Andolana originals

ಕಿಕ್ಕೇರಿ:ಕೆಸರು ಗದ್ದೆಯಂತಾದ ಅಮಾನಿ ಕೆರೆ ಏರಿ

ಕಿಕ್ಕೇರಿ: ಪಟ್ಟಣದಿಂದ ಸೊಳ್ಳೇಪುರ, ಕಳ್ಳನಕೆರೆ, ಕುಂದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿಕ್ಕೇರಿ ಗ್ರಾಮದ ಅಮಾನಿಕೆರೆ ಏರಿ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಜನ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಏರಿ ರಸ್ತೆಯ ಮೂಲಕ ದಿನ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಾಲಾ ವಾಹನಗಳು, ಹಾಲಿನ ವಾಹನ, ಬೈಕ್ ಸಾವಾರರು ಸಂಚರಿಸುತ್ತಾರೆ. ಅಮಾನಿ ಕೆರೆ ಏರಿಯ ತುಂಬಾ ಹೊಂಡಗಳು ಬಿದ್ದಿವೆ. ಜೊತೆಗೆ ಏರಿಯ ಬದಿಯಲ್ಲಿ ಬೆಳೆದು ನಿಂತಿರುವ ಜಂಗಲ್ನಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಒಂದೆರಡು ತಿಂಗಳ ಹಿಂದೆ ಹೇಮಾವತಿ ಇಲಾಖೆಯಿಂದ ಜಂಗಲ್ ಕ್ಲೀನ್ ಮಾಡುವುದಾಗಿ ಕಿಕ್ಕೇರಿ ಕೆರೆ ಕೋಡಿ ಸಮೀಪ ಮಾತ್ರ ನೆಪ ಮಾತ್ರಕ್ಕೆ ೨೦ ಮೀಟರ್ ನಷ್ಟು
ಜಂಗಲ್ ಕ್ಲೀನ್ ಮಾಡಿ, ಸಂಪೂರ್ಣವಾಗಿ ಜಂಗಲ್ ಕ್ಲೀನ್ ಮಾಡಿದ್ದೇವೆ ಎಂದು ಹೇಮಾವತಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿ ಬಿಲ್ ಪಡೆದುಕೊಂಡಿದ್ದಾರೆ ಎಂದು ಸೊಳ್ಳೇಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

ಒಂದು ಮಳೆಯಾದರೂ ಸಾಕು ಕೆರೆ ಏರಿ ಕೆಸರಿನ ಗದ್ದೆಯಾಗಿ ಮಾರ್ಪಡುತ್ತದೆ. ೧.೫ ಕಿಲೋಮೀಟರ್ ಇರುವ ಕೆರೆ ಏರಿಯ ಎರಡೂ ಬದಿ ತಡೆಗೋಡೆ ನಿರ್ಮಾಣವಾಗಿಲ್ಲ.
ಕೆಸರಿನೀಂದ ಕೂಡಿದ ರಸ್ತೆಯಲ್ಲಿ ಸರ್ಕಸ್ ಮಾಡಿಕೊಂಡು ವಾಹನ ಚಾಲನೆ ಮಾಡಬೇಕಾದ ಸ್ಥಿತಿ ವಾಹನ ಸವಾರರಿಗೆ ಎದುರಾಗಿದೆ. ಒಂದು ವೇಳೆ ಆಯ ತಪ್ಪಿ ಬಿದ್ದರೆ ಪ್ರಾಣಕ್ಕೆ ಕುತ್ತು ನಿಶ್ಚಿತ. ಮಳೆ ಬಂದ ಸಂದರ್ಭದಲ್ಲಿ ಕೆರೆ ಏರಿಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಸಾಕಷ್ಟು ನಡೆದಿವೆ. ಈ ಏರಿ ಮೇಲೆಶಾಲಾ ವಾಹನಗಳು ಸಂಚರಿಸುತ್ತವೆ. ಹಾಗಾಗಿ ಅನಾಹುತ ನಡೆಯುವ ಮುನ್ನ ಜನಪ್ರತಿನಿಧಿಗಳು, ಸಂಬಂಧ ಪಟ್ಟ ಹೇಮಾವತಿ ಇಲಾಖೆ ಕೂಡಲೇ ಕೆರೆ ಏರಿಯನ್ನು ದುರಸ್ತಿಪಡಿಸಿ ರಸ್ತೆಗೆ ಡಾಂಬರೀಕರಣ ಮಾಡಬೇಕು ಎಂದು ಸೊಳ್ಳೇಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಲ್ಲದೆ, ಈ ಏರಿಯ ಮೇಲೆ ಸಂಚರಿಸುವಾಗ ಯಾರಿಗಾದರೂ ಪ್ರಾಣಾಪಾಯವಾದರೆ ಸಂಬಂಧಪಟ್ಟ ಇಲಾಖೆಯವರೆ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.

-ಮಹೇಶ್ ಕಿಕ್ಕೇರಿ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago