Andolana originals

ಮಹಾ ಮಾದಲಿ ಸೇವೆಯೊಂದಿಗೆ ತೆರೆ ಕಂಡ ಕಪ್ಪಡಿ ಜಾತ್ರೆ

26 ದಿನಗಳ ಕಾಲ ನಡೆದ ಜಾತ್ರೆಗೆ ಸಾವಿರಾರು ಮಂದಿ ಭೇಟಿ: ಸಾಲು ಪಂಕ್ತಿ ಭೋಜನ

– ಭೇರ್ಯ ಮಹೇಶ್

ಕೆ.ಆರ್.ನಗರ: ತಾಲ್ಲೂಕಿನ ಪ್ರಸಿದ್ಧ ಕಪ್ಪಡಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿಯಿಂದ ಪ್ರಾರಂಭವಾಗಿದ್ದ ಜಾತ್ರೋತ್ಸವಕ್ಕೆ 26 ದಿನಗಳ ನಂತರ ಸೋಮವಾರ ಅದ್ಧೂರಿ ಮಹಾಮಾದಲಿ ಸೇವೆ ನಡೆಸುವುದರೊಂದಿಗೆ ತೆರೆ ಎಳೆಯಲಾಯಿತು.

ಕಾವೇರಿ ನದಿ ದಂಡೆಯ ಹಸಿರು ತೋಪಿನಲ್ಲಿ ಇರುವ ಕಪ್ಪಡಿ ಕ್ಷೇತ್ರಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ರಾಚಪ್ಪಾಜಿ, ಚನ್ನಾಜಮ್ಮನವರ
ಗದ್ದಿಗೆ, ಸಿದ್ದಪ್ಪಾಜಿ ದೇವಸ್ಥಾನ, ಉರಿ ಗದ್ದಿಗೆ, ಮಂಟೇಸ್ವಾಮಿ, ಬಸವಣ್ಣ ದೇಗುಲವಿದ್ದು, ನೀಲಗಾರರ ಸಂಪ್ರದಾಯದಂತೆ ಭಕ್ತಾದಿಗಳಿಂದ ಇಲ್ಲಿ ಗದ್ದುಗೆ, ಕಂಡಾಯ ಪೂಜೆ ನಡೆಯುತ್ತದೆ. ಕ್ಷೇತ್ರದಲ್ಲಿ ಭೋಜನ ಶಾಲೆ ಇದ್ದು, ಜಾತ್ರೋತ್ಸವ ಸಂದರ್ಭದಲ್ಲಿ ನಿತ್ಯ ಪ್ರಸಾದ ವಿನಿಯೋಗ ನಡೆಯುತ್ತದೆ.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೋತ್ಸವದ ಕೊನೆಯ ದಿನಗಳಂದು ದೂರದ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಭಾನುವಾರ ಮತ್ತು ಸೋಮವಾರವೂ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕಪ್ಪಡಿ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳು ಮಾಂಸಾಹಾರ ಮತ್ತು ಸಸ್ಯಾಹಾರ ಅಡುಗೆ ತಯಾರಿಸಿಕೊಂಡು ಊಟ ಸವಿದರು.

ಸೋಮವಾರ ದೇವರ ದರ್ಶನ ಮಾಡಿದ ಭಕ್ತಾದಿಗಳು, ಮಹಾ ಮಾದಲಿ ಪ್ರಸಾದ ಸೇವೆಯಲ್ಲಿ ಭಾಗಿಯಾಗಿದ್ದರು. ಮಾರಾಟಕ್ಕೆ ಇಡಲಾಗಿದ್ದ ಮಹಾ ಮಾದಲಿ ಪ್ರಸಾದ ಖರೀದಿಸಿ ತೆರಳಿದರು.

ಮಂಗಳವಾರ ಗದ್ದುಗೆ ಮಹಾಭಿಷೇಕಕ್ಕೂ ಭಕ್ತಾದಿಗಳು ಹೆಚ್ಚಾಗಿ ಸೇರಿದ್ದರು. ಮಹಾಭಿಷೇಕ ನಡೆದ ನಂತರ ಮಧ್ಯಾಹ್ನ ಕಪ್ಪಡಿ ಕ್ಷೇತ್ರದ ಪೀಠಾಧಿಪತಿಗಳು ಕಪ್ಪಡಿಯಿಂದ ನಿರ್ಗಮಿಸಿದರು.

ಪ್ರತಿ ವರ್ಷ ಉರಿ ಗದ್ದುಗೆಗೆ ಬಂದು ಪೂಜೆ ಸಲ್ಲಿಸಿ ಹೋಗುವುದರಿಂದ ದೇವರು ನಮಗೆ ಆಶೀರ್ವಾದ ಮಾಡುತ್ತಾರೆ. ಇದರಿಂದ ಬೆಟ್ಟದಷ್ಟು
ಕಷ್ಟಗಳು ಬಂದರೂ ನೀರಿನಂತೆ ಕರಗಿ ಹೋಗುತ್ತವೆ. ಮನೆ ದೇವರು ಆಗಿದ್ದರಿಂದ 30 ವರ್ಷಗಳಿಂದಲೂ ಕಪ್ಪಡಿ ಕ್ಷೇತ್ರಕ್ಕೆ ಬರುತ್ತಿದ್ದೇನೆ. ಈಗ ಮಗನೊಂದಿಗೆ ಬಂದು ಮುಡಿ ಕೊಟ್ಟು ಪೂಜೆ ಸಲ್ಲಿಸಿದ್ದೇನೆ.

-ಮಹದೇವ, ಹರಳ, ಕೊಳ್ಳೇಗಾಲ, ತಾಲ್ಲೂಕು.

ಕಪ್ಪಡಿ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳ ಸಂಖ್ಯೆ ಹಿಂದಿಗಿಂತ ಈ ಬಾರಿ ಕಡಿಮೆಯಾಗಿದೆ. ಜಾತ್ರೋತ್ಸವದ ಸಂದರ್ಭದ ಕೊನೆಯ 2-3 ದಿನಗಳಲ್ಲಿ ಭಕ್ತಾದಿಗಳ ಸಂಖ್ಯೆಯಲ್ಲಿ ಏರಿಕೆಯಾಗುವುದು ಸಾಮಾನ್ಯ. ಸೋಮವಾರ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

-ಕೃಷ್ಣಗೌಡ, ವ್ಯಾಪಾರಿ, ಬಾಲೂರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago