Andolana originals

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್

ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ 

ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ ಮಂಗಳವಾರ ಕೊಂಡೋತ್ಸವ ನಡೆಯಲಿದ್ದು, ಮಾ.೪ರ ಬುಧವಾರ ವಿಜೃಂಭಣೆಯ ರಥೋತ್ಸವ ಜರುಗಲಿದೆ.

ಪ್ರತಿ ವರ್ಷ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ರಥೋತ್ಸವಕ್ಕೆ ಆಗಮಿಸುತ್ತಾರೆ.

ಸಾವಿರಾರು ಭಕ್ತರ ಘೋಷಗಳ ನಡುವೆ ರಥೋತ್ಸವ ಅತ್ಯಂತ ಸಡಗರ, ಸಂಭ್ರಮದಿಂದ ಜರುಗುತ್ತದೆ. ರಥೋತ್ಸವದ ಅಂಗವಾಗಿ ಭಾವ-ಮೈದುನರಾಗಿರುವ ಶ್ರೀ ಕಾಲ ಭೈರವೇಶ್ವರ ಬಸವ, ಚಿಕ್ಕರಸಿನಕೆರೆ ಬಸವಗಳು ಜೋಡಿ ಬಸವೇಶ್ವರ ಜಾತ್ರೆಗೆ ಮೆರುಗು ತರಲಿವೆ.

ಜಾತ್ರೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ದೇವಸ್ಥಾನವನ್ನು ಸುಣ್ಣ- ಬಣ್ಣಗಳಿಂದ ಸಿಂಗರಿಸಲಾಗಿದೆ.ಮಾ.೨ರ ಸೋಮವಾರ ಬಂಡಿ ಉತ್ಸವ ಜರುಗಿತು. ಜತೆಗೆ ರಾತ್ರಿ ಅಗ್ನಿಕೊಂಡ, ಕರಗ, ಬಾಯಿ ಬೀಗ ಹಾಗೂ ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ಸ್ವಾಮಿ, ತೊರೆಬೊಮ್ಮನಹಳ್ಳಿ ಪಟ್ಟಲದಮ್ಮ ದೇವರು ಮತ್ತು ಕಾರ್ಕಹಳ್ಳಿ ಶ್ರೀಬಸವೇಶ್ವರ ಸ್ವಾಮಿ ದೇವರ ಉತ್ಸವ ಜರುಗಿತು.

ಮಾ.೩ ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ಅನ್ನಸಂತರ್ಪಣೆ ಹಾಗೂ ಪೂಜಾಕಾರ್ಯ ಕ್ರಮಗಳು ನಡೆಯಲಿವೆ. ಮಾ.೪ರ ಬುಧವಾರ ಸಂಜೆ ೪ ಗಂಟೆಗೆ ರಥೋತ್ಸವ ಜರುಗಲಿದೆ. ಮಾ.೫ರ ಗುರುವಾರ ದೇವೇಗೌಡನದೊಡ್ಡಿ ಗ್ರಾಮದಲ್ಲಿ ಕಾರ್ಕಹಳ್ಳಿ ಶ್ರೀ ಬಸವೇಶ್ವರ ಉತ್ಸವ ಹಾಗೂ ಮಾ.೬ರ ಶುಕ್ರವಾರ ಶ್ರೀ ಮುತ್ತುರಾಯಸ್ವಾಮಿ ಸೇವೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

” ಕಾರ್ಕಹಳ್ಳಿ ಗ್ರಾಮದಲ್ಲಿ ಮೂರ‍್ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ವನ್ನು ಅಚ್ಚುಕಟ್ಟಾಗಿ ನಡೆಸಲು ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ. ದೇವಸ್ಥಾನದ ಅಭಿವೃದ್ಧಿಗಾಗಿ ಮುಜರಾಯಿ ಇಲಾಖೆಯಿಂದ ೧೦ ಲಕ್ಷ ರೂ ಬಿಡುಗಡೆಯಾಗಿದೆ. ನನ್ನೊಂದಿಗೆ ಗ್ರಾಮದ ಯಜಮಾನರು ಕೈಜೋಡಿಸಿದ್ದಾರೆ.”

– ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯ

” ನಾನು ೧೯೯೯ರಲ್ಲಿ ಚುನಾವಣೆ ಪ್ರಚಾರಕ್ಕೆ ಬಂದಾಗ ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಸವಪ್ಪನಿಂದ ಆಶೀರ್ವಾದ ಪಡೆದುಕೊಂಡಿದ್ದೆ. ನನಗೆ ಮೊದಲ ಬಾರಿಯ ಚುನಾವಣೆಯಲ್ಲಿ ಜಯ ಸಿಕ್ಕಿತು. ನಂತರದ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದೇನೆ.”

– ಡಿ.ಸಿ.ತಮ್ಮಣ್ಣ, ಮಾಜಿ ಸಚಿವ

” ಕಾರ್ಕಹಳ್ಳಿ ಬಸವೇಶ್ವರ ಭ್ರಷ್ಟಾಚಾರಿಗಳಿಗೆ, ಕಳ್ಳಕಾಕರಿಗೆ, ಜಮೀನು ಒತ್ತುವರಿದಾರರಿಗೆ ಸಿಂಹಸ್ವಪ್ನವಾಗಿದೆ. ತನ್ನ ಮಹಿಮೆಯನ್ನು ಮೆರೆಯುತ್ತಿರುವ ಬಸವಪ್ಪ ಮಂಡ್ಯಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ಭಕ್ತರನ್ನು ಹೊಂದಿದೆ.”

– ಕಾರ್ಕಹಳ್ಳಿ ಬಸವರಾಜು, ಜಾ.ದಳ ಮುಖಂಡರು

 

 

 

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago