Andolana originals

ವರ್ಷಧಾರೆ: ಕುಡಿಯುವ ನೀರಿಗೆ ಬಾರದು ತತ್ವಾರ

ಹಳೇ ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಕೆ. ಬಿ. ರಮೇಶನಾಯಕ

ಮೈಸೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗಿದ್ದರೆ, ಅತ್ತ ಹಳೆಯ ಮೈಸೂರು ಭಾಗದ ನಾಲ್ಕು ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಅದರಿಂದ ಮುಂದಿನ ದಿನಗಳಲ್ಲಿ ಎದುರಾಗಬಹುದಾಗಿದ್ದ ಕುಡಿಯುವ ನೀರಿನ ಆತಂಕ ದೂರವಾಗಿದೆ.

ಪೂರ್ವ ಮುಂಗಾರು ಮಳೆ ಚೆನ್ನಾಗಿ ಬೀಳುತ್ತಿರುವುದ ರಿಂದ ಕೃಷಿ ಚಟುವಟಿಕೆ ಸೇರಿದಂತೆ ರಾಜ್ಯದ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎದುರಾಗಬಹುದಾಗಿದ್ದ ಕುಡಿ ಯುವ ನೀರಿನ ಸಮಸ್ಯೆ ದೂರವಾಗಿದೆ.

ಪ್ರತಿ ವರ್ಷ ಬೇಸಿಗೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬಹಳ ಬಿಸಿಲು ಮತ್ತು ಉಷ್ಣಾಂಶ ಹಾಗೂ ಮಳೆ ಇಲ್ಲದ ಕಾರಣ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಬರ ಕಾಣಿಸಿಕೊಳ್ಳುತ್ತಿತ್ತು.

ಕೊಳವೆ ಬಾವಿಗಳಲ್ಲಿ ನೀರಿಲ್ಲದೆ, ಬಾವಿಗಳಿಂದ ನೀರೆತ್ತಲು ವಿದ್ಯುತ್ ಇಲ್ಲದೆ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿತ್ತು. ಕೆರೆ ಕಟ್ಟೆಗಳಲ್ಲಿ ನೀರು ಇಂಗಿ ಹೋಗಿ ಜಾನುವಾರುಗಳಿಗೂ ಕುಡಿಯುವ ನೀರಿಗೆ ತತ್ವಾರ ಎದುರಾಗುತ್ತಿತ್ತು. ಮುಖ್ಯವಾಗಿ ಮೇವಿನ ಕೊರತೆ ಕಾಣಿಸಿಕೊಂಡು ಜಾನುವಾರುಗಳು ಬಡಕಲಾಗುತ್ತಿದ್ದವು. ಆದರೆ, ಉತ್ತಮ ಮಳೆಯಾಗುತ್ತಿರುವ ಪರಿಣಾಮವಾಗಿ ಅಲ್ಲಲ್ಲಿ ಕೆರೆಕಟ್ಟೆಗಳಿಗೆ ಸ್ವಲ್ಪ ನೀರು ಬಂದಿದೆ. ಅಷ್ಟೇ ಅಲ್ಲ, ಬಯಲಲ್ಲಿ ಮೇವು ಚಿಗುರಿ ಕುರಿ, ಮೇಕೆ, ಹಸು, ಎಮ್ಮೆ ಸೇರಿದಂತೆ ಎಲ್ಲ ಜಾನುವಾರುಗಳಿಗೂ ಹಸಿರು ದೊರೆಯುವಂತಾಗಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಹಸಿ ಮೇವು ಸಿಗುವುದೇ ಅಪರೂಪ. ಜೂನ್ ಆರಂಭದಲ್ಲಿ ಮಳೆಯಾಗಿ ಆನಂತರದಲ್ಲಿ ಹಸಿರು ಚಿಗುರಬೇಕಿತ್ತು. ಈ ಬಾರಿ ಮೇ ತಿಂಗಳಲ್ಲೇ ಜಾನುವಾರುಗಳಿಗೆ ಹಸಿ ಮೇವು ಲಭ್ಯವಾಗಿದ್ದು, ರೈತರನ್ನು ಸಂಕಷ್ಟದಿಂದ ಪಾರು ಮಾಡಿರು ವುದನ್ನು ಕಾಣಬಹುದು. ಇದರ ನಡುವೆ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ನಾಲ್ಕು ಜಲಾ ಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಭರ್ತಿ ಯಾಗುವುದಕ್ಕೆ ದಿನಗಳನ್ನು ಎಣಿಸುವಂತಾಗಿದೆ.

ಮೇ ೨ನೇ ವಾರಕ್ಕೆ ೯೦ ಅಡಿ! : ಮುಂಗಾರು ಮಳೆಯು ಜೂನ್ ೧ರಿಂದ ಪ್ರವೇಶ ಮಾಡಬೇಕಿತ್ತಾದರೂ ಮೇ ೨೮ರಿಂದಲೇ ಕಾಣಿಸಿಕೊಂಡು ನಾಲ್ಕು ದಿನ ಮುಂಚಿತ ವಾಗಿ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದರೆ, ಪೂರ್ವ ಮುಂಗಾರು ಮಳೆಯು ಚೆನ್ನಾಗಿ ಸುರಿದಿರುವ ಕಾರಣ ರೈತರ ಜೀವನಾಡಿಯಾದ ಕೃಷ್ಣರಾಜ ಸಾಗರ ಜಲಾಶಯದ ಗರಿಷ್ಟ ಮಟ್ಟ ೧೨೪. ೮ ಅಡಿಯಲ್ಲಿ ಈಗ ೯೦. ೬೮ ಅಡಿ ನೀರು ಇದ್ದು, ಕಳೆದ ವರ್ಷ ಇದೇ ಸಮಯದಲ್ಲಿ ೮೦ ಅಡಿ ನೀರು ಇತ್ತು. ಕಬಿನಿ ಜಲಾಶಯದ ಗರಿಷ್ಟ ಮಟ್ಟ ೬೫ ಅಡಿ ಇದ್ದು, ಹಾಲಿ ೪೨. ೯೪ ಅಡಿ ನೀರಿದೆ. ಕಳೆದ ವರ್ಷ ೩೮. ೧೯ ಅಡಿ ನೀರು ಇತ್ತು.

ಹಾರಂಗಿ ಜಲಾಶಯದ ಗರಿಷ್ಟ ಮಟ್ಟ ೧೨೯ ಅಡಿ ಇದ್ದು, ಈಗ ೧೦೧. ೬೫ ಅಡಿ ನೀರು ಇದ್ದರೆ, ಕಳೆದ ವರ್ಷ ೯೨. ೯೨ ಅಡಿ ಭರ್ತಿಯಾಗಿತ್ತು. ಹೇಮಾವತಿ ಜಲಾಶಯದ ನೀರಿನ ಮಟ್ಟ ೧೧೭ ಅಡಿ ಇದ್ದು, ಇಂದಿನ ಮಟ್ಟ ೯೪. ೦೮ ಅಡಿ ಇದ್ದರೆ, ಕಳೆದ ವರ್ಷ ಇದೇ ಸಮಯದಲ್ಲಿ ೭೩. ೫೫ ಅಡಿ ನೀರು ಸಂಗ್ರಹವಾಗಿತ್ತು. ಈ ನಾಲ್ಕು ಜಲಾಶಯಗಳಲ್ಲಿ ಹಿಂಗಾರು ಮಳೆಯಲ್ಲೇ ೧೦ರಿಂದ ೧೨ ಅಡಿಗಳಷ್ಟು ನೀರು ಹೆಚ್ಚಳವಾಗಿರುವುದರಿಂದ ನೀರಾ ವರಿ ಇಲಾಖೆ ಅಧಿಕಾರಿಗಳಲ್ಲಿ ಆತಂಕ ಕಡಿಮೆಯಾಗಿದೆ.

ತಮಿಳುನಾಡಿನ ಕ್ಯಾತೆಗಿಲ್ಲ ಅವಕಾಶ
ಜೂನ್ ಹೊತ್ತಲ್ಲೇ ತಮಿಳುನಾಡಿಗೆ ನೀರು ಹರಿಸುವಂತೆ ಬೇಡಿಕೆ ಇಡುವುದಕ್ಕೂ ಅವಕಾಶ ಇಲ್ಲದಂತೆ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹವಾಗಿದೆ. ಮೆಟ್ಟೂರು ಅಣೆಕಟ್ಟೆಯ ಗರಿಷ್ಟ ೧೨೦ ಅಡಿಯಲ್ಲಿ, ಈಗ ೧೦೮. ೫೨ ಅಡಿ ನೀರು ಇದ್ದು, ಕಳೆದ ವರ್ಷ ೪೯. ೭೯ ಅಡಿ ಮಾತ್ರ ನೀರಿತ್ತು. ತಮಿಳುನಾಡು ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಽಕಾರದ ಎದುರು ಅರ್ಜಿ ಸಲ್ಲಿಸಿದ್ದರಿಂದಾಗಿ ಕಬಿನಿ, ಕೆಆರ್‌ಎಸ್ ಜಲಾಶಯಗಳಿಂದ ನೀರು ಹರಿಸಲಾಗಿತ್ತು. ನಂತರ, ಕರ್ನಾಟಕದಲ್ಲಿ ವ್ಯಾಪಕ ಮಳೆಯಾದ ಪರಿಣಾಮವಾಗಿ ನಿರೀಕ್ಷೆಗೂ ಮೀರಿ ನೀರು ಹರಿದಿದ್ದರಿಂದ ಮೆಟ್ಟೂರು ಜಲಾಶಯ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

3 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

3 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

3 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

3 hours ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

4 hours ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

4 hours ago