Andolana originals

ಮೃಗಾಲಯದ ಜಿಂಕೆ, ಕೃಷ್ಣ ಮೃಗಗಳ ಮೇಲೆ ನಿಗಾ!

ಮೈಸೂರು: ಬೆಳಗಾವಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿನ ಕೃಷ್ಣಮೃಗಗಳ ದಾರುಣ ಸಾವು ಪ್ರಕರಣ ರಾಜ್ಯದ ಇತರ ಮೃಗಾಲಯಗಳನ್ನು ಬೆಚ್ಚಿ ಬೀಳಿಸಿರುವ ಬೆನ್ನಲ್ಲಿಯೇ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಂಕೆ ಮತ್ತು ಕೃಷ್ಣಮೃಗಗಳ ರಕ್ಷಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

‘ಹೆಮೊರಾಜಿಕ್ ಸೆಪ್ಟಿ ಸೆಮಿಯಾ’(ಗಂಟಲು ಬೇನೆ-ಗಳಲೆ ರೋಗ) ಎಂಬ ಬ್ಯಾಕ್ಟೀರಿಯಾಸೋಂಕಿನಿಂದ ೩೧ ಕೃಷ್ಣಮೃಗಗಳು ಮೃತ ಪಟ್ಟಿದ್ದವು. ಉಳಿದವುಗಳನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಮೈಸೂರು ಮೃಗಾಲಯದ ಪ್ರಾಣಿಗಳ ಮೇಲೆ ತೀವ್ರ ನಿಗಾವಿರಿಸಿ ಅಗತ್ಯ ಮುನ್ನೆಚ್ಚರಿಕೆಗೆ ಆಡಳಿತ ಮಂಡಳಿ ಸಿದ್ಧತೆ ನಡೆಸಿದೆ.

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸದ್ಯ ೪೬ ಕೃಷ್ಣಮೃಗಗಳು, ೭೨ ಜಿಂಕೆಗಳಿವೆ.ಹಲವು ಗರ್ಭಿಣಿ ಜಿಂಕೆಗಳೂ ಇದ್ದು, ಮರಿ ಹಾಕುವ ಹಂತದಲ್ಲಿವೆ. ಇಂತಹ ಸಂದರ್ಭದಲ್ಲಿ ‘ಪ್ಯಾಸ್ಚುರೆಲ್ಲಾ ಮಲ್ಟೋಸಿಡಾ’(ಗಂಟಲು ಬೇನೆ-ಗಳಲೆ ರೋಗ) ಎಂಬ ಬ್ಯಾಕ್ಟೀರಿಯಾ ಸೋಂಕು ಅಪ್ಪಳಿಸಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸ್ಯಾನಿಟೈಸರ್, ಆಂಟಿ ಬಯೋಟಿಕ್ ಚುಚ್ಚುಮದ್ದು ನೀಡುತ್ತಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಏನೇನು ಮುನ್ನೆಚ್ಚರಿಕೆ ಕ್ರಮಗಳು?” 

* ಮೃಗಾಲಯದ ಸಿಬ್ಬಂದಿ,ನೌಕರರು, ವನ್ಯಜೀವಿ ವೈದ್ಯರು ಪ್ರಾಣಿಗಳ ಚಲನ ವಲನಗಳ ಮೇಲೆ ನಿಗಾವಹಿಸಿದ್ದಾರೆ.

* ಪ್ರಾಣಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾದರೂ ಚಿಕಿತ್ಸೆ ಕೊಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

* ವಿಶೇಷವಾಗಿ ಜಿಂಕೆ ಮತ್ತು ಕೃಷ್ಣಮೃಗಗಳಿಗೆ ಆಂಟಿ ಬಯೋಟಿಕ್ ಚುಚ್ಚುಮದ್ದು ನೀಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

* ಮೃಗಾಲಯದ ಎಲ್ಲಾ ಪ್ರಾಣಿಗಳ ಬೋನುಗಳಿಗೆ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯವೂ ನಡೆಯುತ್ತಿದೆ.

” ಮೃಗಾಲಯದಲ್ಲಿ ನಮ್ಮ ಸಿಬ್ಬಂದಿ ಎಲ್ಲ ಪ್ರಾಣಿಗಳ ಮೇಲೂ ನಿಗಾವಹಿಸಿದ್ದಾರೆ. ಕೃಷ್ಣಮೃಗಗಳು, ಜಿಂಕೆ, ಕಾಡೆಮ್ಮೆ, ಆನೆಗಳು, ನೀರಾನೆಗಳ ಮೇಲೆ ಹೆಚ್ಚಿನ ನಿಗಾವಹಿಸಿ ಆಂಟಿ ಬಯೋಟಿಕ್ ಚುಚ್ಚುಮದ್ದು ನೀಡಲಾಗುತ್ತಿದೆ. ಆತಂಕಪಡುವ ಅಗತ್ಯವಿಲ್ಲ.”

-ಅನುಷಾ, ಕಾರ್ಯನಿರ್ವಾಹಕ ನಿರ್ದೇಶಕಿ, ಚಾಮರಾಜೇಂದ್ರ ಮೃಗಾಲಯ

” ಗಂಟಲು ಬೇನೆ-ಗಳಲೆ ರೋಗ ದನ, ಎಮ್ಮೆ, ಮೇಕೆ ಹಾಗೂ ಕುರಿಗಳಲ್ಲಿ ಹೆಚ್ಚು ಕಂಡುಬರುತ್ತದೆ. ವನ್ಯಜೀವಿಗಳಲ್ಲಿ ಕೃಷ್ಣಮೃಗ, ಜಿಂಕೆ, ಕಾಡೆಮ್ಮೆ ಹಾಗೂ ಆನೆಗಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಇವುಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಆದರೆ, ಮೃಗಾಲಯದ ಪ್ರಾಣಿಗಳಿಗೆ ಚುಚ್ಚುಮದ್ದು ನೀಡುವುದರಿಂದ ವೈರಸ್ ಹೆಚ್ಚು ಪರಿಣಾಮ ಬೀರುವುದಿಲ್ಲ. ಆದರೂ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಪಶುವೈದ್ಯ ಡಾ.ನಾಗರಾಜು ಮಾಹಿತಿ ನೀಡಿದರು.”

ಅರಣ್ಯದಂಚಿನಲ್ಲಿ ಹೆಚ್ಚು ಜಾಗೃತಿ ಮುಖ್ಯ: 

ಗಳಲೆ ರೋಗವು ಜಾನುವಾರುಗಳಲ್ಲಿ ಹೆಚ್ಚು ಕಂಡುಬರುವ ಹಿನ್ನೆಲೆಯಲ್ಲಿ ಜಾನುವಾರುಗಳ ಸಾಕಣೆಯಲ್ಲಿ ತೊಡಗಿರುವವರು ಹೆಚ್ಚಿನ ನಿಗಾವಹಿಸಬೇಕು. ಅದರಲ್ಲಿಯೂ ಕಾಡಂಚಿನ ಪ್ರದೇಶದಲ್ಲಿರುವ ಗ್ರಾಮಗಳಲ್ಲಿನ ರೈತರು ತಮ್ಮ ಜಾನುವಾರುಗಳಿಗೆ ವ್ಯಾಕ್ಸಿನ್ ಮಾಡಿಸಿಕೊಳ್ಳಬೇಕು. ಇದರಿಂದವನ್ಯಜೀವಿಗಳು ಮತ್ತು ಜಾನುವಾರುಗಳಿಗೆ ತಗಲುವ ರೋಗವನ್ನು ತಡೆಗಟ್ಟಬಹುದಾಗಿದೆ ಎಂದು ಡಾ.ನಾಗರಾಜು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago