Andolana originals

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು

ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ ಅಭಯಾರಣ್ಯಗಳನ್ನು ತಾಲ್ಲೂಕು ಹಂಚಿಕೊಂಡಿರುವುದರಿಂದ ರೆಸಾರ್ಟ್‌ಗಳು, ಹೋಂಸ್ಟೇಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಗೊಂಡಿದ್ದು, ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

ತಾಲ್ಲೂಕು ಸಮೀಪದ ಕೊಡಗಿನ ಹೋಂಸ್ಟೇ, ರೆಸಾರ್ಟ್ ಒಂದರಲ್ಲಿ ಪ್ರವಾಸಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣವಾದ ಬಳಿಕ ತಾಲ್ಲೂಕಿನ ರೆಸಾರ್ಟ್‌ಗಳಲ್ಲಿ, ಹೋಂಸ್ಟೇ ಗಳಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಜಾಗೃತರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ೧೪ ರೆಸಾರ್ಟ್‌ಗಳು ಮತ್ತು ೮ ಹೋಂ ಸ್ಟೇಗಳಿದ್ದು ಪ್ರತಿನಿತ್ಯವೂ ರಾಜ್ಯ, ಹೊರರಾಜ್ಯ, ವಿದೇಶಗಳಿಂದ ಬರುವ ಪ್ರವಾಸಿಗರು ವಾಸ್ತವ್ಯ ಮಾಡುತ್ತಾರೆ.

ಪ್ರತಿಷ್ಠಿತ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ಸರ್ಕಾರದ ನಿಯಮಗಳು ಪಾಲನೆ ಆಗುತ್ತಿದ್ದರೆ, ಅನೇಕ ಕಡೆ ಕೆಲವೊಂದು ನಿಯಮಗಳು ಬೇಕಾಬಿಟ್ಟಿ ಪಾಲನೆ ಆಗುತ್ತಿವೆ. ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ಹೋಂ ಸ್ಟೇ, ರೆಸಾರ್ಟ್‌ಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

ಈ ಭಾಗದಲ್ಲಿ ಅನೇಕ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ವಾಸ್ತವ್ಯ ಮಾಡಿದ್ದೇವೆ. ಸರ್ಕಾರದ ನಿಯಮಗಳನ್ನು ಪಾಲಿಸಿ ಪ್ರವಾಸಿಗರನ್ನು ನಿಯಮಾನುಸಾರ ನೋಡಿಕೊಳ್ಳುತ್ತಿದ್ದಾರೆ. -ಹೋಂಡಾ ಜಯರಾಮ್ ಗೌಡ, ಪ್ರವಾಸಿಗ

ಸರ್ಕಾರದ ಮತ್ತು ರೆಸಾರ್ಟ್‌ಗಳ ಎಸ್‌ಒಪಿ ಮತ್ತು ಜೆಡಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ಸಾಧ್ಯವಿಲ್ಲ. ಒಂದುವೇಳೆ ನಡೆದರೂ ತಪ್ಪಿತಸ್ಥರನ್ನು ಕ್ಷಣದಲ್ಲೇ ಪತ್ತೆ ಹಚ್ಚಬಹುದು. ರೆಸಾರ್ಟ್ ಮತ್ತು ಹೋಂ ಸ್ಟೇ ಹೋಟೆಲ್‌ನವರಿಗೆ ಪ್ರವಾಸಿಗರೇ ಅನ್ನದಾತರಾಗಿದ್ದು, ಅಂತಹವರ ಮೇಲೆ ಕುಕೃತ್ಯ ಎಸಗುವುದು ಖಂಡನೀಯ. ನಾವು ಸರ್ಕಾರದ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದೇವೆ. -ಸಂದೇಶ್, ಮಾಲೀಕರು, ಕಬಿನಿ ರಿವರ್ ಎಡ್ಜ್ ರೆಸಾರ್ಟ್

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago