Andolana originals

ಏಪ್ರಿಲ್‌.1 ರಿಂದ 15ರವರೆಗೆ ಕೊಡವ ಕ್ರಿಕೆಟ್‌ ಲೀಗ್‌

ಕೂರ್ಗ್‌ ಕ್ರಿಕೆಟ್‌ ಫೌಂಡೇಶನ್‌ನಿಂದ ಆಯೋಜನೆ; ಪಾಲಿ ಬೆಟ್ಟದಲ್ಲಿ ಕ್ರಿಕೆಟ್‌ ಹಬ್ಬದ ಸಂಭ್ರಮ

-ಪುನೀತ್ ಮಡಿಕೇರಿ

ಮಡಿಕೇರಿ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ಆಯೋಜಿಸಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಜನ್- 2 ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ.

ಏ.1ರಿಂದ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಬಿಡ್ಡಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಐಪಿಎಲ್ ಮಾದರಿಯಲ್ಲಿನಡೆಸಲಾಗುವ ಕೊಡವ ಕ್ರಿಕೆಟ್ ಲೆದರ್
ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಮೊದಲ ಆವೃತಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಬಾರಿ 2ನೇ
ಸೀಜನ್ ಆಯೋಜನೆಗೊಳ್ಳುತ್ತಿದ್ದು, ಏ.1ರಿಂದ 15ರವರೆಗೆ ಪಾಲಿಬೆಟ್ಟದ ಟಾಟಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯಾವಳಿ ಜರುಗಲಿದೆ.

ಐಪಿಎಲ್ ಮಾದರಿಯಲ್ಲೇ ಪಂದ್ಯಾವಳಿ

ಐಪಿಎಲ್ ಮಾದರಿಯಲ್ಲಿಯೇ ನಡೆಯುವ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 10 ಫ್ರಾಂಚೈಸಿ ತಂಡಗಳು ಪಾಲ್ಗೊಳ್ಳಲಿವೆ. ಇತ್ತೀಚೆಗೆ ಮೈಸೂರಿನ
ಖಾಸಗಿ ಹೋಟೆಲ್‌ನಲ್ಲಿ ಇದರ ಬಿಡ್ಡಿಂಗ್  ಪ್ರಕ್ರಿಯೆ ನಡೆದಿದೆ. ಐಪಿಎಲ್‌ನಂತೆಯೇ ಇಲ್ಲಿ ಆಟಗಾರರನ್ನು ಹಣ ನೀಡಿ ಖರೀದಿ ಮಾಡುವ ನಿಯಮವಿದ್ದು, ಓರ್ವ ಐಕಾನ್  ಪ್ಲೇಯರ್, ಮತ್ತಿಬ್ಬರು ಕಳೆದ ಬಾರಿ ಆಡಿದ ಆಟಗಾರರನ್ನು ರೀಟೇನ್ ಮಾಡಿಕೊಳ್ಳಬಹುದಾಗಿದೆ. ಉಳಿದವರನ್ನು ಬಿಡ್ಡಿಂಗ್ ಮಾಡಿ ತಂಡಕ್ಕೆ ಸೇರಿಸಿಕೊಳ್ಳಬೇಕಿದೆ. ಅದರಂತೆ ಮೈಸೂರಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 175 ಆಟಗಾರರನ್ನು ನಾನಾ ಫ್ರಾಂಚೈಸಿಗಳು ತಮ್ಮ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

15ದಿನಗಳು, 10 ತಂಡಗಳು

15 ದಿನಗಳ ಕಾಲ ಪ್ರತಿದಿನ 2 ಟಿ-20  ಪಂದ್ಯಗಳು ನಡೆಯಲಿದ್ದು, ಎ ಮತ್ತು ಬಿ ಎಂಬ ಎರಡು ಪೂಲ್‌ಗಳಲ್ಲಿ ತಂಡಗಳು ಆಟವಾಡಲಿವೆ. ಎರಡೂ ಪೂಲ್‌ನಲ್ಲಿ ಅತಿ ಹೆಚ್ಚು ರನ್‌ರೇಟ್ ಗಳಿಸುವ ತಂಡಗಳು ಎಲಿಮಿನೇಟರ್, ಕ್ವಾಲಿಫೈಯರ್ 1, ಕ್ವಾಲಿಫೈಯರ್ 2 ಪಂದ್ಯಗಳನ್ನಾಡಬೇಕಿದೆ. ಬಳಿಕ ಕ್ವಾಲಿಫೈರ್ 1 ಮತ್ತು 2ರಲ್ಲಿ ಗೆಲ್ಲುವ ತಂಡಗಳು ಫೈನಲ್‌ನಲ್ಲಿ ಕಪ್‌ಗಾಗಿ ಸೆಣೆಸಾಟ ನಡೆಸಲಿವೆ. ಇದು ಐಪಿಎಲ್ ನಿಯಮವೇ ಆಗಿದ್ದು, 15 ದಿನಗಳ ಕಾಲ ನಡೆಯುವ ಪಂದ್ಯಾವಳಿ ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲಿದೆ.

2 ಲಕ್ಷ ರೂ. ಮೊದಲ ಬಹುಮಾನ:

ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟ ಅಲಕಂಕರಿಸುವ ತಂಡಕ್ಕೆ ಬರೋಬ್ಬರಿ 2 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ರನ್ನರ್  ಅಪ್ ತಂಡಕ್ಕೆ 1 ಲಕ್ಷ ರೂ. ಮತ್ತು 3ನೇ ಬಹುಮಾನ(ಕ್ವಾಲಿಫೈಯರ್ 2ರಲ್ಲಿ ಹೊರನಡೆಯುವ ತಂಡ) ಗಳಿಸುವ ತಂಡಕ್ಕೆ 50 ಸಾವಿರ ರೂ. ಮತ್ತು ಎಲ್ಲಾ ಬಹುಮಾನ
ವಿಜೇತರಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕೊಡವ ಕೌಟುಂಬಿಕ ಪಂದ್ಯಾವಳಿ ಅಲ್ಲ….

ಈ ಟೂರ್ನಿ ಕೊಡವ ಕುಟುಂಬಗಳ ನಡುವೆ ನಡೆಯುವ ಪಂದ್ಯಾವಳಿಯಲ್ಲ. ಬದಲಿಗೆ ಯಾವುದೇ ಕುಟುಂಬದ ಕೊಡವರು ಯಾವ ತಂಡದಲ್ಲಾದರೂ ಆಡಬಹುದಾಗಿದೆ. ಲೆದರ್ ಬಾಲ್ ಟೂರ್ನಿ ಆಗಿರುವುದರಿಂದ ವೃತ್ತಿಪರ ಆಟಗಾರರೇ ಹೆಚ್ಚಾಗಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ರಣಜಿ ಆಡಿದವರು ಮತ್ತು ಐಪಿಎಲ್‌ಗೆ ಆಯ್ಕೆಯಾಗಿದ್ದ ಕೆಲ ಕೊಡವ ಕ್ರಿಕೆಟರ್‌ಗಳೂ ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಉದ್ಯೋಗ ಪಡೆಯಲು ಅವಕಾಶ

ಕಳೆದ ಬಾರಿಯ ಚೊಚ್ಚಲ ಪಂದ್ಯಾವಳಿಯಲ್ಲಿ ಆಟವಾಡಿದ ಇಬ್ಬರು ಆಟಗಾರರು ದೇಶದ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿರುವುದು ಈ ಟೂರ್ನಿಯ ಗರಿಮೆಯಾಗಿದೆ. ಯೂಟ್ಯೂಬ್ ಲೈವ್‌ನಲ್ಲಿ ಈ ಪಂದ್ಯಾವಳಿಯನ್ನು ವೀಕ್ಷಿಸಬಹುದಾಗಿದ್ದು, ದೊಡ್ಡ ಫ್ರಾಂಚೈಸಿಗಳು, ಪ್ರಾಯೋಜಕರು ಮತ್ತು ನಾನಾ ಕ್ರಿಕೆಟ್ ಅಕಾಡೆಮಿಗಳು ಇಲ್ಲಿ ಉತ್ತಮ ಆಟ ಪ್ರದರ್ಶಿಸುವ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಇದರೊಂದಿಗೆ ಕಂಪೆನಿಗಳಲ್ಲಿ ಉದ್ಯೋಗ ಪಡೆಯುವುದಕ್ಕೂ ಅವಕಾಶವಿದೆ.

ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿ ಯರ್ ಲೀಗ್ ಸೀಸನ್-2ನ್ನು ಈ ಬಾರಿ ಪಾಲಿಬೆಟ್ಟದಲ್ಲಿ ಆಯೋಜಿಸುತ್ತಿದ್ದೇವೆ. ಏ.1ರಿಂದ ಪಂದ್ಯಾವಳಿ
ಆರಂಭವಾಗಲಿದ್ದು, ಈಗಾಗಲೇ ಬಿಡ್ಡಿಂಗ್ ಪ್ರಕ್ರಿಯೆ ಮುಗಿದಿದೆ. ಲೆದರ್  ಬಾಲ್ ಕ್ರಿಕೆಟ್ ಆಡುವುದರಿಂದ ವೃತ್ತಿಪರ ಕ್ರಿಕೆಟ್‌ನಲ್ಲಿ ಅವಕಾಶಗಳಿದ್ದು, ಕೊಡವ ಯುವಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ.

-ಪೊರುಕೊಂಡ ಸುನಿಲ್, ಕೂರ್ಗ್ ಕ್ರಿಕೆಟ್ ಫೌಂಡೇಷನ್ ಅಧ್ಯಕ್ಷ.

 

 

 

ಆಂದೋಲನ ಡೆಸ್ಕ್

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

2 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

5 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

14 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago