Mysore
32
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್

ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ 

ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ ಮಂಗಳವಾರ ಕೊಂಡೋತ್ಸವ ನಡೆಯಲಿದ್ದು, ಮಾ.೪ರ ಬುಧವಾರ ವಿಜೃಂಭಣೆಯ ರಥೋತ್ಸವ ಜರುಗಲಿದೆ.

ಪ್ರತಿ ವರ್ಷ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ರಥೋತ್ಸವಕ್ಕೆ ಆಗಮಿಸುತ್ತಾರೆ.

ಸಾವಿರಾರು ಭಕ್ತರ ಘೋಷಗಳ ನಡುವೆ ರಥೋತ್ಸವ ಅತ್ಯಂತ ಸಡಗರ, ಸಂಭ್ರಮದಿಂದ ಜರುಗುತ್ತದೆ. ರಥೋತ್ಸವದ ಅಂಗವಾಗಿ ಭಾವ-ಮೈದುನರಾಗಿರುವ ಶ್ರೀ ಕಾಲ ಭೈರವೇಶ್ವರ ಬಸವ, ಚಿಕ್ಕರಸಿನಕೆರೆ ಬಸವಗಳು ಜೋಡಿ ಬಸವೇಶ್ವರ ಜಾತ್ರೆಗೆ ಮೆರುಗು ತರಲಿವೆ.

ಜಾತ್ರೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ದೇವಸ್ಥಾನವನ್ನು ಸುಣ್ಣ- ಬಣ್ಣಗಳಿಂದ ಸಿಂಗರಿಸಲಾಗಿದೆ.ಮಾ.೨ರ ಸೋಮವಾರ ಬಂಡಿ ಉತ್ಸವ ಜರುಗಿತು. ಜತೆಗೆ ರಾತ್ರಿ ಅಗ್ನಿಕೊಂಡ, ಕರಗ, ಬಾಯಿ ಬೀಗ ಹಾಗೂ ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ಸ್ವಾಮಿ, ತೊರೆಬೊಮ್ಮನಹಳ್ಳಿ ಪಟ್ಟಲದಮ್ಮ ದೇವರು ಮತ್ತು ಕಾರ್ಕಹಳ್ಳಿ ಶ್ರೀಬಸವೇಶ್ವರ ಸ್ವಾಮಿ ದೇವರ ಉತ್ಸವ ಜರುಗಿತು.

ಮಾ.೩ ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ಅನ್ನಸಂತರ್ಪಣೆ ಹಾಗೂ ಪೂಜಾಕಾರ್ಯ ಕ್ರಮಗಳು ನಡೆಯಲಿವೆ. ಮಾ.೪ರ ಬುಧವಾರ ಸಂಜೆ ೪ ಗಂಟೆಗೆ ರಥೋತ್ಸವ ಜರುಗಲಿದೆ. ಮಾ.೫ರ ಗುರುವಾರ ದೇವೇಗೌಡನದೊಡ್ಡಿ ಗ್ರಾಮದಲ್ಲಿ ಕಾರ್ಕಹಳ್ಳಿ ಶ್ರೀ ಬಸವೇಶ್ವರ ಉತ್ಸವ ಹಾಗೂ ಮಾ.೬ರ ಶುಕ್ರವಾರ ಶ್ರೀ ಮುತ್ತುರಾಯಸ್ವಾಮಿ ಸೇವೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

” ಕಾರ್ಕಹಳ್ಳಿ ಗ್ರಾಮದಲ್ಲಿ ಮೂರ‍್ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ವನ್ನು ಅಚ್ಚುಕಟ್ಟಾಗಿ ನಡೆಸಲು ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ. ದೇವಸ್ಥಾನದ ಅಭಿವೃದ್ಧಿಗಾಗಿ ಮುಜರಾಯಿ ಇಲಾಖೆಯಿಂದ ೧೦ ಲಕ್ಷ ರೂ ಬಿಡುಗಡೆಯಾಗಿದೆ. ನನ್ನೊಂದಿಗೆ ಗ್ರಾಮದ ಯಜಮಾನರು ಕೈಜೋಡಿಸಿದ್ದಾರೆ.”

– ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯ

” ನಾನು ೧೯೯೯ರಲ್ಲಿ ಚುನಾವಣೆ ಪ್ರಚಾರಕ್ಕೆ ಬಂದಾಗ ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಸವಪ್ಪನಿಂದ ಆಶೀರ್ವಾದ ಪಡೆದುಕೊಂಡಿದ್ದೆ. ನನಗೆ ಮೊದಲ ಬಾರಿಯ ಚುನಾವಣೆಯಲ್ಲಿ ಜಯ ಸಿಕ್ಕಿತು. ನಂತರದ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದೇನೆ.”

– ಡಿ.ಸಿ.ತಮ್ಮಣ್ಣ, ಮಾಜಿ ಸಚಿವ

” ಕಾರ್ಕಹಳ್ಳಿ ಬಸವೇಶ್ವರ ಭ್ರಷ್ಟಾಚಾರಿಗಳಿಗೆ, ಕಳ್ಳಕಾಕರಿಗೆ, ಜಮೀನು ಒತ್ತುವರಿದಾರರಿಗೆ ಸಿಂಹಸ್ವಪ್ನವಾಗಿದೆ. ತನ್ನ ಮಹಿಮೆಯನ್ನು ಮೆರೆಯುತ್ತಿರುವ ಬಸವಪ್ಪ ಮಂಡ್ಯಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ಭಕ್ತರನ್ನು ಹೊಂದಿದೆ.”

– ಕಾರ್ಕಹಳ್ಳಿ ಬಸವರಾಜು, ಜಾ.ದಳ ಮುಖಂಡರು

 

 

 

Tags:
error: Content is protected !!