Andolana originals

ವರ್ಷಧಾರೆ: ಕುಡಿಯುವ ನೀರಿಗೆ ಬಾರದು ತತ್ವಾರ

ಹಳೇ ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಕೆ. ಬಿ. ರಮೇಶನಾಯಕ

ಮೈಸೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗಿದ್ದರೆ, ಅತ್ತ ಹಳೆಯ ಮೈಸೂರು ಭಾಗದ ನಾಲ್ಕು ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಅದರಿಂದ ಮುಂದಿನ ದಿನಗಳಲ್ಲಿ ಎದುರಾಗಬಹುದಾಗಿದ್ದ ಕುಡಿಯುವ ನೀರಿನ ಆತಂಕ ದೂರವಾಗಿದೆ.

ಪೂರ್ವ ಮುಂಗಾರು ಮಳೆ ಚೆನ್ನಾಗಿ ಬೀಳುತ್ತಿರುವುದ ರಿಂದ ಕೃಷಿ ಚಟುವಟಿಕೆ ಸೇರಿದಂತೆ ರಾಜ್ಯದ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎದುರಾಗಬಹುದಾಗಿದ್ದ ಕುಡಿ ಯುವ ನೀರಿನ ಸಮಸ್ಯೆ ದೂರವಾಗಿದೆ.

ಪ್ರತಿ ವರ್ಷ ಬೇಸಿಗೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬಹಳ ಬಿಸಿಲು ಮತ್ತು ಉಷ್ಣಾಂಶ ಹಾಗೂ ಮಳೆ ಇಲ್ಲದ ಕಾರಣ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಬರ ಕಾಣಿಸಿಕೊಳ್ಳುತ್ತಿತ್ತು.

ಕೊಳವೆ ಬಾವಿಗಳಲ್ಲಿ ನೀರಿಲ್ಲದೆ, ಬಾವಿಗಳಿಂದ ನೀರೆತ್ತಲು ವಿದ್ಯುತ್ ಇಲ್ಲದೆ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿತ್ತು. ಕೆರೆ ಕಟ್ಟೆಗಳಲ್ಲಿ ನೀರು ಇಂಗಿ ಹೋಗಿ ಜಾನುವಾರುಗಳಿಗೂ ಕುಡಿಯುವ ನೀರಿಗೆ ತತ್ವಾರ ಎದುರಾಗುತ್ತಿತ್ತು. ಮುಖ್ಯವಾಗಿ ಮೇವಿನ ಕೊರತೆ ಕಾಣಿಸಿಕೊಂಡು ಜಾನುವಾರುಗಳು ಬಡಕಲಾಗುತ್ತಿದ್ದವು. ಆದರೆ, ಉತ್ತಮ ಮಳೆಯಾಗುತ್ತಿರುವ ಪರಿಣಾಮವಾಗಿ ಅಲ್ಲಲ್ಲಿ ಕೆರೆಕಟ್ಟೆಗಳಿಗೆ ಸ್ವಲ್ಪ ನೀರು ಬಂದಿದೆ. ಅಷ್ಟೇ ಅಲ್ಲ, ಬಯಲಲ್ಲಿ ಮೇವು ಚಿಗುರಿ ಕುರಿ, ಮೇಕೆ, ಹಸು, ಎಮ್ಮೆ ಸೇರಿದಂತೆ ಎಲ್ಲ ಜಾನುವಾರುಗಳಿಗೂ ಹಸಿರು ದೊರೆಯುವಂತಾಗಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಹಸಿ ಮೇವು ಸಿಗುವುದೇ ಅಪರೂಪ. ಜೂನ್ ಆರಂಭದಲ್ಲಿ ಮಳೆಯಾಗಿ ಆನಂತರದಲ್ಲಿ ಹಸಿರು ಚಿಗುರಬೇಕಿತ್ತು. ಈ ಬಾರಿ ಮೇ ತಿಂಗಳಲ್ಲೇ ಜಾನುವಾರುಗಳಿಗೆ ಹಸಿ ಮೇವು ಲಭ್ಯವಾಗಿದ್ದು, ರೈತರನ್ನು ಸಂಕಷ್ಟದಿಂದ ಪಾರು ಮಾಡಿರು ವುದನ್ನು ಕಾಣಬಹುದು. ಇದರ ನಡುವೆ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ನಾಲ್ಕು ಜಲಾ ಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಭರ್ತಿ ಯಾಗುವುದಕ್ಕೆ ದಿನಗಳನ್ನು ಎಣಿಸುವಂತಾಗಿದೆ.

ಮೇ ೨ನೇ ವಾರಕ್ಕೆ ೯೦ ಅಡಿ! : ಮುಂಗಾರು ಮಳೆಯು ಜೂನ್ ೧ರಿಂದ ಪ್ರವೇಶ ಮಾಡಬೇಕಿತ್ತಾದರೂ ಮೇ ೨೮ರಿಂದಲೇ ಕಾಣಿಸಿಕೊಂಡು ನಾಲ್ಕು ದಿನ ಮುಂಚಿತ ವಾಗಿ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದರೆ, ಪೂರ್ವ ಮುಂಗಾರು ಮಳೆಯು ಚೆನ್ನಾಗಿ ಸುರಿದಿರುವ ಕಾರಣ ರೈತರ ಜೀವನಾಡಿಯಾದ ಕೃಷ್ಣರಾಜ ಸಾಗರ ಜಲಾಶಯದ ಗರಿಷ್ಟ ಮಟ್ಟ ೧೨೪. ೮ ಅಡಿಯಲ್ಲಿ ಈಗ ೯೦. ೬೮ ಅಡಿ ನೀರು ಇದ್ದು, ಕಳೆದ ವರ್ಷ ಇದೇ ಸಮಯದಲ್ಲಿ ೮೦ ಅಡಿ ನೀರು ಇತ್ತು. ಕಬಿನಿ ಜಲಾಶಯದ ಗರಿಷ್ಟ ಮಟ್ಟ ೬೫ ಅಡಿ ಇದ್ದು, ಹಾಲಿ ೪೨. ೯೪ ಅಡಿ ನೀರಿದೆ. ಕಳೆದ ವರ್ಷ ೩೮. ೧೯ ಅಡಿ ನೀರು ಇತ್ತು.

ಹಾರಂಗಿ ಜಲಾಶಯದ ಗರಿಷ್ಟ ಮಟ್ಟ ೧೨೯ ಅಡಿ ಇದ್ದು, ಈಗ ೧೦೧. ೬೫ ಅಡಿ ನೀರು ಇದ್ದರೆ, ಕಳೆದ ವರ್ಷ ೯೨. ೯೨ ಅಡಿ ಭರ್ತಿಯಾಗಿತ್ತು. ಹೇಮಾವತಿ ಜಲಾಶಯದ ನೀರಿನ ಮಟ್ಟ ೧೧೭ ಅಡಿ ಇದ್ದು, ಇಂದಿನ ಮಟ್ಟ ೯೪. ೦೮ ಅಡಿ ಇದ್ದರೆ, ಕಳೆದ ವರ್ಷ ಇದೇ ಸಮಯದಲ್ಲಿ ೭೩. ೫೫ ಅಡಿ ನೀರು ಸಂಗ್ರಹವಾಗಿತ್ತು. ಈ ನಾಲ್ಕು ಜಲಾಶಯಗಳಲ್ಲಿ ಹಿಂಗಾರು ಮಳೆಯಲ್ಲೇ ೧೦ರಿಂದ ೧೨ ಅಡಿಗಳಷ್ಟು ನೀರು ಹೆಚ್ಚಳವಾಗಿರುವುದರಿಂದ ನೀರಾ ವರಿ ಇಲಾಖೆ ಅಧಿಕಾರಿಗಳಲ್ಲಿ ಆತಂಕ ಕಡಿಮೆಯಾಗಿದೆ.

ತಮಿಳುನಾಡಿನ ಕ್ಯಾತೆಗಿಲ್ಲ ಅವಕಾಶ
ಜೂನ್ ಹೊತ್ತಲ್ಲೇ ತಮಿಳುನಾಡಿಗೆ ನೀರು ಹರಿಸುವಂತೆ ಬೇಡಿಕೆ ಇಡುವುದಕ್ಕೂ ಅವಕಾಶ ಇಲ್ಲದಂತೆ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹವಾಗಿದೆ. ಮೆಟ್ಟೂರು ಅಣೆಕಟ್ಟೆಯ ಗರಿಷ್ಟ ೧೨೦ ಅಡಿಯಲ್ಲಿ, ಈಗ ೧೦೮. ೫೨ ಅಡಿ ನೀರು ಇದ್ದು, ಕಳೆದ ವರ್ಷ ೪೯. ೭೯ ಅಡಿ ಮಾತ್ರ ನೀರಿತ್ತು. ತಮಿಳುನಾಡು ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಽಕಾರದ ಎದುರು ಅರ್ಜಿ ಸಲ್ಲಿಸಿದ್ದರಿಂದಾಗಿ ಕಬಿನಿ, ಕೆಆರ್‌ಎಸ್ ಜಲಾಶಯಗಳಿಂದ ನೀರು ಹರಿಸಲಾಗಿತ್ತು. ನಂತರ, ಕರ್ನಾಟಕದಲ್ಲಿ ವ್ಯಾಪಕ ಮಳೆಯಾದ ಪರಿಣಾಮವಾಗಿ ನಿರೀಕ್ಷೆಗೂ ಮೀರಿ ನೀರು ಹರಿದಿದ್ದರಿಂದ ಮೆಟ್ಟೂರು ಜಲಾಶಯ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

26 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

52 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

55 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago