Andolana originals

ಮೊದಲ ಆಟೋ ಚಾಲಕಿಯಾಗಿ ಕೋಮಲ ಪ್ರಿಯ

ವಿರಾಜಪೇಟೆ: ಪಟ್ಟಣದ ಮೊದಲ ಮಹಿಳಾ ಆಟೋ ಚಾಲಕಿಯಾಗಿ ಕೋಮಲ ಪ್ರಿಯ ಕರ್ತವ್ಯ ಆರಂಭಿಸಿದ್ದು, ಗಣ್ಯರು ಶುಭ ಹಾರೈಸಿದರು.

ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಗರ ಠಾಣಾಽಕಾರಿ ಪ್ರಮೋದ್, ಮಹಿಳೆಯರು ಆರ್ಥಿಕವಾಗಿ ಮುಂದುವರಿಯುವ ನಿಟ್ಟಿನಲ್ಲಿ ಆಟೋ ಚಾಲಕಿಯಾಗಿ ಕೆಲಸ ನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಪುರುಷ ಪ್ರಧಾನವಾಗಿರುವ ಈ ಕಾಲಘಟ್ಟದಲ್ಲಿ ಎಲ್ಲರಂತೆ ಬದುಕು ತನ್ನದಾಗಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ. ಚಾಲಕರು ಕಾನೂನು ಪರಿಪಾಲನೆಯೊಂದಿಗೆ ದಾಖಲೆ ಪತ್ರಗಳನ್ನು ಸರಿದೂಗಿಸಿಕೊಂಡು ಚಾಲನೆಗೆ ಮುಂದಾಗಬೇಕು ಎಂದು ಹೇಳಿದರು.

ವಕೀಲರಾದ ಬಿ. ಎಸ್. ಪುಷ್ಪರಾಜ್ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಆರ್ಥಿಕವಾಗಿ ಸುಧಾರಣೆ ಹೊಂದಲು ಮಹಿಳೆಯರು ಮುಂದಾಗಬೇಕು. ಹಿಂಜರಿಕೆಯನ್ನು ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಿಯ ಆಟೋ ಚಾಲನೆಗೆ ಮುಂದಾಗಿರುವುದು ಶ್ಲಾಘನೀಯ ಎಂದರು. ಪುರಸಭೆಯ ಉಪಾಧ್ಯಕ್ಷ ಫಾಸಿಯ ತಬ್ಸುಂ, ಸದಸ್ಯರಾದ ಸಿ. ಕೆ. ಪೃಥ್ವಿನಾಥ್, ಸುನಿತಾ ಜೂನಾ, ಸಂಘದ ಸ್ಥಾಪಕ ಅಧ್ಯಕ್ಷ ಶಿವು, ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಪುಟ್ಟ ಬೆಳ್ಯಪ್ಪ , ಪ್ರಧಾನ ಕಾರ್ಯದರ್ಶಿ ಜೀವನ್, ಗೌ. ಅಧ್ಯಕ್ಷ ಪ್ರಭು ಕುಟ್ಟಪ್ಪ , ಪದಾಧಿಕಾರಿಗಳು ಹಾಜರಿದ್ದರು

 

andolana

Recent Posts

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

16 mins ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

51 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

1 hour ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

2 hours ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

2 hours ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

4 hours ago