Andolana originals

ವರ್ಷಧಾರೆ: ಕುಡಿಯುವ ನೀರಿಗೆ ಬಾರದು ತತ್ವಾರ

ಹಳೇ ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಕೆ. ಬಿ. ರಮೇಶನಾಯಕ

ಮೈಸೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗಿದ್ದರೆ, ಅತ್ತ ಹಳೆಯ ಮೈಸೂರು ಭಾಗದ ನಾಲ್ಕು ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಅದರಿಂದ ಮುಂದಿನ ದಿನಗಳಲ್ಲಿ ಎದುರಾಗಬಹುದಾಗಿದ್ದ ಕುಡಿಯುವ ನೀರಿನ ಆತಂಕ ದೂರವಾಗಿದೆ.

ಪೂರ್ವ ಮುಂಗಾರು ಮಳೆ ಚೆನ್ನಾಗಿ ಬೀಳುತ್ತಿರುವುದ ರಿಂದ ಕೃಷಿ ಚಟುವಟಿಕೆ ಸೇರಿದಂತೆ ರಾಜ್ಯದ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎದುರಾಗಬಹುದಾಗಿದ್ದ ಕುಡಿ ಯುವ ನೀರಿನ ಸಮಸ್ಯೆ ದೂರವಾಗಿದೆ.

ಪ್ರತಿ ವರ್ಷ ಬೇಸಿಗೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬಹಳ ಬಿಸಿಲು ಮತ್ತು ಉಷ್ಣಾಂಶ ಹಾಗೂ ಮಳೆ ಇಲ್ಲದ ಕಾರಣ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಬರ ಕಾಣಿಸಿಕೊಳ್ಳುತ್ತಿತ್ತು.

ಕೊಳವೆ ಬಾವಿಗಳಲ್ಲಿ ನೀರಿಲ್ಲದೆ, ಬಾವಿಗಳಿಂದ ನೀರೆತ್ತಲು ವಿದ್ಯುತ್ ಇಲ್ಲದೆ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿತ್ತು. ಕೆರೆ ಕಟ್ಟೆಗಳಲ್ಲಿ ನೀರು ಇಂಗಿ ಹೋಗಿ ಜಾನುವಾರುಗಳಿಗೂ ಕುಡಿಯುವ ನೀರಿಗೆ ತತ್ವಾರ ಎದುರಾಗುತ್ತಿತ್ತು. ಮುಖ್ಯವಾಗಿ ಮೇವಿನ ಕೊರತೆ ಕಾಣಿಸಿಕೊಂಡು ಜಾನುವಾರುಗಳು ಬಡಕಲಾಗುತ್ತಿದ್ದವು. ಆದರೆ, ಉತ್ತಮ ಮಳೆಯಾಗುತ್ತಿರುವ ಪರಿಣಾಮವಾಗಿ ಅಲ್ಲಲ್ಲಿ ಕೆರೆಕಟ್ಟೆಗಳಿಗೆ ಸ್ವಲ್ಪ ನೀರು ಬಂದಿದೆ. ಅಷ್ಟೇ ಅಲ್ಲ, ಬಯಲಲ್ಲಿ ಮೇವು ಚಿಗುರಿ ಕುರಿ, ಮೇಕೆ, ಹಸು, ಎಮ್ಮೆ ಸೇರಿದಂತೆ ಎಲ್ಲ ಜಾನುವಾರುಗಳಿಗೂ ಹಸಿರು ದೊರೆಯುವಂತಾಗಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಹಸಿ ಮೇವು ಸಿಗುವುದೇ ಅಪರೂಪ. ಜೂನ್ ಆರಂಭದಲ್ಲಿ ಮಳೆಯಾಗಿ ಆನಂತರದಲ್ಲಿ ಹಸಿರು ಚಿಗುರಬೇಕಿತ್ತು. ಈ ಬಾರಿ ಮೇ ತಿಂಗಳಲ್ಲೇ ಜಾನುವಾರುಗಳಿಗೆ ಹಸಿ ಮೇವು ಲಭ್ಯವಾಗಿದ್ದು, ರೈತರನ್ನು ಸಂಕಷ್ಟದಿಂದ ಪಾರು ಮಾಡಿರು ವುದನ್ನು ಕಾಣಬಹುದು. ಇದರ ನಡುವೆ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ನಾಲ್ಕು ಜಲಾ ಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಭರ್ತಿ ಯಾಗುವುದಕ್ಕೆ ದಿನಗಳನ್ನು ಎಣಿಸುವಂತಾಗಿದೆ.

ಮೇ ೨ನೇ ವಾರಕ್ಕೆ ೯೦ ಅಡಿ! : ಮುಂಗಾರು ಮಳೆಯು ಜೂನ್ ೧ರಿಂದ ಪ್ರವೇಶ ಮಾಡಬೇಕಿತ್ತಾದರೂ ಮೇ ೨೮ರಿಂದಲೇ ಕಾಣಿಸಿಕೊಂಡು ನಾಲ್ಕು ದಿನ ಮುಂಚಿತ ವಾಗಿ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದರೆ, ಪೂರ್ವ ಮುಂಗಾರು ಮಳೆಯು ಚೆನ್ನಾಗಿ ಸುರಿದಿರುವ ಕಾರಣ ರೈತರ ಜೀವನಾಡಿಯಾದ ಕೃಷ್ಣರಾಜ ಸಾಗರ ಜಲಾಶಯದ ಗರಿಷ್ಟ ಮಟ್ಟ ೧೨೪. ೮ ಅಡಿಯಲ್ಲಿ ಈಗ ೯೦. ೬೮ ಅಡಿ ನೀರು ಇದ್ದು, ಕಳೆದ ವರ್ಷ ಇದೇ ಸಮಯದಲ್ಲಿ ೮೦ ಅಡಿ ನೀರು ಇತ್ತು. ಕಬಿನಿ ಜಲಾಶಯದ ಗರಿಷ್ಟ ಮಟ್ಟ ೬೫ ಅಡಿ ಇದ್ದು, ಹಾಲಿ ೪೨. ೯೪ ಅಡಿ ನೀರಿದೆ. ಕಳೆದ ವರ್ಷ ೩೮. ೧೯ ಅಡಿ ನೀರು ಇತ್ತು.

ಹಾರಂಗಿ ಜಲಾಶಯದ ಗರಿಷ್ಟ ಮಟ್ಟ ೧೨೯ ಅಡಿ ಇದ್ದು, ಈಗ ೧೦೧. ೬೫ ಅಡಿ ನೀರು ಇದ್ದರೆ, ಕಳೆದ ವರ್ಷ ೯೨. ೯೨ ಅಡಿ ಭರ್ತಿಯಾಗಿತ್ತು. ಹೇಮಾವತಿ ಜಲಾಶಯದ ನೀರಿನ ಮಟ್ಟ ೧೧೭ ಅಡಿ ಇದ್ದು, ಇಂದಿನ ಮಟ್ಟ ೯೪. ೦೮ ಅಡಿ ಇದ್ದರೆ, ಕಳೆದ ವರ್ಷ ಇದೇ ಸಮಯದಲ್ಲಿ ೭೩. ೫೫ ಅಡಿ ನೀರು ಸಂಗ್ರಹವಾಗಿತ್ತು. ಈ ನಾಲ್ಕು ಜಲಾಶಯಗಳಲ್ಲಿ ಹಿಂಗಾರು ಮಳೆಯಲ್ಲೇ ೧೦ರಿಂದ ೧೨ ಅಡಿಗಳಷ್ಟು ನೀರು ಹೆಚ್ಚಳವಾಗಿರುವುದರಿಂದ ನೀರಾ ವರಿ ಇಲಾಖೆ ಅಧಿಕಾರಿಗಳಲ್ಲಿ ಆತಂಕ ಕಡಿಮೆಯಾಗಿದೆ.

ತಮಿಳುನಾಡಿನ ಕ್ಯಾತೆಗಿಲ್ಲ ಅವಕಾಶ
ಜೂನ್ ಹೊತ್ತಲ್ಲೇ ತಮಿಳುನಾಡಿಗೆ ನೀರು ಹರಿಸುವಂತೆ ಬೇಡಿಕೆ ಇಡುವುದಕ್ಕೂ ಅವಕಾಶ ಇಲ್ಲದಂತೆ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹವಾಗಿದೆ. ಮೆಟ್ಟೂರು ಅಣೆಕಟ್ಟೆಯ ಗರಿಷ್ಟ ೧೨೦ ಅಡಿಯಲ್ಲಿ, ಈಗ ೧೦೮. ೫೨ ಅಡಿ ನೀರು ಇದ್ದು, ಕಳೆದ ವರ್ಷ ೪೯. ೭೯ ಅಡಿ ಮಾತ್ರ ನೀರಿತ್ತು. ತಮಿಳುನಾಡು ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಽಕಾರದ ಎದುರು ಅರ್ಜಿ ಸಲ್ಲಿಸಿದ್ದರಿಂದಾಗಿ ಕಬಿನಿ, ಕೆಆರ್‌ಎಸ್ ಜಲಾಶಯಗಳಿಂದ ನೀರು ಹರಿಸಲಾಗಿತ್ತು. ನಂತರ, ಕರ್ನಾಟಕದಲ್ಲಿ ವ್ಯಾಪಕ ಮಳೆಯಾದ ಪರಿಣಾಮವಾಗಿ ನಿರೀಕ್ಷೆಗೂ ಮೀರಿ ನೀರು ಹರಿದಿದ್ದರಿಂದ ಮೆಟ್ಟೂರು ಜಲಾಶಯ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago