Andolana originals

ಶಿಥಿಲಾವಸ್ಥೆಯತ್ತ ಕೊಡವ ಹೆರಿಟೇಜ್‌ ಸೆಂಟರ್‌

ಕಾಮಗಾರಿ ಸ್ಥಗಿತಗೊಂಡು ಪಾಳುಬಂಗಲೆಯಂತಾ ? ಕಟ್ಟಡ; ಪುಂಡ ಪೋಕರಿಗಳ ತಾಣವಾಗಿ ಮಾರ್ಪಾಡು

ನವೀನ್ ಡಿಸೋಜ

ಮಡಿಕೇರಿ: ದಶಕಗಳಿಂದ ನಡೆಯುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳು ಪಾಳುಬಂಗಲೆಯಂತಾಗಿದ್ದು, ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ಕೊಡವ ಹೆರಿಟೇಜ್ ಸೆಂಟರ್ ಕುರಿತು ಇತ್ತೀಚೆಗೆ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ . ಪಾಟೀಲ್, ಹೆರಿಟೇಜ್ ಸೆಂಟರ್ ಕಾಮಗಾರಿಯನ್ನು ಪಿಪಿಪಿ(ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಪೂರ್ಣಗೊಳಿಸಿ, ನಿರ್ವಹಣೆ ಮತ್ತು ಕಾರ್ಯಾಚರಣೆ ನಡೆಸಲು ಮಾರ್ಗದರ್ಶನ ಕೋರಲಾಗಿದೆ ಎಂದು ಉತ್ತರಿಸಿದ್ದರು. ಸರ್ಕಾರ ಕಾಮಗಾರಿ ಮುಗಿಸುವ ಕುರಿತು ಇನ್ನೂ ಮಾರ್ಗಗಳನ್ನು ಹುಡುಕುತ್ತಿರುವಾಗಲೇ ಇತ್ತ ಕಾಮಗಾರಿ ಪೂರ್ಣಗೊಳ್ಳದೆ ಹೆರಿಟೇಜ್ ಸೆಂಟರ್‌ನ ಕಟ್ಟಡಗಳು ಕಾಡು ಪಾಲಾಗುತ್ತಿದೆ.

ಕಾಮಗಾರಿ ಪೂರ್ಣಗೊಳ್ಳದೆ ನಿರ್ವಹಣೆಯನ್ನೂ ಮಾಡದೆ ಮೂಲೆಗುಂಪಾಗಿರುವ ಕೊಡವ ಹೆರಿಟೇಜ್ ಸೆಂಟರ್ ಪುಂಡ ಪೋಕರಿಗಳ ಮೋಜಿನ ತಾಣವಾಗಿ ಮಾರ್ಪಟ್ಟಿದೆ. ಈಗಾಗಲೇ ಕಟ್ಟಡದ ಕಿಟಕಿ ಬಾಗಿಲುಗಳು ಕಿಡಿಗೇಡಿಗಳಿಂದ ನಾಶವಾಗುತ್ತಿದ್ದು, ಶೀಘ್ರ ಕಾಮಗಾರಿ ಆರಂಭಿಸದಿದ್ದರೆ ಕಟ್ಟಡ ಶಿಥಿಲಾವಸ್ಥೆ ತಲುಪುವ ಸಾಧ್ಯತೆ ಇದೆ.

ಮಡಿಕೇರಿ ಹೊರವಲಯದ ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಗಾಲ್ಛ್ ಮೈದಾನದ ಬಳಿ ನಿರ್ಮಾಣವಾಗಿರುವ ಕೊಡವ ಹೆರಿಟೇಜ್ ಸೆಂಟರ್‌ನ ಕಟ್ಟಡಗಳು ಸುಸಜ್ಜಿತವಾಗಿವೆ. ಒಳಾಂಗಣ ಕೆಲಸಗಳು, ಪೀಠೋಪಕರಣ ಮತ್ತಿತರ ಕೆಲಸಗಳಷ್ಟೇ ಬಾಕಿ ಇದೆ. ಆದರೆ, ನಿರ್ಮಾಣವಾಗಿ ನಿಂತಿರುವ ಕಟ್ಟಡದ ಸುತ್ತ ಗಿಡ-ಗಂಟಿಗಳು ಬೆಳೆದು ಕಟ್ಟಡವನ್ನೇ ಆವರಿಸಿಕೊಳ್ಳುತ್ತಿರುವುದರಿಂದ ನೂತನ ಹೆರಿಟೇಜ್ ಕೇಂದ್ರ ಯಾವುದೋ ಪಾಳುಬಂಗಲೆಯಂತಾಗುತ್ತಿದೆ.

ಮುಖ್ಯಕಟ್ಟಡದ ಎದುರಿನ ಬಾಗಿಲು ಹಾಕಲಾಗಿದೆಯಾದರೂ ಹಿಂದಿನಿಂದ ಕಟ್ಟಡದೊಳಗೆ ಪ್ರವೇಶಿಸಬಹುದಾಗಿದೆ. ಕಟ್ಟಡಕ್ಕೆ ಕಾವಲುಗಾರರಿಲ್ಲದಿರುವುದರಿಂದ ಯಾರು ಯಾವಾಗ ಬೇಕಾದರೂ ಕಟ್ಟಡದೊಳಗೆ ಪ್ರವೇಶಿಸಬಹುದಾಗಿದೆ. ಕೊಡವ ಹೆರಿಟೇಜ್ ಸೆಂಟರ್‌ನ ಮುಖ್ಯ ಕಟ್ಟಡ ಮತ್ತು ಎಡಭಾಗದಲ್ಲಿರುವ ಮತ್ತೆರಡು ಕಟ್ಟಡಗಳಿಗೆ ಗೇಟ್ ವ್ಯವಸ್ಥೆ ಇಲ್ಲ. ಹೀಗಾಗಿ ಈ ಕಟ್ಟಡಗಳೀಗ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಇತ್ತೀಚಿನವರೆಗೂ ಇಲ್ಲಿ ಆಗೊಮ್ಮೆ ಈಗೊಮ್ಮೆ ಮದ್ಯದ ಪಾರ್ಟಿ ನಡೆದಿರುವುದರ ಕುರುಹುಗಳು ಕಾಣುತ್ತಿವೆ.

ಜೊತೆಗೆ ಕಿಡಿಗೇಡಿಗಳು ಇಲ್ಲಿನ ಕಿಟಕಿ ಗಾಜುಗಳನ್ನು, ಬಾಗಿಲುಗಳನ್ನು ನಾಶಮಾಡಿದ್ದಾರೆ. ಮದ್ಯದ ಬಾಟಲ್‌ಗಳನ್ನೂ ಒಡೆದು ವಿಕೃತಿ ಮೆರೆದಿದ್ದಾರೆ. ಹೀಗಾಗಿ ಕಟ್ಟಡದ ಕೆಲಸವನ್ನು ಶೀಘ್ರ ಆರಂಭಿಸಬೇಕು ಮತ್ತು ಇಲ್ಲಿಗೆ ಕಾವಲುಗಾರರನ್ನು ನೇಮಕ ಮಾಡಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಒಂದೂವರೆ ದಶಕದಿಂದ ಪೂರ್ಣವಾಗದ ಕೆಲಸ

ಗಾಲ್ಛ್ ರಸ್ತೆಯಲ್ಲಿ ೫ ಎಕರೆ ಜಾಗದಲ್ಲಿ ೨೦೦೯-೧೦ರಲ್ಲಿ ಮಂಜೂರಾತಿ ಪಡೆದು ೨೦೧೧ರಲ್ಲಿ ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣ ಕಾರ್ಯ ಆರಂಭಿಸಲಾಯಿತು. ನಿರ್ಮಾಣದ ಹಂತದಲ್ಲಿಯೇ ಮಳೆಯಿಂದ ಛಾವಣಿ ಕುಸಿದಿತ್ತು. ಇದನ್ನು ಇತ್ತೀಚೆಗೆ ಸರಿಪಡಿಸಲಾಯಿತು. ಹೀಗೆ ಅಂದಾಜು ೧೪ ವರ್ಷಗಳ ಬಳಿಕ ಕಾಮಗಾರಿ ಮುಕ್ತಾಯಗೊಳ್ಳುವಹಂತ ತಲುಪಿತು. ಆದರೆ ಕಟ್ಟಡಕ್ಕೆ ಬೇಕಾದ ಪೀಠೋಪಕರಣ ಮತ್ತು ಮೂಲಸೌಲಭ್ಯಗಳ ಕೆಲಸ ಬಾಕಿ ಉಳಿದಿದ್ದು, ಇದಕ್ಕಾಗಿ ಈಗ ಪ್ರಸ್ತಾವನೆ ಸಲ್ಲಿಸಿ ಕಾಯಲಾಗುತ್ತಿದೆ. ಸದ್ಯ ೩.೩೦ ಕೋಟಿ ರೂ. ವೆಚ್ಚದಲ್ಲಿ ೨ ಐನ್‌ಮನೆಗಳ ಕೆಲಸ, ಪ್ರವೇಶದ್ವಾರ, ಅಡುಗೆ ಕೊಠಡಿ, ಮೆಟ್ಟಿಲುಗಳು, ಗ್ರಂಥಾಲಯ, ರಂಗಮಂದಿರ, ವಿದ್ಯುದ್ಧೀಕರಣ, ಕಿಟಕಿ, ಬಾಗಿಲುಗಳ ಕಾಮಗಾರಿಗಳು ನಡೆದಿವೆ.  ಇನ್ನೂ ಅನೇಕ ಕೆಲಸಗಳು ಬಾಕಿ ಉಳಿದುಕೊಂಡಿವೆ.

” ಕೊಡವ ಹೆರಿ ಟೇಜ್ ಸೆಂಟರ್ ಕಾಮಗಾರಿ ಯನ್ನು ಪಿಪಿಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಮಾಡಲು ಮಾರ್ಗದರ್ಶನ ಕೋರಿ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ. ಸದ್ಯ ಕಟ್ಟಡ ಲೋಕೋಪಯೋಗಿ ಇಲಾಖೆ ಅಧಿನದಲ್ಲಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕವಷ್ಟೇ ನಮಗೆ ಹಸ್ತಾಂತರವಾಗಬೇಕು.”

-ಅನಿತಾ ಭಾಸ್ಕರ್, ಉಪ ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ

ಆಂದೋಲನ ಡೆಸ್ಕ್

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

3 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

4 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago