Andolana originals

ಮಹಾ ಮಾದಲಿ ಸೇವೆಯೊಂದಿಗೆ ತೆರೆ ಕಂಡ ಕಪ್ಪಡಿ ಜಾತ್ರೆ

26 ದಿನಗಳ ಕಾಲ ನಡೆದ ಜಾತ್ರೆಗೆ ಸಾವಿರಾರು ಮಂದಿ ಭೇಟಿ: ಸಾಲು ಪಂಕ್ತಿ ಭೋಜನ

– ಭೇರ್ಯ ಮಹೇಶ್

ಕೆ.ಆರ್.ನಗರ: ತಾಲ್ಲೂಕಿನ ಪ್ರಸಿದ್ಧ ಕಪ್ಪಡಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿಯಿಂದ ಪ್ರಾರಂಭವಾಗಿದ್ದ ಜಾತ್ರೋತ್ಸವಕ್ಕೆ 26 ದಿನಗಳ ನಂತರ ಸೋಮವಾರ ಅದ್ಧೂರಿ ಮಹಾಮಾದಲಿ ಸೇವೆ ನಡೆಸುವುದರೊಂದಿಗೆ ತೆರೆ ಎಳೆಯಲಾಯಿತು.

ಕಾವೇರಿ ನದಿ ದಂಡೆಯ ಹಸಿರು ತೋಪಿನಲ್ಲಿ ಇರುವ ಕಪ್ಪಡಿ ಕ್ಷೇತ್ರಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ರಾಚಪ್ಪಾಜಿ, ಚನ್ನಾಜಮ್ಮನವರ
ಗದ್ದಿಗೆ, ಸಿದ್ದಪ್ಪಾಜಿ ದೇವಸ್ಥಾನ, ಉರಿ ಗದ್ದಿಗೆ, ಮಂಟೇಸ್ವಾಮಿ, ಬಸವಣ್ಣ ದೇಗುಲವಿದ್ದು, ನೀಲಗಾರರ ಸಂಪ್ರದಾಯದಂತೆ ಭಕ್ತಾದಿಗಳಿಂದ ಇಲ್ಲಿ ಗದ್ದುಗೆ, ಕಂಡಾಯ ಪೂಜೆ ನಡೆಯುತ್ತದೆ. ಕ್ಷೇತ್ರದಲ್ಲಿ ಭೋಜನ ಶಾಲೆ ಇದ್ದು, ಜಾತ್ರೋತ್ಸವ ಸಂದರ್ಭದಲ್ಲಿ ನಿತ್ಯ ಪ್ರಸಾದ ವಿನಿಯೋಗ ನಡೆಯುತ್ತದೆ.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೋತ್ಸವದ ಕೊನೆಯ ದಿನಗಳಂದು ದೂರದ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಭಾನುವಾರ ಮತ್ತು ಸೋಮವಾರವೂ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕಪ್ಪಡಿ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳು ಮಾಂಸಾಹಾರ ಮತ್ತು ಸಸ್ಯಾಹಾರ ಅಡುಗೆ ತಯಾರಿಸಿಕೊಂಡು ಊಟ ಸವಿದರು.

ಸೋಮವಾರ ದೇವರ ದರ್ಶನ ಮಾಡಿದ ಭಕ್ತಾದಿಗಳು, ಮಹಾ ಮಾದಲಿ ಪ್ರಸಾದ ಸೇವೆಯಲ್ಲಿ ಭಾಗಿಯಾಗಿದ್ದರು. ಮಾರಾಟಕ್ಕೆ ಇಡಲಾಗಿದ್ದ ಮಹಾ ಮಾದಲಿ ಪ್ರಸಾದ ಖರೀದಿಸಿ ತೆರಳಿದರು.

ಮಂಗಳವಾರ ಗದ್ದುಗೆ ಮಹಾಭಿಷೇಕಕ್ಕೂ ಭಕ್ತಾದಿಗಳು ಹೆಚ್ಚಾಗಿ ಸೇರಿದ್ದರು. ಮಹಾಭಿಷೇಕ ನಡೆದ ನಂತರ ಮಧ್ಯಾಹ್ನ ಕಪ್ಪಡಿ ಕ್ಷೇತ್ರದ ಪೀಠಾಧಿಪತಿಗಳು ಕಪ್ಪಡಿಯಿಂದ ನಿರ್ಗಮಿಸಿದರು.

ಪ್ರತಿ ವರ್ಷ ಉರಿ ಗದ್ದುಗೆಗೆ ಬಂದು ಪೂಜೆ ಸಲ್ಲಿಸಿ ಹೋಗುವುದರಿಂದ ದೇವರು ನಮಗೆ ಆಶೀರ್ವಾದ ಮಾಡುತ್ತಾರೆ. ಇದರಿಂದ ಬೆಟ್ಟದಷ್ಟು
ಕಷ್ಟಗಳು ಬಂದರೂ ನೀರಿನಂತೆ ಕರಗಿ ಹೋಗುತ್ತವೆ. ಮನೆ ದೇವರು ಆಗಿದ್ದರಿಂದ 30 ವರ್ಷಗಳಿಂದಲೂ ಕಪ್ಪಡಿ ಕ್ಷೇತ್ರಕ್ಕೆ ಬರುತ್ತಿದ್ದೇನೆ. ಈಗ ಮಗನೊಂದಿಗೆ ಬಂದು ಮುಡಿ ಕೊಟ್ಟು ಪೂಜೆ ಸಲ್ಲಿಸಿದ್ದೇನೆ.

-ಮಹದೇವ, ಹರಳ, ಕೊಳ್ಳೇಗಾಲ, ತಾಲ್ಲೂಕು.

ಕಪ್ಪಡಿ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳ ಸಂಖ್ಯೆ ಹಿಂದಿಗಿಂತ ಈ ಬಾರಿ ಕಡಿಮೆಯಾಗಿದೆ. ಜಾತ್ರೋತ್ಸವದ ಸಂದರ್ಭದ ಕೊನೆಯ 2-3 ದಿನಗಳಲ್ಲಿ ಭಕ್ತಾದಿಗಳ ಸಂಖ್ಯೆಯಲ್ಲಿ ಏರಿಕೆಯಾಗುವುದು ಸಾಮಾನ್ಯ. ಸೋಮವಾರ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

-ಕೃಷ್ಣಗೌಡ, ವ್ಯಾಪಾರಿ, ಬಾಲೂರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

6 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

10 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

11 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

11 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

11 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

11 hours ago