Andolana originals

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್

ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ

ಮಡಿಕೇರಿ: ಕೊಡವ ಹಾಕಿ ಅಕಾಡೆಮಿ ವತಿಯಿಂದ ಹಾಕಿ ಕೂರ್ಗ್ ಸಂಸ್ಥೆ, ಎಂ.ಬಾಡಗ ಸ್ಪೋರ್ಟ್ಸ್ ರಿಕ್ರಿಯೇಷನ್ ಸಂಸ್ಥೆ, ಮೂರ್ನಾಡು ವಿದ್ಯಾಸಂಸ್ಥೆ ಸಹಕಾರದೊಂದಿಗೆ ಡಿ.೨೬ರಿಂದ ೩೦ರವರೆಗೆ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಮೂರ್ನಾಡಿನ ದಿ.ಬಾಚೆಟ್ಟೀರ ಲಾಲೂ ಮುದ್ದಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕೌಟುಂಬಿಕ ಹಾಕಿ ಉತ್ಸವಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿ ಹಾಕಿ ಪ್ರೇಮಿಗಳಿಗೆ ರಸದೌತಣ ನೀಡಲಿದೆ.

೧೯೯೭ನೇ ಇಸವಿಯಲ್ಲಿ ಪಾಂಡಂಡ ದಿ. ಕುಟ್ಟಪ್ಪ ಕುಟ್ಟಣಿ ಹಾಗೂ ಸಹೋದರ ಕಾಶಿ ಅವರಿಂದ ಕರಡದಲ್ಲಿ ಸುಮಾರು ಅರವತ್ತು ಕೊಡವ ಕುಟುಂಬಗಳಿಂದ ಶುರುವಾದ ಕೊಡವ ಕುಟುಂಬಗಳ ನಡುವೆ ಹಾಕಿ ಹಬ್ಬವು ಕೊಡಗಿನಎ ಭಾಗಗಳಲ್ಲಿ ನಡೆಯುತ್ತಾ ಬಂದಿದೆ.

೨೦೨೪ರಲ್ಲಿ ನಾಪೋಕ್ಲುವಿನಲ್ಲಿ ನಡೆದ ಕುಂಡ್ಯೋಳಂಡ ಹಾಕಿ ಹಬ್ಬವು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಕಳೆದ ವರ್ಷ ಮಡಿಕೇರಿಯಲ್ಲಿ ನಡೆದ ೨೫ನೇ ವರ್ಷದ ಮುದ್ದಂಡ ಹಾಕಿ ಹಬ್ಬವು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಎಂಬ ಬಿರುದನ್ನು ಪಡೆದಿರುವುದು ಕೊಡವ ಹಾಕಿ ಅಕಾಡೆಮಿಗೆ ಸಂದ ಗೌರವವಾಗಿದೆ. ಅದೇ ರೀತಿ ಪಾಂಡಂಡ ದಿ. ಕುಟ್ಟಪ್ಪ ಅವರಿಗೆ ಚಾಂಪಿಯನ್ ಟ್ರೋಫಿ ನಡೆಸುವ ಆಕಾಂಕ್ಷೆ ಇತ್ತು, ಆದರೆ, ಸಾಧ್ಯವಾಗಿರಲಿಲ್ಲ. ಇದರ ಭಾಗವಾಗಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಹಮ್ಮಿಕೊಳ್ಳಲಾಗಿದೆ.

೧೩ ತಂಡಗಳು ಭಾಗಿ: ೨೫ ವರ್ಷಗಳಲ್ಲಿ ಕೊಡವ ಹಾಕಿ ಹಬ್ಬದಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದ ಸುಮಾರು ೧೩ ತಂಡಗಳು ಈ ಚಾಂಪಿಯನ್ಸ್ ಟ್ರೋಫಿಗಾಗಿ ಸೆಣಸಾಟ ನಡೆಸುತ್ತಿವೆ. ೪ ಪೋಲ್‌ಗಳಾಗಿ ವಿಂಗಡಿಸಿದ್ದು, ಪ್ರತಿ ಪಂದ್ಯವು ಲೀಗ್ ಮಾದರಿಯಲ್ಲಿ ನಡೆಯಲಿದೆ. ನಂತರ ೪ ಪೋಲ್‌ನ ಅಗ್ರ ೪ ತಂಡಗಳು ಸೆಮಿಫೈನಲ್‌ನಲ್ಲಿ ಪಾಲ್ಗೊಳ್ಳುತ್ತವೆ. ಸೆಮಿಫೈನಲ್ ನಾಕೌಟ್ ಮಾದರಿಯಲ್ಲಿ ನಡೆಯಲಿದೆ.

ಸ್ಮರಣಿಕೆ ಗೌರವ: ೧೯೯೭ರಲ್ಲಿ ಕರಡದಲ್ಲಿ ಆರಂಭವಾದ ಮೊದಲ ಹಾಕಿ ಹಬ್ಬದಲ್ಲಿ ತಾಂತ್ರಿಕ ಸಮಿತಿಯಲ್ಲಿ ಕಾರ್ಯನಿರ್ವಹಿಸಿದವರು ಹಾಗೂ ವೀಕ್ಷಕ ವಿವರಣೆಗಾರರನ್ನು ಗುರುತಿಸಿ ಉದ್ಘಾಟನಾ ಪಂದ್ಯದ ದಿನದಂದು ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಅಂದು ೩ ಬಾರಿಯ ಒಲಿಂಪಿಯನ್ ಬೊಳ್ಳಂಡ ಪ್ರಮೀಳಾ ಅಯ್ಯಪ್ಪ ತವರು ಮನೆ(ಗುಡ್ಡಂಡ), ಭಾರತದ ಹಾಕಿ ತಂಡವನ್ನು ಪ್ರತಿನಿಧಿಸಿದ್ದ ಪಾಂಡಂಡ ಪುಷ್ಪಾ ಸುಬ್ಬಯ್ಯ ತವರು ಮನೆ(ಅಮ್ಮಾಟಂಡ) ಅಲ್ಲದೆ ಇನ್ನಿತರ ಗಣ್ಯರು ಉಪಸ್ಥಿತರಿರುವರು. ಅಲ್ಲದೇ, ಕಳೆದ ೨೫ ವರ್ಷಗಳಿಂದ ಹಾಕಿ ಹಬ್ಬವನ್ನು ಶ್ರಮವಹಿಸಿ ಆಯೋಜಿಸುತ್ತಿರುವ ೨೫ ಕೊಡವ ಕುಟುಂಬದ ಅಧ್ಯPರು, ಪಟ್ಟೆದಾರರನ್ನು ಅಂತಿಮ ಪಂದ್ಯಾಟದ ದಿನದಂದು ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ.

ವಿಜೇತ ತಂಡಕ್ಕೆ ೨ ಲಕ್ಷ ರೂ:. ಪ್ರಥಮ ಬಹುಮಾನ ಪಡೆದ ತಂಡಕ್ಕೆ ೨ ಲಕ್ಷ ರೂ.ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ ಪಡೆದ ತಂಡಕ್ಕೆ ೧ ಲಕ್ಷ ರೂ. ನಗದು ಮತ್ತು ಟ್ರೋಫಿ, ಸೆಮಿಫೈನಲ್‌ಗೆ ಅರ್ಹತೆ ಪಡೆದ ತಂಡಕ್ಕೆ ತಲಾ ೫೦,೦೦೦ ರೂ. ನಗದು ಮತ್ತು ಟ್ರೋಫಿ ಹಾಗೂ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದ ಪ್ರತಿ ತಂಡಕ್ಕೂ ತಲಾ ೨೫,೦೦೦ ರೂ. ಬಹುಮಾನ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ. ಜತೆಗೆ ಉತ್ತಮ ಫಾರ್ವರ್ಡ್, ಉತ್ತಮ ಫುಲ್ ಬ್ಯಾಕ್, ಉತ್ತಮ ಆಫ್, ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

” ೧೯೯೭ನೇ ಇಸವಿಯಲ್ಲಿ ಪಾಂಡಂಡ ದಿ.ಕುಟ್ಟಪ್ಪ ಕುಟ್ಟಣಿ ಹಾಗೂ ಸಹೋದರ ಕಾಶಿ ಅವರಿಂದ ಕರಡದಲ್ಲಿ ಸುಮಾರು ಅರವತ್ತು ಕೊಡವ ಕುಟುಂಬಗಳಿಂದ ಕೊಡವ ಕುಟುಂಬಗಳ ನಡುವೆ ಹಾಕಿಹಬ್ಬವು ಆರಂಭವಾಯಿತು. ಅದೇ ರೀತಿ ಪಾಂಡಂಡ ದಿ.ಕುಟ್ಟಪ್ಪ ಅವರಿಗೆ ಚಾಂಪಿಯನ್ ಟ್ರೋಫಿ ನಡೆಸುವ ಆಕಾಂಕ್ಷೆ ಇತ್ತು. ಆದರೆ, ಸಾಧ್ಯವಾಗಿರಲಿಲ್ಲ. ಇದರ ಭಾಗವಾಗಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಹಮ್ಮಿಕೊಳ್ಳಲಾಗಿದೆ.”

-ಪಾಡಂಡ ಕೆ.ಬೋಪಣ್ಣ, ಅಧ್ಯಕ್ಷರು, ಕೊಡವ ಹಾಕಿ ಅಕಾಡೆಮಿ

ಪಾಲ್ಗೊಳ್ಳುವ ತಂಡಗಳು:  ಎ ಗುಂಪಿನಲ್ಲಿ ಮಂಡೇಪಂಡ, ಪರದಂಡ, ಕೋಣೇರಿರ. ಬಿ ಗುಂಪಿನಲ್ಲಿ ಚೆಪ್ಪುಡಿರ, ಪಳಂಗಂಡ, ಅಂಜಪರವಂಡ, ಮುಕ್ಕಾಟಿರ(ಬೊಂದ), ಸಿ ಗುಂಪಿನಲ್ಲಿ ನೆಲ್ಲಮಕ್ಕಡ, ಕುಲ್ಲೇಟಿರ, ಮಾಚಮಾಡ. ಡಿ ಗುಂಪಿನಲ್ಲಿ ಕುಪ್ಪಂಡ, ಕೂತಂಡ ಮತ್ತು ಕಲಿಯಂಡ ತಂಡಗಳು ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ.

ಆಂದೋಲನ ಡೆಸ್ಕ್

Recent Posts

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…

3 mins ago

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

16 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

19 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

24 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

36 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

2 hours ago