Andolana originals

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್

ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ

ಮಡಿಕೇರಿ: ಕೊಡವ ಹಾಕಿ ಅಕಾಡೆಮಿ ವತಿಯಿಂದ ಹಾಕಿ ಕೂರ್ಗ್ ಸಂಸ್ಥೆ, ಎಂ.ಬಾಡಗ ಸ್ಪೋರ್ಟ್ಸ್ ರಿಕ್ರಿಯೇಷನ್ ಸಂಸ್ಥೆ, ಮೂರ್ನಾಡು ವಿದ್ಯಾಸಂಸ್ಥೆ ಸಹಕಾರದೊಂದಿಗೆ ಡಿ.೨೬ರಿಂದ ೩೦ರವರೆಗೆ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಮೂರ್ನಾಡಿನ ದಿ.ಬಾಚೆಟ್ಟೀರ ಲಾಲೂ ಮುದ್ದಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕೌಟುಂಬಿಕ ಹಾಕಿ ಉತ್ಸವಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿ ಹಾಕಿ ಪ್ರೇಮಿಗಳಿಗೆ ರಸದೌತಣ ನೀಡಲಿದೆ.

೧೯೯೭ನೇ ಇಸವಿಯಲ್ಲಿ ಪಾಂಡಂಡ ದಿ. ಕುಟ್ಟಪ್ಪ ಕುಟ್ಟಣಿ ಹಾಗೂ ಸಹೋದರ ಕಾಶಿ ಅವರಿಂದ ಕರಡದಲ್ಲಿ ಸುಮಾರು ಅರವತ್ತು ಕೊಡವ ಕುಟುಂಬಗಳಿಂದ ಶುರುವಾದ ಕೊಡವ ಕುಟುಂಬಗಳ ನಡುವೆ ಹಾಕಿ ಹಬ್ಬವು ಕೊಡಗಿನಎ ಭಾಗಗಳಲ್ಲಿ ನಡೆಯುತ್ತಾ ಬಂದಿದೆ.

೨೦೨೪ರಲ್ಲಿ ನಾಪೋಕ್ಲುವಿನಲ್ಲಿ ನಡೆದ ಕುಂಡ್ಯೋಳಂಡ ಹಾಕಿ ಹಬ್ಬವು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಕಳೆದ ವರ್ಷ ಮಡಿಕೇರಿಯಲ್ಲಿ ನಡೆದ ೨೫ನೇ ವರ್ಷದ ಮುದ್ದಂಡ ಹಾಕಿ ಹಬ್ಬವು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಎಂಬ ಬಿರುದನ್ನು ಪಡೆದಿರುವುದು ಕೊಡವ ಹಾಕಿ ಅಕಾಡೆಮಿಗೆ ಸಂದ ಗೌರವವಾಗಿದೆ. ಅದೇ ರೀತಿ ಪಾಂಡಂಡ ದಿ. ಕುಟ್ಟಪ್ಪ ಅವರಿಗೆ ಚಾಂಪಿಯನ್ ಟ್ರೋಫಿ ನಡೆಸುವ ಆಕಾಂಕ್ಷೆ ಇತ್ತು, ಆದರೆ, ಸಾಧ್ಯವಾಗಿರಲಿಲ್ಲ. ಇದರ ಭಾಗವಾಗಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಹಮ್ಮಿಕೊಳ್ಳಲಾಗಿದೆ.

೧೩ ತಂಡಗಳು ಭಾಗಿ: ೨೫ ವರ್ಷಗಳಲ್ಲಿ ಕೊಡವ ಹಾಕಿ ಹಬ್ಬದಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದ ಸುಮಾರು ೧೩ ತಂಡಗಳು ಈ ಚಾಂಪಿಯನ್ಸ್ ಟ್ರೋಫಿಗಾಗಿ ಸೆಣಸಾಟ ನಡೆಸುತ್ತಿವೆ. ೪ ಪೋಲ್‌ಗಳಾಗಿ ವಿಂಗಡಿಸಿದ್ದು, ಪ್ರತಿ ಪಂದ್ಯವು ಲೀಗ್ ಮಾದರಿಯಲ್ಲಿ ನಡೆಯಲಿದೆ. ನಂತರ ೪ ಪೋಲ್‌ನ ಅಗ್ರ ೪ ತಂಡಗಳು ಸೆಮಿಫೈನಲ್‌ನಲ್ಲಿ ಪಾಲ್ಗೊಳ್ಳುತ್ತವೆ. ಸೆಮಿಫೈನಲ್ ನಾಕೌಟ್ ಮಾದರಿಯಲ್ಲಿ ನಡೆಯಲಿದೆ.

ಸ್ಮರಣಿಕೆ ಗೌರವ: ೧೯೯೭ರಲ್ಲಿ ಕರಡದಲ್ಲಿ ಆರಂಭವಾದ ಮೊದಲ ಹಾಕಿ ಹಬ್ಬದಲ್ಲಿ ತಾಂತ್ರಿಕ ಸಮಿತಿಯಲ್ಲಿ ಕಾರ್ಯನಿರ್ವಹಿಸಿದವರು ಹಾಗೂ ವೀಕ್ಷಕ ವಿವರಣೆಗಾರರನ್ನು ಗುರುತಿಸಿ ಉದ್ಘಾಟನಾ ಪಂದ್ಯದ ದಿನದಂದು ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಅಂದು ೩ ಬಾರಿಯ ಒಲಿಂಪಿಯನ್ ಬೊಳ್ಳಂಡ ಪ್ರಮೀಳಾ ಅಯ್ಯಪ್ಪ ತವರು ಮನೆ(ಗುಡ್ಡಂಡ), ಭಾರತದ ಹಾಕಿ ತಂಡವನ್ನು ಪ್ರತಿನಿಧಿಸಿದ್ದ ಪಾಂಡಂಡ ಪುಷ್ಪಾ ಸುಬ್ಬಯ್ಯ ತವರು ಮನೆ(ಅಮ್ಮಾಟಂಡ) ಅಲ್ಲದೆ ಇನ್ನಿತರ ಗಣ್ಯರು ಉಪಸ್ಥಿತರಿರುವರು. ಅಲ್ಲದೇ, ಕಳೆದ ೨೫ ವರ್ಷಗಳಿಂದ ಹಾಕಿ ಹಬ್ಬವನ್ನು ಶ್ರಮವಹಿಸಿ ಆಯೋಜಿಸುತ್ತಿರುವ ೨೫ ಕೊಡವ ಕುಟುಂಬದ ಅಧ್ಯPರು, ಪಟ್ಟೆದಾರರನ್ನು ಅಂತಿಮ ಪಂದ್ಯಾಟದ ದಿನದಂದು ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ.

ವಿಜೇತ ತಂಡಕ್ಕೆ ೨ ಲಕ್ಷ ರೂ:. ಪ್ರಥಮ ಬಹುಮಾನ ಪಡೆದ ತಂಡಕ್ಕೆ ೨ ಲಕ್ಷ ರೂ.ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ ಪಡೆದ ತಂಡಕ್ಕೆ ೧ ಲಕ್ಷ ರೂ. ನಗದು ಮತ್ತು ಟ್ರೋಫಿ, ಸೆಮಿಫೈನಲ್‌ಗೆ ಅರ್ಹತೆ ಪಡೆದ ತಂಡಕ್ಕೆ ತಲಾ ೫೦,೦೦೦ ರೂ. ನಗದು ಮತ್ತು ಟ್ರೋಫಿ ಹಾಗೂ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದ ಪ್ರತಿ ತಂಡಕ್ಕೂ ತಲಾ ೨೫,೦೦೦ ರೂ. ಬಹುಮಾನ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ. ಜತೆಗೆ ಉತ್ತಮ ಫಾರ್ವರ್ಡ್, ಉತ್ತಮ ಫುಲ್ ಬ್ಯಾಕ್, ಉತ್ತಮ ಆಫ್, ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

” ೧೯೯೭ನೇ ಇಸವಿಯಲ್ಲಿ ಪಾಂಡಂಡ ದಿ.ಕುಟ್ಟಪ್ಪ ಕುಟ್ಟಣಿ ಹಾಗೂ ಸಹೋದರ ಕಾಶಿ ಅವರಿಂದ ಕರಡದಲ್ಲಿ ಸುಮಾರು ಅರವತ್ತು ಕೊಡವ ಕುಟುಂಬಗಳಿಂದ ಕೊಡವ ಕುಟುಂಬಗಳ ನಡುವೆ ಹಾಕಿಹಬ್ಬವು ಆರಂಭವಾಯಿತು. ಅದೇ ರೀತಿ ಪಾಂಡಂಡ ದಿ.ಕುಟ್ಟಪ್ಪ ಅವರಿಗೆ ಚಾಂಪಿಯನ್ ಟ್ರೋಫಿ ನಡೆಸುವ ಆಕಾಂಕ್ಷೆ ಇತ್ತು. ಆದರೆ, ಸಾಧ್ಯವಾಗಿರಲಿಲ್ಲ. ಇದರ ಭಾಗವಾಗಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಹಮ್ಮಿಕೊಳ್ಳಲಾಗಿದೆ.”

-ಪಾಡಂಡ ಕೆ.ಬೋಪಣ್ಣ, ಅಧ್ಯಕ್ಷರು, ಕೊಡವ ಹಾಕಿ ಅಕಾಡೆಮಿ

ಪಾಲ್ಗೊಳ್ಳುವ ತಂಡಗಳು:  ಎ ಗುಂಪಿನಲ್ಲಿ ಮಂಡೇಪಂಡ, ಪರದಂಡ, ಕೋಣೇರಿರ. ಬಿ ಗುಂಪಿನಲ್ಲಿ ಚೆಪ್ಪುಡಿರ, ಪಳಂಗಂಡ, ಅಂಜಪರವಂಡ, ಮುಕ್ಕಾಟಿರ(ಬೊಂದ), ಸಿ ಗುಂಪಿನಲ್ಲಿ ನೆಲ್ಲಮಕ್ಕಡ, ಕುಲ್ಲೇಟಿರ, ಮಾಚಮಾಡ. ಡಿ ಗುಂಪಿನಲ್ಲಿ ಕುಪ್ಪಂಡ, ಕೂತಂಡ ಮತ್ತು ಕಲಿಯಂಡ ತಂಡಗಳು ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ.

ಆಂದೋಲನ ಡೆಸ್ಕ್

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

1 min ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

28 mins ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

33 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

50 mins ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

1 hour ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago