Andolana originals

ಕನ್ನಡಿಗರು ಮಾತೃಭಾಷೆ ಬಿಟ್ಟುಕೊಡಬಾರದು; ಕನ್ನಡ ವಿಶ್ವಕೋಶ ಬಿಡುಗಡೆಗೊಳಿಸಿದ ಸುಧಾಮೂರ್ತಿ

ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕಾರ್ಯಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ವಿಶ್ವಕೋಶ-೧೦ ಮತ್ತು ೧೩ನೇ ಸಂಪುಟಗಳ ಬಿಡುಗಡೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.

ಇಂಗ್ಲಿಷ್ ಇದೀಗ ಅನಿ ವಾರ್ಯ. ಉದ್ಯೋಗಾವಕಾಶ ಕ್ಕಾಗಿ ಮತ್ತು ಹೊರ ರಾಜ್ಯ, ವಿದೇಶಗಳಿಗೆ ತೆರಳಲು ಅದು ಅಗತ್ಯ ನಿಜ. ಹಾಗೆಂದ ಮಾತ್ರಕ್ಕೆ ಇಂಗ್ಲಿಷ್‌ಗಾಗಿ ಕನ್ನಡವನ್ನು ಬಿಡ ಬೇಕೆಂದು ಎಲ್ಲಿಯೂ ಹೇಳಿಲ್ಲ. ಇಂಗ್ಲಿಷ್ ಕಲಿಯಿರಿ, ಕನ್ನಡ ಬಿಡಬೇಡಿ ಎಂದು ಹೇಳಿದರು. ನಮ್ಮ ಮೂಲ ಹುಡುಕಾಟಕ್ಕೆ ಕನ್ನಡ ಭಾಷೆ ಬೇಕು. ಹೀಗಾಗಿ, ಇದನ್ನು ಬಿಡಬಾರದು. ಕನ್ನಡ ಪುಸ್ತಕ, ವಿಶ್ವಕೋಶಗಳನ್ನು ತೆಗೆದುಕೊಂಡು ಓದಬೇಕು. ಮಕ್ಕಳಿಗೂ ಓದುವ ಅಭ್ಯಾಸ ಮಾಡಿಸಿ. ತಾಯಂದಿರೂ ಓದಬೇಕು. ಇದು ನಿಮ್ಮ ಕರ್ತವ್ಯ ಎಂದರು.

ಈಗ ಶುದ್ಧ ಕನ್ನಡದ ಬಳಕೆಯೇ ಇಲ್ಲದಂತಾಗಿದೆ. ಅದರಲ್ಲೂ ಬೆಂಗಳೂರು ಸಮೀಪಿಸುತ್ತಿದ್ದಂತೆಯೇ ಕನ್ನಡದ ಸ್ಥಿತಿ ನೆನೆದರೆ ನೋವಾಗುತ್ತದೆ. ಜಗತ್ತಿನ ಎಲ್ಲಿಗೇ ಹೋದರೂ ನಾನು ಕನ್ನಡಿಗಳೇ. ಹಲವು ಭಾಷೆಗಳು ಗೊತ್ತಿದ್ದರೂ ಕನ್ನಡವೇ ನನ್ನ ತಾಯಿ. ತಲೆತಲಾಂತರದಿಂದ ಬಂದಿರುವ ಈ ಕನ್ನಡ ಪರಂಪರೆಯನ್ನು ಮರೆಯ ಬಾರದು. ಇದುವೇ ನಿಜವಾದ ಆಸ್ತಿ. ಬಂಗಾರ, ಹಣ, ನಿವೇಶನವಲ್ಲ ಎಂದರು.

 

ಉತ್ತಮ ಆಡಳಿತಗಾರನಿಗೆ ಪಾರದರ್ಶಕತೆ ಇರಬೇಕು. ಉತ್ತರದಾಯಿತ್ವವೂ ಮುಖ್ಯ. ಮಾತುಗಳು ಕೃತಿಯಾಗಬೇಕು. ತಪ್ಪು ಮಾಡಿದ್ದರೆ ಕ್ಷಮೆ ಕೇಳ ಬೇಕು. ಆಗ ಬೇರೆಯವರು ತಪ್ಪು ಮಾಡಿದಾಗ ಅದನ್ನು ಪ್ರಶ್ನಿಸಲು ಧೈರ್ಯ ಬರುತ್ತದೆ. -ಸುಧಾ ಮೂರ್ತಿ, ರಾಜ್ಯಸಭಾ ಸದಸ್ಯೆ

 

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago