Andolana originals

ಶಿಥಿಲಾವಸ್ಥೆಯತ್ತ ಕೊಡವ ಹೆರಿಟೇಜ್‌ ಸೆಂಟರ್‌

ಕಾಮಗಾರಿ ಸ್ಥಗಿತಗೊಂಡು ಪಾಳುಬಂಗಲೆಯಂತಾ ? ಕಟ್ಟಡ; ಪುಂಡ ಪೋಕರಿಗಳ ತಾಣವಾಗಿ ಮಾರ್ಪಾಡು

ನವೀನ್ ಡಿಸೋಜ

ಮಡಿಕೇರಿ: ದಶಕಗಳಿಂದ ನಡೆಯುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳು ಪಾಳುಬಂಗಲೆಯಂತಾಗಿದ್ದು, ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ಕೊಡವ ಹೆರಿಟೇಜ್ ಸೆಂಟರ್ ಕುರಿತು ಇತ್ತೀಚೆಗೆ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ . ಪಾಟೀಲ್, ಹೆರಿಟೇಜ್ ಸೆಂಟರ್ ಕಾಮಗಾರಿಯನ್ನು ಪಿಪಿಪಿ(ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಪೂರ್ಣಗೊಳಿಸಿ, ನಿರ್ವಹಣೆ ಮತ್ತು ಕಾರ್ಯಾಚರಣೆ ನಡೆಸಲು ಮಾರ್ಗದರ್ಶನ ಕೋರಲಾಗಿದೆ ಎಂದು ಉತ್ತರಿಸಿದ್ದರು. ಸರ್ಕಾರ ಕಾಮಗಾರಿ ಮುಗಿಸುವ ಕುರಿತು ಇನ್ನೂ ಮಾರ್ಗಗಳನ್ನು ಹುಡುಕುತ್ತಿರುವಾಗಲೇ ಇತ್ತ ಕಾಮಗಾರಿ ಪೂರ್ಣಗೊಳ್ಳದೆ ಹೆರಿಟೇಜ್ ಸೆಂಟರ್‌ನ ಕಟ್ಟಡಗಳು ಕಾಡು ಪಾಲಾಗುತ್ತಿದೆ.

ಕಾಮಗಾರಿ ಪೂರ್ಣಗೊಳ್ಳದೆ ನಿರ್ವಹಣೆಯನ್ನೂ ಮಾಡದೆ ಮೂಲೆಗುಂಪಾಗಿರುವ ಕೊಡವ ಹೆರಿಟೇಜ್ ಸೆಂಟರ್ ಪುಂಡ ಪೋಕರಿಗಳ ಮೋಜಿನ ತಾಣವಾಗಿ ಮಾರ್ಪಟ್ಟಿದೆ. ಈಗಾಗಲೇ ಕಟ್ಟಡದ ಕಿಟಕಿ ಬಾಗಿಲುಗಳು ಕಿಡಿಗೇಡಿಗಳಿಂದ ನಾಶವಾಗುತ್ತಿದ್ದು, ಶೀಘ್ರ ಕಾಮಗಾರಿ ಆರಂಭಿಸದಿದ್ದರೆ ಕಟ್ಟಡ ಶಿಥಿಲಾವಸ್ಥೆ ತಲುಪುವ ಸಾಧ್ಯತೆ ಇದೆ.

ಮಡಿಕೇರಿ ಹೊರವಲಯದ ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಗಾಲ್ಛ್ ಮೈದಾನದ ಬಳಿ ನಿರ್ಮಾಣವಾಗಿರುವ ಕೊಡವ ಹೆರಿಟೇಜ್ ಸೆಂಟರ್‌ನ ಕಟ್ಟಡಗಳು ಸುಸಜ್ಜಿತವಾಗಿವೆ. ಒಳಾಂಗಣ ಕೆಲಸಗಳು, ಪೀಠೋಪಕರಣ ಮತ್ತಿತರ ಕೆಲಸಗಳಷ್ಟೇ ಬಾಕಿ ಇದೆ. ಆದರೆ, ನಿರ್ಮಾಣವಾಗಿ ನಿಂತಿರುವ ಕಟ್ಟಡದ ಸುತ್ತ ಗಿಡ-ಗಂಟಿಗಳು ಬೆಳೆದು ಕಟ್ಟಡವನ್ನೇ ಆವರಿಸಿಕೊಳ್ಳುತ್ತಿರುವುದರಿಂದ ನೂತನ ಹೆರಿಟೇಜ್ ಕೇಂದ್ರ ಯಾವುದೋ ಪಾಳುಬಂಗಲೆಯಂತಾಗುತ್ತಿದೆ.

ಮುಖ್ಯಕಟ್ಟಡದ ಎದುರಿನ ಬಾಗಿಲು ಹಾಕಲಾಗಿದೆಯಾದರೂ ಹಿಂದಿನಿಂದ ಕಟ್ಟಡದೊಳಗೆ ಪ್ರವೇಶಿಸಬಹುದಾಗಿದೆ. ಕಟ್ಟಡಕ್ಕೆ ಕಾವಲುಗಾರರಿಲ್ಲದಿರುವುದರಿಂದ ಯಾರು ಯಾವಾಗ ಬೇಕಾದರೂ ಕಟ್ಟಡದೊಳಗೆ ಪ್ರವೇಶಿಸಬಹುದಾಗಿದೆ. ಕೊಡವ ಹೆರಿಟೇಜ್ ಸೆಂಟರ್‌ನ ಮುಖ್ಯ ಕಟ್ಟಡ ಮತ್ತು ಎಡಭಾಗದಲ್ಲಿರುವ ಮತ್ತೆರಡು ಕಟ್ಟಡಗಳಿಗೆ ಗೇಟ್ ವ್ಯವಸ್ಥೆ ಇಲ್ಲ. ಹೀಗಾಗಿ ಈ ಕಟ್ಟಡಗಳೀಗ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಇತ್ತೀಚಿನವರೆಗೂ ಇಲ್ಲಿ ಆಗೊಮ್ಮೆ ಈಗೊಮ್ಮೆ ಮದ್ಯದ ಪಾರ್ಟಿ ನಡೆದಿರುವುದರ ಕುರುಹುಗಳು ಕಾಣುತ್ತಿವೆ.

ಜೊತೆಗೆ ಕಿಡಿಗೇಡಿಗಳು ಇಲ್ಲಿನ ಕಿಟಕಿ ಗಾಜುಗಳನ್ನು, ಬಾಗಿಲುಗಳನ್ನು ನಾಶಮಾಡಿದ್ದಾರೆ. ಮದ್ಯದ ಬಾಟಲ್‌ಗಳನ್ನೂ ಒಡೆದು ವಿಕೃತಿ ಮೆರೆದಿದ್ದಾರೆ. ಹೀಗಾಗಿ ಕಟ್ಟಡದ ಕೆಲಸವನ್ನು ಶೀಘ್ರ ಆರಂಭಿಸಬೇಕು ಮತ್ತು ಇಲ್ಲಿಗೆ ಕಾವಲುಗಾರರನ್ನು ನೇಮಕ ಮಾಡಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಒಂದೂವರೆ ದಶಕದಿಂದ ಪೂರ್ಣವಾಗದ ಕೆಲಸ

ಗಾಲ್ಛ್ ರಸ್ತೆಯಲ್ಲಿ ೫ ಎಕರೆ ಜಾಗದಲ್ಲಿ ೨೦೦೯-೧೦ರಲ್ಲಿ ಮಂಜೂರಾತಿ ಪಡೆದು ೨೦೧೧ರಲ್ಲಿ ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣ ಕಾರ್ಯ ಆರಂಭಿಸಲಾಯಿತು. ನಿರ್ಮಾಣದ ಹಂತದಲ್ಲಿಯೇ ಮಳೆಯಿಂದ ಛಾವಣಿ ಕುಸಿದಿತ್ತು. ಇದನ್ನು ಇತ್ತೀಚೆಗೆ ಸರಿಪಡಿಸಲಾಯಿತು. ಹೀಗೆ ಅಂದಾಜು ೧೪ ವರ್ಷಗಳ ಬಳಿಕ ಕಾಮಗಾರಿ ಮುಕ್ತಾಯಗೊಳ್ಳುವಹಂತ ತಲುಪಿತು. ಆದರೆ ಕಟ್ಟಡಕ್ಕೆ ಬೇಕಾದ ಪೀಠೋಪಕರಣ ಮತ್ತು ಮೂಲಸೌಲಭ್ಯಗಳ ಕೆಲಸ ಬಾಕಿ ಉಳಿದಿದ್ದು, ಇದಕ್ಕಾಗಿ ಈಗ ಪ್ರಸ್ತಾವನೆ ಸಲ್ಲಿಸಿ ಕಾಯಲಾಗುತ್ತಿದೆ. ಸದ್ಯ ೩.೩೦ ಕೋಟಿ ರೂ. ವೆಚ್ಚದಲ್ಲಿ ೨ ಐನ್‌ಮನೆಗಳ ಕೆಲಸ, ಪ್ರವೇಶದ್ವಾರ, ಅಡುಗೆ ಕೊಠಡಿ, ಮೆಟ್ಟಿಲುಗಳು, ಗ್ರಂಥಾಲಯ, ರಂಗಮಂದಿರ, ವಿದ್ಯುದ್ಧೀಕರಣ, ಕಿಟಕಿ, ಬಾಗಿಲುಗಳ ಕಾಮಗಾರಿಗಳು ನಡೆದಿವೆ.  ಇನ್ನೂ ಅನೇಕ ಕೆಲಸಗಳು ಬಾಕಿ ಉಳಿದುಕೊಂಡಿವೆ.

” ಕೊಡವ ಹೆರಿ ಟೇಜ್ ಸೆಂಟರ್ ಕಾಮಗಾರಿ ಯನ್ನು ಪಿಪಿಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಮಾಡಲು ಮಾರ್ಗದರ್ಶನ ಕೋರಿ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ. ಸದ್ಯ ಕಟ್ಟಡ ಲೋಕೋಪಯೋಗಿ ಇಲಾಖೆ ಅಧಿನದಲ್ಲಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕವಷ್ಟೇ ನಮಗೆ ಹಸ್ತಾಂತರವಾಗಬೇಕು.”

-ಅನಿತಾ ಭಾಸ್ಕರ್, ಉಪ ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ

ಆಂದೋಲನ ಡೆಸ್ಕ್

Recent Posts

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

7 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

2 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

4 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

15 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

15 hours ago