Andolana originals

ಕಿಕ್ಕೇರಿ:ಕೆಸರು ಗದ್ದೆಯಂತಾದ ಅಮಾನಿ ಕೆರೆ ಏರಿ

ಕಿಕ್ಕೇರಿ: ಪಟ್ಟಣದಿಂದ ಸೊಳ್ಳೇಪುರ, ಕಳ್ಳನಕೆರೆ, ಕುಂದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿಕ್ಕೇರಿ ಗ್ರಾಮದ ಅಮಾನಿಕೆರೆ ಏರಿ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಜನ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಏರಿ ರಸ್ತೆಯ ಮೂಲಕ ದಿನ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಾಲಾ ವಾಹನಗಳು, ಹಾಲಿನ ವಾಹನ, ಬೈಕ್ ಸಾವಾರರು ಸಂಚರಿಸುತ್ತಾರೆ. ಅಮಾನಿ ಕೆರೆ ಏರಿಯ ತುಂಬಾ ಹೊಂಡಗಳು ಬಿದ್ದಿವೆ. ಜೊತೆಗೆ ಏರಿಯ ಬದಿಯಲ್ಲಿ ಬೆಳೆದು ನಿಂತಿರುವ ಜಂಗಲ್ನಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಒಂದೆರಡು ತಿಂಗಳ ಹಿಂದೆ ಹೇಮಾವತಿ ಇಲಾಖೆಯಿಂದ ಜಂಗಲ್ ಕ್ಲೀನ್ ಮಾಡುವುದಾಗಿ ಕಿಕ್ಕೇರಿ ಕೆರೆ ಕೋಡಿ ಸಮೀಪ ಮಾತ್ರ ನೆಪ ಮಾತ್ರಕ್ಕೆ ೨೦ ಮೀಟರ್ ನಷ್ಟು
ಜಂಗಲ್ ಕ್ಲೀನ್ ಮಾಡಿ, ಸಂಪೂರ್ಣವಾಗಿ ಜಂಗಲ್ ಕ್ಲೀನ್ ಮಾಡಿದ್ದೇವೆ ಎಂದು ಹೇಮಾವತಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿ ಬಿಲ್ ಪಡೆದುಕೊಂಡಿದ್ದಾರೆ ಎಂದು ಸೊಳ್ಳೇಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

ಒಂದು ಮಳೆಯಾದರೂ ಸಾಕು ಕೆರೆ ಏರಿ ಕೆಸರಿನ ಗದ್ದೆಯಾಗಿ ಮಾರ್ಪಡುತ್ತದೆ. ೧.೫ ಕಿಲೋಮೀಟರ್ ಇರುವ ಕೆರೆ ಏರಿಯ ಎರಡೂ ಬದಿ ತಡೆಗೋಡೆ ನಿರ್ಮಾಣವಾಗಿಲ್ಲ.
ಕೆಸರಿನೀಂದ ಕೂಡಿದ ರಸ್ತೆಯಲ್ಲಿ ಸರ್ಕಸ್ ಮಾಡಿಕೊಂಡು ವಾಹನ ಚಾಲನೆ ಮಾಡಬೇಕಾದ ಸ್ಥಿತಿ ವಾಹನ ಸವಾರರಿಗೆ ಎದುರಾಗಿದೆ. ಒಂದು ವೇಳೆ ಆಯ ತಪ್ಪಿ ಬಿದ್ದರೆ ಪ್ರಾಣಕ್ಕೆ ಕುತ್ತು ನಿಶ್ಚಿತ. ಮಳೆ ಬಂದ ಸಂದರ್ಭದಲ್ಲಿ ಕೆರೆ ಏರಿಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಸಾಕಷ್ಟು ನಡೆದಿವೆ. ಈ ಏರಿ ಮೇಲೆಶಾಲಾ ವಾಹನಗಳು ಸಂಚರಿಸುತ್ತವೆ. ಹಾಗಾಗಿ ಅನಾಹುತ ನಡೆಯುವ ಮುನ್ನ ಜನಪ್ರತಿನಿಧಿಗಳು, ಸಂಬಂಧ ಪಟ್ಟ ಹೇಮಾವತಿ ಇಲಾಖೆ ಕೂಡಲೇ ಕೆರೆ ಏರಿಯನ್ನು ದುರಸ್ತಿಪಡಿಸಿ ರಸ್ತೆಗೆ ಡಾಂಬರೀಕರಣ ಮಾಡಬೇಕು ಎಂದು ಸೊಳ್ಳೇಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಲ್ಲದೆ, ಈ ಏರಿಯ ಮೇಲೆ ಸಂಚರಿಸುವಾಗ ಯಾರಿಗಾದರೂ ಪ್ರಾಣಾಪಾಯವಾದರೆ ಸಂಬಂಧಪಟ್ಟ ಇಲಾಖೆಯವರೆ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.

-ಮಹೇಶ್ ಕಿಕ್ಕೇರಿ

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago