ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು
ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ ಅಭಯಾರಣ್ಯಗಳನ್ನು ತಾಲ್ಲೂಕು ಹಂಚಿಕೊಂಡಿರುವುದರಿಂದ ರೆಸಾರ್ಟ್ಗಳು, ಹೋಂಸ್ಟೇಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಗೊಂಡಿದ್ದು, ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ತಾಲ್ಲೂಕು ಸಮೀಪದ ಕೊಡಗಿನ ಹೋಂಸ್ಟೇ, ರೆಸಾರ್ಟ್ ಒಂದರಲ್ಲಿ ಪ್ರವಾಸಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣವಾದ ಬಳಿಕ ತಾಲ್ಲೂಕಿನ ರೆಸಾರ್ಟ್ಗಳಲ್ಲಿ, ಹೋಂಸ್ಟೇ ಗಳಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಜಾಗೃತರಾಗುತ್ತಿದ್ದಾರೆ.
ತಾಲ್ಲೂಕಿನಲ್ಲಿ ೧೪ ರೆಸಾರ್ಟ್ಗಳು ಮತ್ತು ೮ ಹೋಂ ಸ್ಟೇಗಳಿದ್ದು ಪ್ರತಿನಿತ್ಯವೂ ರಾಜ್ಯ, ಹೊರರಾಜ್ಯ, ವಿದೇಶಗಳಿಂದ ಬರುವ ಪ್ರವಾಸಿಗರು ವಾಸ್ತವ್ಯ ಮಾಡುತ್ತಾರೆ.
ಪ್ರತಿಷ್ಠಿತ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ಸರ್ಕಾರದ ನಿಯಮಗಳು ಪಾಲನೆ ಆಗುತ್ತಿದ್ದರೆ, ಅನೇಕ ಕಡೆ ಕೆಲವೊಂದು ನಿಯಮಗಳು ಬೇಕಾಬಿಟ್ಟಿ ಪಾಲನೆ ಆಗುತ್ತಿವೆ. ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಈ ಭಾಗದಲ್ಲಿ ಅನೇಕ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ವಾಸ್ತವ್ಯ ಮಾಡಿದ್ದೇವೆ. ಸರ್ಕಾರದ ನಿಯಮಗಳನ್ನು ಪಾಲಿಸಿ ಪ್ರವಾಸಿಗರನ್ನು ನಿಯಮಾನುಸಾರ ನೋಡಿಕೊಳ್ಳುತ್ತಿದ್ದಾರೆ. -ಹೋಂಡಾ ಜಯರಾಮ್ ಗೌಡ, ಪ್ರವಾಸಿಗ
ಸರ್ಕಾರದ ಮತ್ತು ರೆಸಾರ್ಟ್ಗಳ ಎಸ್ಒಪಿ ಮತ್ತು ಜೆಡಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ರೆಸಾರ್ಟ್ಗಳು ಮತ್ತು ಹೋಂ ಸ್ಟೇಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ಸಾಧ್ಯವಿಲ್ಲ. ಒಂದುವೇಳೆ ನಡೆದರೂ ತಪ್ಪಿತಸ್ಥರನ್ನು ಕ್ಷಣದಲ್ಲೇ ಪತ್ತೆ ಹಚ್ಚಬಹುದು. ರೆಸಾರ್ಟ್ ಮತ್ತು ಹೋಂ ಸ್ಟೇ ಹೋಟೆಲ್ನವರಿಗೆ ಪ್ರವಾಸಿಗರೇ ಅನ್ನದಾತರಾಗಿದ್ದು, ಅಂತಹವರ ಮೇಲೆ ಕುಕೃತ್ಯ ಎಸಗುವುದು ಖಂಡನೀಯ. ನಾವು ಸರ್ಕಾರದ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದೇವೆ. -ಸಂದೇಶ್, ಮಾಲೀಕರು, ಕಬಿನಿ ರಿವರ್ ಎಡ್ಜ್ ರೆಸಾರ್ಟ್
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…