ಮಂಜು ಕೋಟೆ
ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ
ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಗಳೇ ಇಲ್ಲದೆ ಸಾರ್ವಜನಿಕರು ಮತ್ತು ನಿವಾಸಿಗಳು ಮೂಲಸೌಕರ್ಯಕ್ಕೆ, ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ.
ಪುರಸಭೆಯ ಮುಖ್ಯಾಧಿಕಾರಿಯ ಹುದ್ದೆ ಒಂದೂವರೆ ತಿಂಗಳಿನಿಂದ ಖಾಲಿಯಾಗಿದ್ದು, ೧೫ ದಿನಗಳ ಹಿಂದೆ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯೂ ಇಲ್ಲದೆ ಪಟ್ಟಣದ ಜನತೆ ಪ್ರತಿನಿತ್ಯ ನರಕಯಾತನೆಪಡುತ್ತಿದ್ದಾರೆ.
ಈಗಾಗಲೇ ಅನೇಕ ಭ್ರಷ್ಟಾಚಾರ, ಅವ್ಯವಹಾರಗಳಿಂದ ಕುಖ್ಯಾತಿಗೆ ಒಳಗಾಗಿರುವ ಪುರಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯಿಂದಾಗಿ ಅನೇಕ ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಅನೈರ್ಮಲ್ಯ, ಚರಂಡಿಯ ನೀರು ರಸ್ತೆಗಳಲ್ಲಿ ಹರಿಯುತ್ತಿರುವುದು, ಬೀದಿ ದೀಪಗಳು ನಿರ್ವಹಣೆಯಿಲ್ಲದೆ ಕೆಟ್ಟುನಿಂತಿರುವುದರಿಂದ ಹಲವೆಡೆ ಕಗ್ಗತ್ತಲು ಆವರಿಸಿದೆ. ಬೀದಿ ನಾಯಿಗಳು, ಕೋತಿಗಳ ಹಾವಳಿಯಿಂದ ನಿವಾಸಿಗಳು ತತ್ತರಿಸಿ ಹೋಗಿದ್ದಾರೆ.
ಜತೆಗೆ ಸಾರ್ವಜನಿಕರು ತಮ್ಮ ಮನೆ, ನಿವೇಶನ, ಇನ್ನಿತರ ಕೆಲಸ ಕಾರ್ಯಗಳಿಗೆ ನಿತ್ಯವೂ ಕಚೇರಿಗೆ ಅಲೆದಾಡಿದರೂ ಯಾವುದೇ ಕೆಲಸಗಳು ಆಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಹೀಗಾಗಿ ಅಧಿಕಾರಿಗಳು, ಶಾಸಕರು, ಸಂಸದರು, ಸಚಿವರು, ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಪುರಸಭೆಯಲ್ಲಿ ಮುಖ್ಯಾಧಿಕಾರಿಗಳು, ಜನಪ್ರತಿನಿಧಿಗಳು ಇದ್ದಾಗಲೇ ಜನರ ಕೆಲಸಗಳು ಸುಲಭವಾಗಿ ನಡೆಯುವುದಿಲ್ಲ. ಈಗ ಮುಖ್ಯಾಧಿಕಾರಿ, ಆಡಳಿತಾಧಿಕಾರಿಯೇ ಇಲ್ಲದಿರುವುದರಿಂದ ಹೇಳುವವರು, ಕೇಳುವವರೇ ಇಲ್ಲದಂತಾಗಿದ್ದಾರೆ. ಆದ್ದರಿಂದ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಇನ್ನಿತರರು ಪುರಸಭೆ ಮುಖ್ಯಾಧಿಕಾರಿ ಮತ್ತು ಆಡಳಿತ ಅಧಿಕಾರಿಯನ್ನು ಶೀಘ್ರದಲ್ಲಿ ನೇಮಕ ಮಾಡಿ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಮುಂದಾಗಬೇಕಾಗಿದೆ.
” ನಾನು ಎರಡು ದಿನಗಳ ಹಿಂದಷ್ಟೇ ಹುಣಸೂರಿನ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಪುರಸಭೆ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಪೂರ್ಣಗೊಂಡಿರುವುದರಿಂದ ಪುರಸಭೆಯ ಆಡಳಿತ ಅಧಿಕಾರಿಯಾಗಿ ಶೀಘ್ರವೇ ಅಧಿಕಾರ ಸ್ವೀಕರಿಸಲಿದ್ದೇನೆ. ಅಲ್ಲಿ ಆಗಬೇಕಾಗಿ ರುವ ಕೆಲಸ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುತ್ತೇನೆ.”
-ಮಂಜುನಾಥ್, ಉಪವಿಭಾಗಾಧಿಕಾರಿ, ಹುಣಸೂರು
” ಕೋಟೆ ಪುರಸಭೆ ವ್ಯಾಪ್ತಿಯಲ್ಲಿ ವರ್ಷಗಳಿಂದ ಆಡಳಿತ ಸಂಪೂರ್ಣ ಕುಸಿತವಾಗಿದೆ. ಸಾರ್ವಜನಿಕರಿಗೆ ಮೂಲಸೌಕರ್ಯವಿಲ್ಲದೆ ನಿತ್ಯ ಪರದಾಡುತ್ತಿದ್ದರೂ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಖಾಲಿಯಾಗಿರುವ ಮುಖ್ಯ ಅಧಿಕಾರಿ ಮತ್ತು ಆಡಳಿತ ಅಧಿಕಾರಿಯನ್ನು ನೇಮಕ ಮಾಡಿಲ್ಲ.
-ಲಾರಿ ಪ್ರಕಾಶ್, ಪಟ್ಟಣದ ನಿವಾಸಿ
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…