Andolana originals

ಏಪ್ರಿಲ್‌.7ರಿಂದ ಗೋಣಿಕೊಪ್ಪದಲ್ಲಿ ಕೊಡವ ಫುಟ್ಬಾಲ್‌ ಉತ್ಸವ

ನವೀನ್ ಡಿಸೋಜ

ಬೇತ್ರಿಯ ಮುಕ್ಕಾಟಿರ ಕುಟುಂಬದಿಂದ ಆಯೋಜನೆ

ಕೊಡವ ಕುಟುಂಬಗಳನ್ನು ಒಗ್ಗೂಡಿಸುವ ವೇದಿಕೆ

ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಂತೆಯೇ ಕೊಡವ ಕುಟುಂಬಗಳ ನಡುವಿನ ಫುಟ್ಬಾಲ್ ಪಂದ್ಯಾವಳಿಯೂ ಕೂಡ ಕಳೆದ ಕೆಲ ವರ್ಷಗಳಿಂದ ಆಯೋಜನೆಗೊಳ್ಳುತ್ತಿದ್ದು, ಈ ಬಾರಿ ಏ.೭ರಿಂದ ೧೨ರವರೆಗೆ ಕೊಡವ ಫುಟ್ಬಾಲ್ ಉತ್ಸವ ನಡೆಯಲಿದೆ.

ಕೊಡಗು ಜಿಲ್ಲೆಯಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿ ಜನಮನ್ನಣೆಗಳಿಸುವುದರೊಂದಿಗೆ ವಿಶ್ವ ಮಟ್ಟದಲ್ಲಿ ಗಮನ ಸೆಳೆದಿದೆ. ಪ್ರತಿವರ್ಷ ಕುಟುಂಬವೊಂದು ಆಯೋಜಿಸುವ ಹಾಕಿ ಪಂದ್ಯಾವಳಿಯಲ್ಲಿ ೩೦೦ಕ್ಕೂ ಅಧಿಕ ಕುಟುಂಬಗಳ ತಂಡಗಳು ಭಾಗವಹಿಸುತ್ತವೆ. ಕೊಡವರು ಒಂದೆಡೆ ಬೆರೆಯುವುದರೊಂದಿಗೆ ಸಂಸ್ಕೃತಿ, ಆಚಾರ-ವಿಚಾರಗಳ ಅನಾವರಣಕ್ಕೂ ಹಾಕಿ ಪಂದ್ಯಾವಳಿ ವೇದಿಕೆಯಾಗುತ್ತಿದೆ.

ಇದೀಗ ಕೊಡವ ಕುಟುಂಬಗಳ ನಡುವೆ ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳನ್ನು ಕೂಡ ಆಯೋಜಿಸಲಾಗುತ್ತಿದ್ದು, ಅದರಂತೆ ಏ.೭ರಿಂದ ಕೊಡವ ಕೌಟುಂಬಿಕ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲ್ಪಟ್ಟಿದೆ.

ಮುಕ್ಕಾಟಿರ(ದೇವಣಗೇರಿ) ಕುಟುಂಬದ ವತಿಯಿಂದ ಈ ಬಾರಿ ಪಂದ್ಯಾವಳಿ ನಡೆಯಲಿದ್ದು, ೫+೨ ಮಾದರಿಯಲ್ಲಿ ಕೊಡವ ಫುಟ್ಬಾಲ್ ಉತ್ಸವ ನಡೆಯಲಿದೆ. ಗೋಣಿಕೊಪ್ಪದ ಆಥ್ಲಾನ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ದೀರ್ಘಕಾಲದ ಕೊಡವ ಹಾಕಿ ಉತ್ಸವದ ಅಪ್ರತಿಮ ಯಶಸ್ಸಿನಿಂದ ಸ್ಛೂರ್ತಿ ಪಡೆದು ಕೊಡವ ಫುಟ್ಬಾಲ್ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಅಲ್ಲದೇ, ಕೊಡವ ಕುಟುಂಬಗಳನ್ನು ಒಗ್ಗೂಡಿಸಲು, ಕ್ರೀಡಾಕ್ಷೇತ್ರಕ್ಕೆ ಯುವ ಸಮೂಹವನ್ನು ಉತ್ತೇಜಿಸಲು ಮತ್ತು ಕೊಡಗಿನ ಖ್ಯಾತ ಕ್ರೀಡ ಪರಂಪರೆಯನ್ನು ಕಾಪಾಡಿಕೊಳ್ಳಲು ಇಂತಹ ಕ್ರೀಡಾ ಕೂಟಗಳಿಂದ ಸಾಧ್ಯವಾಗುತ್ತದೆ. ಆದ್ದರಿಂದ ಮುಕ್ಕಾ ಟಿರ(ದೇವಣಗೇರಿ) ಕುಟುಂಬ ವತಿಯಿಂದ ೫ನೇ ವರ್ಷದ ಕೊಡವ ಫುಟ್ಬಾಲ್ ಉತ್ಸವವನ್ನು ಸುಮಾರು ೨೫-೨೭ ಲಕ್ಷ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುತ್ತಿದೆ ಎಂದು ಕುಟುಂಬದ ಅಧ್ಯಕ್ಷ ಮುಕ್ಕಾಟಿರ ಸಿ.ಕರುಂಬಯ್ಯ ತಿಳಿಸಿದ್ದಾರೆ.

ಕಳೆದ ವರ್ಷ ನಡೆದ ಫುಟ್ಬಾಲ್ ಉತ್ಸವದಲ್ಲಿ ೭೪ ತಂಡಗಳು ಭಾಗವಹಿಸಿದ್ದವು. ಪ್ರಸಕ್ತ ಸಾಲಿನ ಕ್ರೀಡಾಕೂಟದಲ್ಲಿ ೧೦೦ ಕೊಡವ ಕುಟುಂಬ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ನಾಕೌಟ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ಹಾಗೂ ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಗುತ್ತದೆ. ಫುಟ್ಬಾಲ್ ಉತ್ಸವದ ಜೊತೆಯಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು, ವಿವಿಧ ಬಗೆಯ ಖಾದ್ಯಗಳು ಮತ್ತು ಕೊಡವ ಸಮುದಾಯದ ಬಾಂಧವ್ಯ ಗಮನ ಸೆಳೆಯಲಿವೆ.

೨೦೨೦ರಿಂದಲೂ ಫುಟ್ಬಾಲ್ ಉತ್ಸವ: 

೨೦೨೦ರಿಂದಲೂ ಫುಟ್ಬಾಲ್ ಉತ್ಸವ ನಡೆಯುತ್ತಿದೆ. ಆಕ್ಸ್ ಸ್ಪೋಟ್ಸ್ – ಎಂಟರ್‌ಟೈನ್‌ಮೆಂಟ್ ಸಂಸ್ಥೆಯ ಹೆಸರಿನಲ್ಲಿ ಯುವಕರ ತಂಡವೊಂದು ಪೊನ್ನಂಪೇಟೆ ಕೊಡವ ಸಮಾಜದ ಸಹಯೋಗದಲ್ಲಿ ೨೦೨೦ರಲ್ಲಿ ಫುಟ್ಬಾಲ್ ಪಂದ್ಯಾವಳಿ ಆರಂಭಿಸಿತು. ೨೦೨೧-೨೨ರಲ್ಲಿ ಚೌರೀರ ಕುಟುಂಬ ಪಂದ್ಯಾವಳಿಯ ನೇತೃತ್ವ ವಹಿಸಿತ್ತು. ೨೦೨೩ರಲ್ಲಿ ಮತ್ತೆ ಆಕ್ಸ್ ಸ್ಪೋರ್ಟ್ಸ್ – ಎಂಟರ್‌ಟೈನ್‌ಮೆಂಟ್ ಸಂಸ್ಥೆ ಅಜ್ಜಿಕುಟ್ಟೀರ ಸುಬ್ಬಯ್ಯ ಹಾಗೂ ಪೊನ್ನಮ್ಮ ಚಾರಿಟಬಲ್ ಟ್ರಸ್ಟ್‌ನ ಸಹಯೋಗದಲ್ಲಿ ಪಂದ್ಯಾವಳಿ ಆಯೋಜಿಸಿತ್ತು. ೨೦೨೪ರಲ್ಲಿ ಕಾರಣಾಂತರಗಳಿಂದ ಪಂದ್ಯಾವಳಿ ನಡೆಯಲಿಲ್ಲ. ೨೦೨೫ರಲ್ಲಿ ಬೇತ್ರಿಯ ಮುಕ್ಕಾಟೀರ ಕುಟುಂಬ ಪಂದ್ಯಾವಳಿ ಆಯೋಜಿಸಿದ್ದು, ೨೦೨೬ರಲ್ಲಿ ದೇವಣಗೇರಿಯ ಮುಕ್ಕಾಟೀರ ಕುಟುಂಬ ಪಂದ್ಯಾವಳಿಯ ನೇತೃತ್ವವಹಿಸಲಿದೆ.

” ಕೊಡವ ಹಾಕಿ ಉತ್ಸವದ ಯಶಸ್ಸಿನಿಂದ ಸ್ಛೂರ್ತಿ ಪಡೆದು ಕೊಡವ ಫುಟ್ಬಾಲ್ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಈ ಬಾರಿ ಏ.೭ರಿಂದ ೧೨ರವರೆಗೆ ಗೋಣಿಕೊಪ್ಪದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೊದಲು ನೋಂದಣಿಯಾಗುವ ೧೦೦ ತಂಡಗಳಿಗೆ ಆಡಲು ಅವಕಾಶ ಕಲ್ಪಿಸಲಾಗುವುದು. ಅತಿಥಿ ಆಟಗಾರರೂ ಆಡಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ.೯೩೪೧೯೫೭೮೯೫, ೯೮೪೫೩೪೩೯೭೦ ನ್ನು ಸಂಪರ್ಕಿಸಬಹುದು.”

-ಮುಕ್ಕಾಟಿರ ಸಿ. ಕರುಂಬಯ್ಯ, ಮುಕ್ಕಾಟಿರ ಕುಟುಂಬದ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

15 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

44 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

51 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

1 hour ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

3 hours ago