Andolana originals

ಮೃಗಾಲಯದ ಜಿಂಕೆ, ಕೃಷ್ಣ ಮೃಗಗಳ ಮೇಲೆ ನಿಗಾ!

ಮೈಸೂರು: ಬೆಳಗಾವಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿನ ಕೃಷ್ಣಮೃಗಗಳ ದಾರುಣ ಸಾವು ಪ್ರಕರಣ ರಾಜ್ಯದ ಇತರ ಮೃಗಾಲಯಗಳನ್ನು ಬೆಚ್ಚಿ ಬೀಳಿಸಿರುವ ಬೆನ್ನಲ್ಲಿಯೇ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಂಕೆ ಮತ್ತು ಕೃಷ್ಣಮೃಗಗಳ ರಕ್ಷಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

‘ಹೆಮೊರಾಜಿಕ್ ಸೆಪ್ಟಿ ಸೆಮಿಯಾ’(ಗಂಟಲು ಬೇನೆ-ಗಳಲೆ ರೋಗ) ಎಂಬ ಬ್ಯಾಕ್ಟೀರಿಯಾಸೋಂಕಿನಿಂದ ೩೧ ಕೃಷ್ಣಮೃಗಗಳು ಮೃತ ಪಟ್ಟಿದ್ದವು. ಉಳಿದವುಗಳನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಮೈಸೂರು ಮೃಗಾಲಯದ ಪ್ರಾಣಿಗಳ ಮೇಲೆ ತೀವ್ರ ನಿಗಾವಿರಿಸಿ ಅಗತ್ಯ ಮುನ್ನೆಚ್ಚರಿಕೆಗೆ ಆಡಳಿತ ಮಂಡಳಿ ಸಿದ್ಧತೆ ನಡೆಸಿದೆ.

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸದ್ಯ ೪೬ ಕೃಷ್ಣಮೃಗಗಳು, ೭೨ ಜಿಂಕೆಗಳಿವೆ.ಹಲವು ಗರ್ಭಿಣಿ ಜಿಂಕೆಗಳೂ ಇದ್ದು, ಮರಿ ಹಾಕುವ ಹಂತದಲ್ಲಿವೆ. ಇಂತಹ ಸಂದರ್ಭದಲ್ಲಿ ‘ಪ್ಯಾಸ್ಚುರೆಲ್ಲಾ ಮಲ್ಟೋಸಿಡಾ’(ಗಂಟಲು ಬೇನೆ-ಗಳಲೆ ರೋಗ) ಎಂಬ ಬ್ಯಾಕ್ಟೀರಿಯಾ ಸೋಂಕು ಅಪ್ಪಳಿಸಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸ್ಯಾನಿಟೈಸರ್, ಆಂಟಿ ಬಯೋಟಿಕ್ ಚುಚ್ಚುಮದ್ದು ನೀಡುತ್ತಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಏನೇನು ಮುನ್ನೆಚ್ಚರಿಕೆ ಕ್ರಮಗಳು?” 

* ಮೃಗಾಲಯದ ಸಿಬ್ಬಂದಿ,ನೌಕರರು, ವನ್ಯಜೀವಿ ವೈದ್ಯರು ಪ್ರಾಣಿಗಳ ಚಲನ ವಲನಗಳ ಮೇಲೆ ನಿಗಾವಹಿಸಿದ್ದಾರೆ.

* ಪ್ರಾಣಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾದರೂ ಚಿಕಿತ್ಸೆ ಕೊಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

* ವಿಶೇಷವಾಗಿ ಜಿಂಕೆ ಮತ್ತು ಕೃಷ್ಣಮೃಗಗಳಿಗೆ ಆಂಟಿ ಬಯೋಟಿಕ್ ಚುಚ್ಚುಮದ್ದು ನೀಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

* ಮೃಗಾಲಯದ ಎಲ್ಲಾ ಪ್ರಾಣಿಗಳ ಬೋನುಗಳಿಗೆ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯವೂ ನಡೆಯುತ್ತಿದೆ.

” ಮೃಗಾಲಯದಲ್ಲಿ ನಮ್ಮ ಸಿಬ್ಬಂದಿ ಎಲ್ಲ ಪ್ರಾಣಿಗಳ ಮೇಲೂ ನಿಗಾವಹಿಸಿದ್ದಾರೆ. ಕೃಷ್ಣಮೃಗಗಳು, ಜಿಂಕೆ, ಕಾಡೆಮ್ಮೆ, ಆನೆಗಳು, ನೀರಾನೆಗಳ ಮೇಲೆ ಹೆಚ್ಚಿನ ನಿಗಾವಹಿಸಿ ಆಂಟಿ ಬಯೋಟಿಕ್ ಚುಚ್ಚುಮದ್ದು ನೀಡಲಾಗುತ್ತಿದೆ. ಆತಂಕಪಡುವ ಅಗತ್ಯವಿಲ್ಲ.”

-ಅನುಷಾ, ಕಾರ್ಯನಿರ್ವಾಹಕ ನಿರ್ದೇಶಕಿ, ಚಾಮರಾಜೇಂದ್ರ ಮೃಗಾಲಯ

” ಗಂಟಲು ಬೇನೆ-ಗಳಲೆ ರೋಗ ದನ, ಎಮ್ಮೆ, ಮೇಕೆ ಹಾಗೂ ಕುರಿಗಳಲ್ಲಿ ಹೆಚ್ಚು ಕಂಡುಬರುತ್ತದೆ. ವನ್ಯಜೀವಿಗಳಲ್ಲಿ ಕೃಷ್ಣಮೃಗ, ಜಿಂಕೆ, ಕಾಡೆಮ್ಮೆ ಹಾಗೂ ಆನೆಗಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಇವುಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಆದರೆ, ಮೃಗಾಲಯದ ಪ್ರಾಣಿಗಳಿಗೆ ಚುಚ್ಚುಮದ್ದು ನೀಡುವುದರಿಂದ ವೈರಸ್ ಹೆಚ್ಚು ಪರಿಣಾಮ ಬೀರುವುದಿಲ್ಲ. ಆದರೂ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಪಶುವೈದ್ಯ ಡಾ.ನಾಗರಾಜು ಮಾಹಿತಿ ನೀಡಿದರು.”

ಅರಣ್ಯದಂಚಿನಲ್ಲಿ ಹೆಚ್ಚು ಜಾಗೃತಿ ಮುಖ್ಯ: 

ಗಳಲೆ ರೋಗವು ಜಾನುವಾರುಗಳಲ್ಲಿ ಹೆಚ್ಚು ಕಂಡುಬರುವ ಹಿನ್ನೆಲೆಯಲ್ಲಿ ಜಾನುವಾರುಗಳ ಸಾಕಣೆಯಲ್ಲಿ ತೊಡಗಿರುವವರು ಹೆಚ್ಚಿನ ನಿಗಾವಹಿಸಬೇಕು. ಅದರಲ್ಲಿಯೂ ಕಾಡಂಚಿನ ಪ್ರದೇಶದಲ್ಲಿರುವ ಗ್ರಾಮಗಳಲ್ಲಿನ ರೈತರು ತಮ್ಮ ಜಾನುವಾರುಗಳಿಗೆ ವ್ಯಾಕ್ಸಿನ್ ಮಾಡಿಸಿಕೊಳ್ಳಬೇಕು. ಇದರಿಂದವನ್ಯಜೀವಿಗಳು ಮತ್ತು ಜಾನುವಾರುಗಳಿಗೆ ತಗಲುವ ರೋಗವನ್ನು ತಡೆಗಟ್ಟಬಹುದಾಗಿದೆ ಎಂದು ಡಾ.ನಾಗರಾಜು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

9 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

10 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

10 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

10 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

10 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

10 hours ago