Andolana originals

ಮಹಾ ಮಾದಲಿ ಸೇವೆಯೊಂದಿಗೆ ತೆರೆ ಕಂಡ ಕಪ್ಪಡಿ ಜಾತ್ರೆ

26 ದಿನಗಳ ಕಾಲ ನಡೆದ ಜಾತ್ರೆಗೆ ಸಾವಿರಾರು ಮಂದಿ ಭೇಟಿ: ಸಾಲು ಪಂಕ್ತಿ ಭೋಜನ

– ಭೇರ್ಯ ಮಹೇಶ್

ಕೆ.ಆರ್.ನಗರ: ತಾಲ್ಲೂಕಿನ ಪ್ರಸಿದ್ಧ ಕಪ್ಪಡಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿಯಿಂದ ಪ್ರಾರಂಭವಾಗಿದ್ದ ಜಾತ್ರೋತ್ಸವಕ್ಕೆ 26 ದಿನಗಳ ನಂತರ ಸೋಮವಾರ ಅದ್ಧೂರಿ ಮಹಾಮಾದಲಿ ಸೇವೆ ನಡೆಸುವುದರೊಂದಿಗೆ ತೆರೆ ಎಳೆಯಲಾಯಿತು.

ಕಾವೇರಿ ನದಿ ದಂಡೆಯ ಹಸಿರು ತೋಪಿನಲ್ಲಿ ಇರುವ ಕಪ್ಪಡಿ ಕ್ಷೇತ್ರಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ರಾಚಪ್ಪಾಜಿ, ಚನ್ನಾಜಮ್ಮನವರ
ಗದ್ದಿಗೆ, ಸಿದ್ದಪ್ಪಾಜಿ ದೇವಸ್ಥಾನ, ಉರಿ ಗದ್ದಿಗೆ, ಮಂಟೇಸ್ವಾಮಿ, ಬಸವಣ್ಣ ದೇಗುಲವಿದ್ದು, ನೀಲಗಾರರ ಸಂಪ್ರದಾಯದಂತೆ ಭಕ್ತಾದಿಗಳಿಂದ ಇಲ್ಲಿ ಗದ್ದುಗೆ, ಕಂಡಾಯ ಪೂಜೆ ನಡೆಯುತ್ತದೆ. ಕ್ಷೇತ್ರದಲ್ಲಿ ಭೋಜನ ಶಾಲೆ ಇದ್ದು, ಜಾತ್ರೋತ್ಸವ ಸಂದರ್ಭದಲ್ಲಿ ನಿತ್ಯ ಪ್ರಸಾದ ವಿನಿಯೋಗ ನಡೆಯುತ್ತದೆ.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೋತ್ಸವದ ಕೊನೆಯ ದಿನಗಳಂದು ದೂರದ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಭಾನುವಾರ ಮತ್ತು ಸೋಮವಾರವೂ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕಪ್ಪಡಿ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳು ಮಾಂಸಾಹಾರ ಮತ್ತು ಸಸ್ಯಾಹಾರ ಅಡುಗೆ ತಯಾರಿಸಿಕೊಂಡು ಊಟ ಸವಿದರು.

ಸೋಮವಾರ ದೇವರ ದರ್ಶನ ಮಾಡಿದ ಭಕ್ತಾದಿಗಳು, ಮಹಾ ಮಾದಲಿ ಪ್ರಸಾದ ಸೇವೆಯಲ್ಲಿ ಭಾಗಿಯಾಗಿದ್ದರು. ಮಾರಾಟಕ್ಕೆ ಇಡಲಾಗಿದ್ದ ಮಹಾ ಮಾದಲಿ ಪ್ರಸಾದ ಖರೀದಿಸಿ ತೆರಳಿದರು.

ಮಂಗಳವಾರ ಗದ್ದುಗೆ ಮಹಾಭಿಷೇಕಕ್ಕೂ ಭಕ್ತಾದಿಗಳು ಹೆಚ್ಚಾಗಿ ಸೇರಿದ್ದರು. ಮಹಾಭಿಷೇಕ ನಡೆದ ನಂತರ ಮಧ್ಯಾಹ್ನ ಕಪ್ಪಡಿ ಕ್ಷೇತ್ರದ ಪೀಠಾಧಿಪತಿಗಳು ಕಪ್ಪಡಿಯಿಂದ ನಿರ್ಗಮಿಸಿದರು.

ಪ್ರತಿ ವರ್ಷ ಉರಿ ಗದ್ದುಗೆಗೆ ಬಂದು ಪೂಜೆ ಸಲ್ಲಿಸಿ ಹೋಗುವುದರಿಂದ ದೇವರು ನಮಗೆ ಆಶೀರ್ವಾದ ಮಾಡುತ್ತಾರೆ. ಇದರಿಂದ ಬೆಟ್ಟದಷ್ಟು
ಕಷ್ಟಗಳು ಬಂದರೂ ನೀರಿನಂತೆ ಕರಗಿ ಹೋಗುತ್ತವೆ. ಮನೆ ದೇವರು ಆಗಿದ್ದರಿಂದ 30 ವರ್ಷಗಳಿಂದಲೂ ಕಪ್ಪಡಿ ಕ್ಷೇತ್ರಕ್ಕೆ ಬರುತ್ತಿದ್ದೇನೆ. ಈಗ ಮಗನೊಂದಿಗೆ ಬಂದು ಮುಡಿ ಕೊಟ್ಟು ಪೂಜೆ ಸಲ್ಲಿಸಿದ್ದೇನೆ.

-ಮಹದೇವ, ಹರಳ, ಕೊಳ್ಳೇಗಾಲ, ತಾಲ್ಲೂಕು.

ಕಪ್ಪಡಿ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳ ಸಂಖ್ಯೆ ಹಿಂದಿಗಿಂತ ಈ ಬಾರಿ ಕಡಿಮೆಯಾಗಿದೆ. ಜಾತ್ರೋತ್ಸವದ ಸಂದರ್ಭದ ಕೊನೆಯ 2-3 ದಿನಗಳಲ್ಲಿ ಭಕ್ತಾದಿಗಳ ಸಂಖ್ಯೆಯಲ್ಲಿ ಏರಿಕೆಯಾಗುವುದು ಸಾಮಾನ್ಯ. ಸೋಮವಾರ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

-ಕೃಷ್ಣಗೌಡ, ವ್ಯಾಪಾರಿ, ಬಾಲೂರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

47 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

51 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

56 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago