ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು
ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ ಅಭಯಾರಣ್ಯಗಳನ್ನು ತಾಲ್ಲೂಕು ಹಂಚಿಕೊಂಡಿರುವುದರಿಂದ ರೆಸಾರ್ಟ್ಗಳು, ಹೋಂಸ್ಟೇಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಗೊಂಡಿದ್ದು, ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ತಾಲ್ಲೂಕು ಸಮೀಪದ ಕೊಡಗಿನ ಹೋಂಸ್ಟೇ, ರೆಸಾರ್ಟ್ ಒಂದರಲ್ಲಿ ಪ್ರವಾಸಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣವಾದ ಬಳಿಕ ತಾಲ್ಲೂಕಿನ ರೆಸಾರ್ಟ್ಗಳಲ್ಲಿ, ಹೋಂಸ್ಟೇ ಗಳಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಜಾಗೃತರಾಗುತ್ತಿದ್ದಾರೆ.
ತಾಲ್ಲೂಕಿನಲ್ಲಿ ೧೪ ರೆಸಾರ್ಟ್ಗಳು ಮತ್ತು ೮ ಹೋಂ ಸ್ಟೇಗಳಿದ್ದು ಪ್ರತಿನಿತ್ಯವೂ ರಾಜ್ಯ, ಹೊರರಾಜ್ಯ, ವಿದೇಶಗಳಿಂದ ಬರುವ ಪ್ರವಾಸಿಗರು ವಾಸ್ತವ್ಯ ಮಾಡುತ್ತಾರೆ.
ಪ್ರತಿಷ್ಠಿತ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ಸರ್ಕಾರದ ನಿಯಮಗಳು ಪಾಲನೆ ಆಗುತ್ತಿದ್ದರೆ, ಅನೇಕ ಕಡೆ ಕೆಲವೊಂದು ನಿಯಮಗಳು ಬೇಕಾಬಿಟ್ಟಿ ಪಾಲನೆ ಆಗುತ್ತಿವೆ. ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಈ ಭಾಗದಲ್ಲಿ ಅನೇಕ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ವಾಸ್ತವ್ಯ ಮಾಡಿದ್ದೇವೆ. ಸರ್ಕಾರದ ನಿಯಮಗಳನ್ನು ಪಾಲಿಸಿ ಪ್ರವಾಸಿಗರನ್ನು ನಿಯಮಾನುಸಾರ ನೋಡಿಕೊಳ್ಳುತ್ತಿದ್ದಾರೆ. -ಹೋಂಡಾ ಜಯರಾಮ್ ಗೌಡ, ಪ್ರವಾಸಿಗ
ಸರ್ಕಾರದ ಮತ್ತು ರೆಸಾರ್ಟ್ಗಳ ಎಸ್ಒಪಿ ಮತ್ತು ಜೆಡಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ರೆಸಾರ್ಟ್ಗಳು ಮತ್ತು ಹೋಂ ಸ್ಟೇಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ಸಾಧ್ಯವಿಲ್ಲ. ಒಂದುವೇಳೆ ನಡೆದರೂ ತಪ್ಪಿತಸ್ಥರನ್ನು ಕ್ಷಣದಲ್ಲೇ ಪತ್ತೆ ಹಚ್ಚಬಹುದು. ರೆಸಾರ್ಟ್ ಮತ್ತು ಹೋಂ ಸ್ಟೇ ಹೋಟೆಲ್ನವರಿಗೆ ಪ್ರವಾಸಿಗರೇ ಅನ್ನದಾತರಾಗಿದ್ದು, ಅಂತಹವರ ಮೇಲೆ ಕುಕೃತ್ಯ ಎಸಗುವುದು ಖಂಡನೀಯ. ನಾವು ಸರ್ಕಾರದ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದೇವೆ. -ಸಂದೇಶ್, ಮಾಲೀಕರು, ಕಬಿನಿ ರಿವರ್ ಎಡ್ಜ್ ರೆಸಾರ್ಟ್
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…