಯಾಸ ಮಾಡಿಸಿ. ತಾಯಂದಿರೂ ಓದಬೇಕು. ಇದು ನಿಮ್ಮ ಕರ್ತವ್ಯ ಎಂದರು.
ಈಗ ಶುದ್ಧ ಕನ್ನಡದ ಬಳಕೆಯೇ ಇಲ್ಲದಂತಾಗಿದೆ. ಅದರಲ್ಲೂ ಬೆಂಗಳೂರು ಸಮೀಪಿಸುತ್ತಿದ್ದಂತೆಯೇ ಕನ್ನಡದ ಸ್ಥಿತಿ ನೆನೆದರೆ ನೋವಾಗುತ್ತದೆ. ಜಗತ್ತಿನ ಎಲ್ಲಿಗೇ ಹೋದರೂ ನಾನು ಕನ್ನಡಿಗಳೇ. ಹಲವು ಭಾಷೆಗಳು ಗೊತ್ತಿದ್ದರೂ ಕನ್ನಡವೇ ನನ್ನ ತಾಯಿ. ತಲೆತಲಾಂತರದಿಂದ ಬಂದಿರುವ ಈ ಕನ್ನಡ ಪರಂಪರೆಯನ್ನು ಮರೆಯ ಬಾರದು. ಇದುವೇ ನಿಜವಾದ ಆಸ್ತಿ. ಬಂಗಾರ, ಹಣ, ನಿವೇಶನವಲ್ಲ ಎಂದರು.
ಉತ್ತಮ ಆಡಳಿತಗಾರನಿಗೆ ಪಾರದರ್ಶಕತೆ ಇರಬೇಕು. ಉತ್ತರದಾಯಿತ್ವವೂ ಮುಖ್ಯ. ಮಾತುಗಳು ಕೃತಿಯಾಗಬೇಕು. ತಪ್ಪು ಮಾಡಿದ್ದರೆ ಕ್ಷಮೆ ಕೇಳ ಬೇಕು. ಆಗ ಬೇರೆಯವರು ತಪ್ಪು ಮಾಡಿದಾಗ ಅದನ್ನು ಪ್ರಶ್ನಿಸಲು ಧೈರ್ಯ ಬರುತ್ತದೆ. -ಸುಧಾ ಮೂರ್ತಿ, ರಾಜ್ಯಸಭಾ ಸದಸ್ಯೆ
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…