Andolana originals

ಮುಖ್ಯಾಧಿಕಾರಿ, ಆಡಳಿತಾಧಿಕಾರಿಗಳಿಲ್ಲದ ಕೋಟೆ ಪುರಸಭೆ!

ಮಂಜು ಕೋಟೆ

ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ 

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಗಳೇ ಇಲ್ಲದೆ ಸಾರ್ವಜನಿಕರು ಮತ್ತು ನಿವಾಸಿಗಳು ಮೂಲಸೌಕರ್ಯಕ್ಕೆ, ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಪುರಸಭೆಯ ಮುಖ್ಯಾಧಿಕಾರಿಯ ಹುದ್ದೆ ಒಂದೂವರೆ ತಿಂಗಳಿನಿಂದ ಖಾಲಿಯಾಗಿದ್ದು, ೧೫ ದಿನಗಳ ಹಿಂದೆ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯೂ ಇಲ್ಲದೆ ಪಟ್ಟಣದ ಜನತೆ ಪ್ರತಿನಿತ್ಯ ನರಕಯಾತನೆಪಡುತ್ತಿದ್ದಾರೆ.

ಈಗಾಗಲೇ ಅನೇಕ ಭ್ರಷ್ಟಾಚಾರ, ಅವ್ಯವಹಾರಗಳಿಂದ ಕುಖ್ಯಾತಿಗೆ ಒಳಗಾಗಿರುವ ಪುರಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯಿಂದಾಗಿ ಅನೇಕ ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಅನೈರ್ಮಲ್ಯ, ಚರಂಡಿಯ ನೀರು ರಸ್ತೆಗಳಲ್ಲಿ ಹರಿಯುತ್ತಿರುವುದು, ಬೀದಿ ದೀಪಗಳು ನಿರ್ವಹಣೆಯಿಲ್ಲದೆ ಕೆಟ್ಟುನಿಂತಿರುವುದರಿಂದ ಹಲವೆಡೆ ಕಗ್ಗತ್ತಲು ಆವರಿಸಿದೆ. ಬೀದಿ ನಾಯಿಗಳು, ಕೋತಿಗಳ ಹಾವಳಿಯಿಂದ ನಿವಾಸಿಗಳು ತತ್ತರಿಸಿ ಹೋಗಿದ್ದಾರೆ.

ಜತೆಗೆ ಸಾರ್ವಜನಿಕರು ತಮ್ಮ ಮನೆ, ನಿವೇಶನ, ಇನ್ನಿತರ ಕೆಲಸ ಕಾರ್ಯಗಳಿಗೆ ನಿತ್ಯವೂ ಕಚೇರಿಗೆ ಅಲೆದಾಡಿದರೂ ಯಾವುದೇ ಕೆಲಸಗಳು ಆಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಹೀಗಾಗಿ ಅಧಿಕಾರಿಗಳು, ಶಾಸಕರು, ಸಂಸದರು, ಸಚಿವರು, ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಪುರಸಭೆಯಲ್ಲಿ ಮುಖ್ಯಾಧಿಕಾರಿಗಳು, ಜನಪ್ರತಿನಿಧಿಗಳು ಇದ್ದಾಗಲೇ ಜನರ ಕೆಲಸಗಳು ಸುಲಭವಾಗಿ ನಡೆಯುವುದಿಲ್ಲ. ಈಗ ಮುಖ್ಯಾಧಿಕಾರಿ, ಆಡಳಿತಾಧಿಕಾರಿಯೇ ಇಲ್ಲದಿರುವುದರಿಂದ ಹೇಳುವವರು, ಕೇಳುವವರೇ ಇಲ್ಲದಂತಾಗಿದ್ದಾರೆ. ಆದ್ದರಿಂದ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಇನ್ನಿತರರು ಪುರಸಭೆ ಮುಖ್ಯಾಧಿಕಾರಿ ಮತ್ತು ಆಡಳಿತ ಅಧಿಕಾರಿಯನ್ನು ಶೀಘ್ರದಲ್ಲಿ ನೇಮಕ ಮಾಡಿ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಮುಂದಾಗಬೇಕಾಗಿದೆ.

” ನಾನು ಎರಡು ದಿನಗಳ ಹಿಂದಷ್ಟೇ ಹುಣಸೂರಿನ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಪುರಸಭೆ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಪೂರ್ಣಗೊಂಡಿರುವುದರಿಂದ ಪುರಸಭೆಯ ಆಡಳಿತ ಅಧಿಕಾರಿಯಾಗಿ ಶೀಘ್ರವೇ ಅಧಿಕಾರ ಸ್ವೀಕರಿಸಲಿದ್ದೇನೆ. ಅಲ್ಲಿ ಆಗಬೇಕಾಗಿ ರುವ ಕೆಲಸ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುತ್ತೇನೆ.”

-ಮಂಜುನಾಥ್, ಉಪವಿಭಾಗಾಧಿಕಾರಿ, ಹುಣಸೂರು

” ಕೋಟೆ ಪುರಸಭೆ ವ್ಯಾಪ್ತಿಯಲ್ಲಿ ವರ್ಷಗಳಿಂದ ಆಡಳಿತ ಸಂಪೂರ್ಣ ಕುಸಿತವಾಗಿದೆ. ಸಾರ್ವಜನಿಕರಿಗೆ ಮೂಲಸೌಕರ್ಯವಿಲ್ಲದೆ ನಿತ್ಯ ಪರದಾಡುತ್ತಿದ್ದರೂ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಖಾಲಿಯಾಗಿರುವ ಮುಖ್ಯ ಅಧಿಕಾರಿ ಮತ್ತು ಆಡಳಿತ ಅಧಿಕಾರಿಯನ್ನು ನೇಮಕ ಮಾಡಿಲ್ಲ.

-ಲಾರಿ ಪ್ರಕಾಶ್, ಪಟ್ಟಣದ ನಿವಾಸಿ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

23 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago