ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕಾರ್ಯಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ವಿಶ್ವಕೋಶ-೧೦ ಮತ್ತು ೧೩ನೇ ಸಂಪುಟಗಳ ಬಿಡುಗಡೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಇಂಗ್ಲಿಷ್ ಇದೀಗ ಅನಿ ವಾರ್ಯ. ಉದ್ಯೋಗಾವಕಾಶ ಕ್ಕಾಗಿ ಮತ್ತು ಹೊರ ರಾಜ್ಯ, ವಿದೇಶಗಳಿಗೆ ತೆರಳಲು ಅದು ಅಗತ್ಯ ನಿಜ. ಹಾಗೆಂದ ಮಾತ್ರಕ್ಕೆ ಇಂಗ್ಲಿಷ್ಗಾಗಿ ಕನ್ನಡವನ್ನು ಬಿಡ ಬೇಕೆಂದು ಎಲ್ಲಿಯೂ ಹೇಳಿಲ್ಲ. ಇಂಗ್ಲಿಷ್ ಕಲಿಯಿರಿ, ಕನ್ನಡ ಬಿಡಬೇಡಿ ಎಂದು ಹೇಳಿದರು. ನಮ್ಮ ಮೂಲ ಹುಡುಕಾಟಕ್ಕೆ ಕನ್ನಡ ಭಾಷೆ ಬೇಕು. ಹೀಗಾಗಿ, ಇದನ್ನು ಬಿಡಬಾರದು. ಕನ್ನಡ ಪುಸ್ತಕ, ವಿಶ್ವಕೋಶಗಳನ್ನು ತೆಗೆದುಕೊಂಡು ಓದಬೇಕು. ಮಕ್ಕಳಿಗೂ ಓದುವ ಅಭ್ಯಾಸ ಮಾಡಿಸಿ. ತಾಯಂದಿರೂ ಓದಬೇಕು. ಇದು ನಿಮ್ಮ ಕರ್ತವ್ಯ ಎಂದರು.
ಈಗ ಶುದ್ಧ ಕನ್ನಡದ ಬಳಕೆಯೇ ಇಲ್ಲದಂತಾಗಿದೆ. ಅದರಲ್ಲೂ ಬೆಂಗಳೂರು ಸಮೀಪಿಸುತ್ತಿದ್ದಂತೆಯೇ ಕನ್ನಡದ ಸ್ಥಿತಿ ನೆನೆದರೆ ನೋವಾಗುತ್ತದೆ. ಜಗತ್ತಿನ ಎಲ್ಲಿಗೇ ಹೋದರೂ ನಾನು ಕನ್ನಡಿಗಳೇ. ಹಲವು ಭಾಷೆಗಳು ಗೊತ್ತಿದ್ದರೂ ಕನ್ನಡವೇ ನನ್ನ ತಾಯಿ. ತಲೆತಲಾಂತರದಿಂದ ಬಂದಿರುವ ಈ ಕನ್ನಡ ಪರಂಪರೆಯನ್ನು ಮರೆಯ ಬಾರದು. ಇದುವೇ ನಿಜವಾದ ಆಸ್ತಿ. ಬಂಗಾರ, ಹಣ, ನಿವೇಶನವಲ್ಲ ಎಂದರು.
ಉತ್ತಮ ಆಡಳಿತಗಾರನಿಗೆ ಪಾರದರ್ಶಕತೆ ಇರಬೇಕು. ಉತ್ತರದಾಯಿತ್ವವೂ ಮುಖ್ಯ. ಮಾತುಗಳು ಕೃತಿಯಾಗಬೇಕು. ತಪ್ಪು ಮಾಡಿದ್ದರೆ ಕ್ಷಮೆ ಕೇಳ ಬೇಕು. ಆಗ ಬೇರೆಯವರು ತಪ್ಪು ಮಾಡಿದಾಗ ಅದನ್ನು ಪ್ರಶ್ನಿಸಲು ಧೈರ್ಯ ಬರುತ್ತದೆ. -ಸುಧಾ ಮೂರ್ತಿ, ರಾಜ್ಯಸಭಾ ಸದಸ್ಯೆ
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…