ಕಿಕ್ಕೇರಿ: ಪಟ್ಟಣದಿಂದ ಸೊಳ್ಳೇಪುರ, ಕಳ್ಳನಕೆರೆ, ಕುಂದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿಕ್ಕೇರಿ ಗ್ರಾಮದ ಅಮಾನಿಕೆರೆ ಏರಿ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಜನ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಏರಿ ರಸ್ತೆಯ ಮೂಲಕ ದಿನ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಾಲಾ ವಾಹನಗಳು, ಹಾಲಿನ ವಾಹನ, ಬೈಕ್ ಸಾವಾರರು ಸಂಚರಿಸುತ್ತಾರೆ. ಅಮಾನಿ ಕೆರೆ ಏರಿಯ ತುಂಬಾ ಹೊಂಡಗಳು ಬಿದ್ದಿವೆ. ಜೊತೆಗೆ ಏರಿಯ ಬದಿಯಲ್ಲಿ ಬೆಳೆದು ನಿಂತಿರುವ ಜಂಗಲ್ನಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.
ಒಂದೆರಡು ತಿಂಗಳ ಹಿಂದೆ ಹೇಮಾವತಿ ಇಲಾಖೆಯಿಂದ ಜಂಗಲ್ ಕ್ಲೀನ್ ಮಾಡುವುದಾಗಿ ಕಿಕ್ಕೇರಿ ಕೆರೆ ಕೋಡಿ ಸಮೀಪ ಮಾತ್ರ ನೆಪ ಮಾತ್ರಕ್ಕೆ ೨೦ ಮೀಟರ್ ನಷ್ಟು
ಜಂಗಲ್ ಕ್ಲೀನ್ ಮಾಡಿ, ಸಂಪೂರ್ಣವಾಗಿ ಜಂಗಲ್ ಕ್ಲೀನ್ ಮಾಡಿದ್ದೇವೆ ಎಂದು ಹೇಮಾವತಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿ ಬಿಲ್ ಪಡೆದುಕೊಂಡಿದ್ದಾರೆ ಎಂದು ಸೊಳ್ಳೇಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ಒಂದು ಮಳೆಯಾದರೂ ಸಾಕು ಕೆರೆ ಏರಿ ಕೆಸರಿನ ಗದ್ದೆಯಾಗಿ ಮಾರ್ಪಡುತ್ತದೆ. ೧.೫ ಕಿಲೋಮೀಟರ್ ಇರುವ ಕೆರೆ ಏರಿಯ ಎರಡೂ ಬದಿ ತಡೆಗೋಡೆ ನಿರ್ಮಾಣವಾಗಿಲ್ಲ.
ಕೆಸರಿನೀಂದ ಕೂಡಿದ ರಸ್ತೆಯಲ್ಲಿ ಸರ್ಕಸ್ ಮಾಡಿಕೊಂಡು ವಾಹನ ಚಾಲನೆ ಮಾಡಬೇಕಾದ ಸ್ಥಿತಿ ವಾಹನ ಸವಾರರಿಗೆ ಎದುರಾಗಿದೆ. ಒಂದು ವೇಳೆ ಆಯ ತಪ್ಪಿ ಬಿದ್ದರೆ ಪ್ರಾಣಕ್ಕೆ ಕುತ್ತು ನಿಶ್ಚಿತ. ಮಳೆ ಬಂದ ಸಂದರ್ಭದಲ್ಲಿ ಕೆರೆ ಏರಿಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಸಾಕಷ್ಟು ನಡೆದಿವೆ. ಈ ಏರಿ ಮೇಲೆಶಾಲಾ ವಾಹನಗಳು ಸಂಚರಿಸುತ್ತವೆ. ಹಾಗಾಗಿ ಅನಾಹುತ ನಡೆಯುವ ಮುನ್ನ ಜನಪ್ರತಿನಿಧಿಗಳು, ಸಂಬಂಧ ಪಟ್ಟ ಹೇಮಾವತಿ ಇಲಾಖೆ ಕೂಡಲೇ ಕೆರೆ ಏರಿಯನ್ನು ದುರಸ್ತಿಪಡಿಸಿ ರಸ್ತೆಗೆ ಡಾಂಬರೀಕರಣ ಮಾಡಬೇಕು ಎಂದು ಸೊಳ್ಳೇಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಲ್ಲದೆ, ಈ ಏರಿಯ ಮೇಲೆ ಸಂಚರಿಸುವಾಗ ಯಾರಿಗಾದರೂ ಪ್ರಾಣಾಪಾಯವಾದರೆ ಸಂಬಂಧಪಟ್ಟ ಇಲಾಖೆಯವರೆ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.
-ಮಹೇಶ್ ಕಿಕ್ಕೇರಿ
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…