Andolana originals

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ

ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು ನೌಕರರು, ಅಧಿಕಾರಿಗಳಿಗೆ ಕಳೆದ ೪-೫ ತಿಂಗಳುಗಳಿಂದ ವೇತನ ಪಾವತಿಯಾಗದೆ ಜೀವನ ನಡೆಸಲು ಪರದಾಡುತ್ತಿದ್ದರೂ ಮೇಲಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಒಂದು ತಿಂಗಳು ಸಂಬಳವಾಗದಿದ್ದರೇ ಜೀವನ ನಡೆಸುವುದು ಕಷ್ಟ ಎಂಬ ಈ ದಿನಮಾನದಲ್ಲಿ ೪-೫ ತಿಂಗಳುಗಳಿಂದ ಪುರಸಭೆಯಲ್ಲಿ ಕೆಲಸ ನಿರ್ವಹಿಸುವ ಯಾರಿಗೂ ವೇತನ ಆಗಿಲ್ಲ. ಅಧಿಕಾರಿ ವರ್ಗದವರಿಗೆ ಎರಡು ಮೂರು ತಿಂಗಳು ಪಾವತಿ ಆಗದಿದ್ದರೂ ಕಚೇರಿಯಲ್ಲಿ ಆಗುವ ಅನುಕೂಲದಿಂದ ಸ್ವಲ್ಪ ಮಟ್ಟಿಗಾದರೂ ಜೀವನ ನಡೆಸಬಹುದು. ಆದರೆ, ಉಳಿದ ಐವತ್ತಕ್ಕೂ ಹೆಚ್ಚು ಜನ ಪೌರಕಾರ್ಮಿಕರು ಮತ್ತು ನೌಕರರು ಪ್ರತಿನಿತ್ಯ ಮೇಲಧಿಕಾರಿಗಳ ಬಳಿಗೆ ವೇತನಕ್ಕಾಗಿ ಅಲೆದಾಡುತ್ತಿದ್ದಾರೆ.

ಪುರಸಭೆಯಲ್ಲಿ ಒಟ್ಟು ೫೬ ಮಂದಿ ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದ್ದು, ೧೫ ಮಂದಿ ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಖಾಯಂ ನೌಕರರಿಗೆ ೩ ತಿಂಗಳುಗಳಿಂದ ವೇತನ ನೀಡಿಲ್ಲ. ೧೫ ಮಂದಿ ಪೌರಕಾರ್ಮಿಕರಿಗೆ ೫ ತಿಂಗಳುಗಳಿಂದ ವೇತನ ನೀಡಿಲ್ಲ. ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ೧೫ ಜನ ಪೌರಕಾರ್ಮಿಕರ ಗುತ್ತಿಗೆ ಅವಧಿ ಪೂರ್ಣಗೊಂಡು ಐದು ತಿಂಗಳಾಗಿವೆ. ಅವರಿಂದ ಸ್ವಚ್ಛತಾ ಕೆಲಸ ಮಾಡಿಸಿಕೊಳ್ಳುತ್ತಿದ್ದರೂ ಟೆಂಡರ್ ಪ್ರಕ್ರಿಯೆ ಮೂಲಕ ಅವರಿಗೂ ವೇತನ ನೀಡಿಲ್ಲ.

ಪಟ್ಟಣದ ಪುರಸಭೆಯಲ್ಲಿ ಆಡಳಿತ ವ್ಯವಸ್ಥೆ ತೀವ್ರ ಕುಸಿತ ಕಂಡಿರುವುದರಿಂದ ಒಂದೆಡೆ ಪೌರನೌಕರರು ವೇತನವಿಲ್ಲದೆ ಸಂಕಷ್ಟದಲ್ಲಿದ್ದರೆ ಇನ್ನೊಂದು ಕಡೆ ಜನಸಾಮಾನ್ಯರಿಗೆ ಕಚೇರಿ ಕೆಲಸ ಕಾರ್ಯಗಳು ಆಗುತ್ತಿಲ್ಲ. ಪ್ರತಿನಿತ್ಯ ಕಚೇರಿಗೆ ಅಲೆದಾಡಿ ಮೇಲಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಎರಡು ತಿಂಗಳುಗಳು ಕಳೆದರೂ ಪುರಸಭೆಗೆ ಖಾಯಂ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಯನ್ನು ನೇಮಕ ಮಾಡದೇ ಇರುವುದರಿಂದ ಹಿಂದುಳಿದಿರುವ ಪುರಸಭೆ ಮತ್ತಷ್ಟು ಹಿಂದುಳಿದು ಅನೇಕ ಭ್ರಷ್ಟಾಚಾರ ಮತ್ತು ಅವ್ಯವಹಾರಗಳಿಗೆ ದಾರಿ ಮಾಡಿಕೊಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅನೇಕ ಯೋಜನೆ ಮತ್ತು ಸವಲತ್ತುಗಳು, ಅನುದಾನವನ್ನು ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ನೀಡಲಾಗುತ್ತಿದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಿಸುವ ಅಧಿಕಾರಿಗಳೇ ಇಲ್ಲದೆ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಮತ್ತು ಪೌರಕಾರ್ಮಿಕರು ನೌಕರರು, ಅಧಿಕಾರಿಗಳಿಗೆ ಸಂಬಳ ನೀಡದೆ ಸಮಸ್ಯೆ ಎದುರಾಗಿದೆ. ಈಗಲಾದರೂ ಜಿಲ್ಲಾಽಕಾರಿಗಳು, ಶಾಸಕರು, ಸಂಸದರು, ಸಚಿವರು ಇತ್ತ ಗಮನಹರಿಸಬೇಕಾಗಿದೆ.

” ಪೌರಕಾರ್ಮಿಕರಾಗಿ ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು, ಇಲ್ಲಿ ನೀಡುವ ಸಂಬಳವನ್ನೇ ನಂಬಿ ಜೀವನ ಮಾಡುತ್ತಿದ್ದೇವೆ. ಐದು ತಿಂಗಳುಗಳಿಂದ ಸಂಬಳವೇ ಆಗಿಲ್ಲ. ನಿತ್ಯವೂ ಜೀವನ ನಡೆಸುವುದೇ ಕಷ್ಟವಾಗಿದೆ. ನಮ್ಮ ಕಷ್ಟದ ಕೂಗು ಜನಪ್ರತಿನಿಽಗಳಿಗೆ ಮತ್ತು ಅಽಕಾರಿಗಳಿಗೆ ತಲುಪುತ್ತಿಲ್ಲ.”

-ನೊಂದ ಪೌರಕಾರ್ಮಿಕ

” ಅನುದಾನದ ಕೊರತೆಯಿಂದ ೩ ತಿಂಗಳುಗಳಿಂದ ಖಾಯಂ ನೌಕರರಿಗೆ ವೇತನ ಪಾವತಿಯಾಗಿರಲಿಲ್ಲ. ಖಾಯಂ ಪೌರಕಾರ್ಮಿಕರು, ನೌಕರರು ಮತ್ತು ಅಧಿಕಾರಿಗಳಿಗೆ ಎರಡು ತಿಂಗಳುಗಳ ಸಂಬಳವನ್ನು ನೀಡಲು ಕ್ರಮಕೈಗೊಂಡಿದ್ದೇನೆ. ೫ ತಿಂಗಳುಗಳಿಂದ ಪುರಸಭೆಯ ಗುತ್ತಿಗೆ ಪೌರಕಾರ್ಮಿಕರಿಗೆ ಸಂಬಳ ನೀಡಲಾಗಿಲ್ಲ. ಹೀಗಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆ ಪೌರಕಾರ್ಮಿಕರಿಗೆ ಐದು ತಿಂಗಳುಗಳ ಸಂಬಳ ನೀಡಲು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದೇನೆ. ನಾನು ಪ್ರಭಾರ ಮುಖ್ಯಾಧಿಕಾರಿಯಾಗಿರುವುದರಿಂದ ನನ್ನ ವ್ಯಾಪ್ತಿಗೆ ಬರುವಷ್ಟೇ ಕೆಲಸವನ್ನು ಮಾತ್ರ ನಿರ್ವಹಿಸಲು ಸಾಧ್ಯ.”

-ಸಂತೋಷ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

7 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

7 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago