Andolana originals

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ

ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು ನೌಕರರು, ಅಧಿಕಾರಿಗಳಿಗೆ ಕಳೆದ ೪-೫ ತಿಂಗಳುಗಳಿಂದ ವೇತನ ಪಾವತಿಯಾಗದೆ ಜೀವನ ನಡೆಸಲು ಪರದಾಡುತ್ತಿದ್ದರೂ ಮೇಲಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಒಂದು ತಿಂಗಳು ಸಂಬಳವಾಗದಿದ್ದರೇ ಜೀವನ ನಡೆಸುವುದು ಕಷ್ಟ ಎಂಬ ಈ ದಿನಮಾನದಲ್ಲಿ ೪-೫ ತಿಂಗಳುಗಳಿಂದ ಪುರಸಭೆಯಲ್ಲಿ ಕೆಲಸ ನಿರ್ವಹಿಸುವ ಯಾರಿಗೂ ವೇತನ ಆಗಿಲ್ಲ. ಅಧಿಕಾರಿ ವರ್ಗದವರಿಗೆ ಎರಡು ಮೂರು ತಿಂಗಳು ಪಾವತಿ ಆಗದಿದ್ದರೂ ಕಚೇರಿಯಲ್ಲಿ ಆಗುವ ಅನುಕೂಲದಿಂದ ಸ್ವಲ್ಪ ಮಟ್ಟಿಗಾದರೂ ಜೀವನ ನಡೆಸಬಹುದು. ಆದರೆ, ಉಳಿದ ಐವತ್ತಕ್ಕೂ ಹೆಚ್ಚು ಜನ ಪೌರಕಾರ್ಮಿಕರು ಮತ್ತು ನೌಕರರು ಪ್ರತಿನಿತ್ಯ ಮೇಲಧಿಕಾರಿಗಳ ಬಳಿಗೆ ವೇತನಕ್ಕಾಗಿ ಅಲೆದಾಡುತ್ತಿದ್ದಾರೆ.

ಪುರಸಭೆಯಲ್ಲಿ ಒಟ್ಟು ೫೬ ಮಂದಿ ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದ್ದು, ೧೫ ಮಂದಿ ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಖಾಯಂ ನೌಕರರಿಗೆ ೩ ತಿಂಗಳುಗಳಿಂದ ವೇತನ ನೀಡಿಲ್ಲ. ೧೫ ಮಂದಿ ಪೌರಕಾರ್ಮಿಕರಿಗೆ ೫ ತಿಂಗಳುಗಳಿಂದ ವೇತನ ನೀಡಿಲ್ಲ. ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ೧೫ ಜನ ಪೌರಕಾರ್ಮಿಕರ ಗುತ್ತಿಗೆ ಅವಧಿ ಪೂರ್ಣಗೊಂಡು ಐದು ತಿಂಗಳಾಗಿವೆ. ಅವರಿಂದ ಸ್ವಚ್ಛತಾ ಕೆಲಸ ಮಾಡಿಸಿಕೊಳ್ಳುತ್ತಿದ್ದರೂ ಟೆಂಡರ್ ಪ್ರಕ್ರಿಯೆ ಮೂಲಕ ಅವರಿಗೂ ವೇತನ ನೀಡಿಲ್ಲ.

ಪಟ್ಟಣದ ಪುರಸಭೆಯಲ್ಲಿ ಆಡಳಿತ ವ್ಯವಸ್ಥೆ ತೀವ್ರ ಕುಸಿತ ಕಂಡಿರುವುದರಿಂದ ಒಂದೆಡೆ ಪೌರನೌಕರರು ವೇತನವಿಲ್ಲದೆ ಸಂಕಷ್ಟದಲ್ಲಿದ್ದರೆ ಇನ್ನೊಂದು ಕಡೆ ಜನಸಾಮಾನ್ಯರಿಗೆ ಕಚೇರಿ ಕೆಲಸ ಕಾರ್ಯಗಳು ಆಗುತ್ತಿಲ್ಲ. ಪ್ರತಿನಿತ್ಯ ಕಚೇರಿಗೆ ಅಲೆದಾಡಿ ಮೇಲಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಎರಡು ತಿಂಗಳುಗಳು ಕಳೆದರೂ ಪುರಸಭೆಗೆ ಖಾಯಂ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಯನ್ನು ನೇಮಕ ಮಾಡದೇ ಇರುವುದರಿಂದ ಹಿಂದುಳಿದಿರುವ ಪುರಸಭೆ ಮತ್ತಷ್ಟು ಹಿಂದುಳಿದು ಅನೇಕ ಭ್ರಷ್ಟಾಚಾರ ಮತ್ತು ಅವ್ಯವಹಾರಗಳಿಗೆ ದಾರಿ ಮಾಡಿಕೊಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅನೇಕ ಯೋಜನೆ ಮತ್ತು ಸವಲತ್ತುಗಳು, ಅನುದಾನವನ್ನು ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ನೀಡಲಾಗುತ್ತಿದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಿಸುವ ಅಧಿಕಾರಿಗಳೇ ಇಲ್ಲದೆ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಮತ್ತು ಪೌರಕಾರ್ಮಿಕರು ನೌಕರರು, ಅಧಿಕಾರಿಗಳಿಗೆ ಸಂಬಳ ನೀಡದೆ ಸಮಸ್ಯೆ ಎದುರಾಗಿದೆ. ಈಗಲಾದರೂ ಜಿಲ್ಲಾಽಕಾರಿಗಳು, ಶಾಸಕರು, ಸಂಸದರು, ಸಚಿವರು ಇತ್ತ ಗಮನಹರಿಸಬೇಕಾಗಿದೆ.

” ಪೌರಕಾರ್ಮಿಕರಾಗಿ ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು, ಇಲ್ಲಿ ನೀಡುವ ಸಂಬಳವನ್ನೇ ನಂಬಿ ಜೀವನ ಮಾಡುತ್ತಿದ್ದೇವೆ. ಐದು ತಿಂಗಳುಗಳಿಂದ ಸಂಬಳವೇ ಆಗಿಲ್ಲ. ನಿತ್ಯವೂ ಜೀವನ ನಡೆಸುವುದೇ ಕಷ್ಟವಾಗಿದೆ. ನಮ್ಮ ಕಷ್ಟದ ಕೂಗು ಜನಪ್ರತಿನಿಽಗಳಿಗೆ ಮತ್ತು ಅಽಕಾರಿಗಳಿಗೆ ತಲುಪುತ್ತಿಲ್ಲ.”

-ನೊಂದ ಪೌರಕಾರ್ಮಿಕ

” ಅನುದಾನದ ಕೊರತೆಯಿಂದ ೩ ತಿಂಗಳುಗಳಿಂದ ಖಾಯಂ ನೌಕರರಿಗೆ ವೇತನ ಪಾವತಿಯಾಗಿರಲಿಲ್ಲ. ಖಾಯಂ ಪೌರಕಾರ್ಮಿಕರು, ನೌಕರರು ಮತ್ತು ಅಧಿಕಾರಿಗಳಿಗೆ ಎರಡು ತಿಂಗಳುಗಳ ಸಂಬಳವನ್ನು ನೀಡಲು ಕ್ರಮಕೈಗೊಂಡಿದ್ದೇನೆ. ೫ ತಿಂಗಳುಗಳಿಂದ ಪುರಸಭೆಯ ಗುತ್ತಿಗೆ ಪೌರಕಾರ್ಮಿಕರಿಗೆ ಸಂಬಳ ನೀಡಲಾಗಿಲ್ಲ. ಹೀಗಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆ ಪೌರಕಾರ್ಮಿಕರಿಗೆ ಐದು ತಿಂಗಳುಗಳ ಸಂಬಳ ನೀಡಲು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದೇನೆ. ನಾನು ಪ್ರಭಾರ ಮುಖ್ಯಾಧಿಕಾರಿಯಾಗಿರುವುದರಿಂದ ನನ್ನ ವ್ಯಾಪ್ತಿಗೆ ಬರುವಷ್ಟೇ ಕೆಲಸವನ್ನು ಮಾತ್ರ ನಿರ್ವಹಿಸಲು ಸಾಧ್ಯ.”

-ಸಂತೋಷ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

9 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

1 hour ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

3 hours ago