ವಿರಾಜಪೇಟೆ: ಪಟ್ಟಣದ ಮೊದಲ ಮಹಿಳಾ ಆಟೋ ಚಾಲಕಿಯಾಗಿ ಕೋಮಲ ಪ್ರಿಯ ಕರ್ತವ್ಯ ಆರಂಭಿಸಿದ್ದು, ಗಣ್ಯರು ಶುಭ ಹಾರೈಸಿದರು.
ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಗರ ಠಾಣಾಽಕಾರಿ ಪ್ರಮೋದ್, ಮಹಿಳೆಯರು ಆರ್ಥಿಕವಾಗಿ ಮುಂದುವರಿಯುವ ನಿಟ್ಟಿನಲ್ಲಿ ಆಟೋ ಚಾಲಕಿಯಾಗಿ ಕೆಲಸ ನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಪುರುಷ ಪ್ರಧಾನವಾಗಿರುವ ಈ ಕಾಲಘಟ್ಟದಲ್ಲಿ ಎಲ್ಲರಂತೆ ಬದುಕು ತನ್ನದಾಗಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ. ಚಾಲಕರು ಕಾನೂನು ಪರಿಪಾಲನೆಯೊಂದಿಗೆ ದಾಖಲೆ ಪತ್ರಗಳನ್ನು ಸರಿದೂಗಿಸಿಕೊಂಡು ಚಾಲನೆಗೆ ಮುಂದಾಗಬೇಕು ಎಂದು ಹೇಳಿದರು.
ವಕೀಲರಾದ ಬಿ. ಎಸ್. ಪುಷ್ಪರಾಜ್ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಆರ್ಥಿಕವಾಗಿ ಸುಧಾರಣೆ ಹೊಂದಲು ಮಹಿಳೆಯರು ಮುಂದಾಗಬೇಕು. ಹಿಂಜರಿಕೆಯನ್ನು ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಿಯ ಆಟೋ ಚಾಲನೆಗೆ ಮುಂದಾಗಿರುವುದು ಶ್ಲಾಘನೀಯ ಎಂದರು. ಪುರಸಭೆಯ ಉಪಾಧ್ಯಕ್ಷ ಫಾಸಿಯ ತಬ್ಸುಂ, ಸದಸ್ಯರಾದ ಸಿ. ಕೆ. ಪೃಥ್ವಿನಾಥ್, ಸುನಿತಾ ಜೂನಾ, ಸಂಘದ ಸ್ಥಾಪಕ ಅಧ್ಯಕ್ಷ ಶಿವು, ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಪುಟ್ಟ ಬೆಳ್ಯಪ್ಪ , ಪ್ರಧಾನ ಕಾರ್ಯದರ್ಶಿ ಜೀವನ್, ಗೌ. ಅಧ್ಯಕ್ಷ ಪ್ರಭು ಕುಟ್ಟಪ್ಪ , ಪದಾಧಿಕಾರಿಗಳು ಹಾಜರಿದ್ದರು
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…