Andolana originals

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ

ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ ಲಭ್ಯವಾಗುತ್ತಿದ್ದ ಪಟ್ಟಣದ ಪೊಲೀಸ್ ಕ್ಯಾಂಟೀನ್ ಶಾಸಕರ ಪರಿಶ್ರಮದಿಂದ ಮತ್ತೆ ಪ್ರಾರಂಭಗೊಂಡಿದ್ದು, ಅನೇಕ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರಲ್ಲಿ ಸಂತಸ ಮೂಡಿಸಿದೆ.

ಹುಣಸೂರಿನ ಪೊಲೀಸ್ ಕ್ಯಾಂಟೀನ್ ಅನ್ನು ಪೊಲೀಸರು, ದೂರುದಾರರು, ಮಧ್ಯವರ್ತಿಗಳು ಅಡ್ಡವನ್ನಾಗಿ ಮಾಡಿ ಕೊಂಡಿದ್ದನ್ನು ಗಮನಿಸಿದ್ದ ಎಸ್‌ಪಿ ವಿಷ್ಣುವರ್ಧನ್ ಅವರು ಮೈಸೂರು ಜಿಲ್ಲೆಯ ಹುಣಸೂರು, ಎಚ್.ಡಿ.ಕೋಟೆ, ಹುಲ್ಲಹಳ್ಳಿ, ನಂಜನಗೂಡು, ತಿ.ನರಸೀಪುರ ದಲ್ಲಿ  ಪೊಲೀಸ್ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರು ವವರಿಗೆ ಸಂಪೂರ್ಣವಾಗಿ ಬಂದ್ ಮಾಡುವಂತೆ ಕಳೆದ ವಾರ ಆದೇಶಿಸಿದ್ದರು. ಇದರಿಂದ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುತ್ತಿದ್ದ ಕ್ಯಾಂಟೀನ್ಗಳು ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರುಬೇಸರ ವ್ಯಕ್ತಪಡಿಸಿದ್ದರು.

ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ಸಮಗ್ರ ವರದಿ ಪ್ರಕಟಿಸಿತ್ತು. ಇದನ್ನು ಶಾಸಕ ಅನಿಲ್ ಚಿಕ್ಕಮಾದು ಗಮನಿಸಿ ಹಾಗೂ ತಾಲ್ಲೂಕಿನ ಹಲವು ವಿದ್ಯಾರ್ಥಿಗಳು, ಬಡವರು, ಕಾರ್ಮಿಕರು, ಮುಖಂಡರು ದೂರವಾಣಿ ಕರೆ ಮಾಡಿ ಪೊಲೀಸ್ ಕ್ಯಾಂಟೀನ್ ಅನ್ನು ಪ್ರಾರಂಭಿಸಬೇಕೆಂದು ತಮಗೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಎಸ್‌ಪಿ ವಿಷ್ಣುವರ್ಧನ್ ರವರ ಜೊತೆ ದೂರವಾಣಿಯಲ್ಲಿ ಮಾತನಾಡಿ, ಯಾವ ಪೊಲೀಸ್ ಕ್ಯಾಂಟೀನ್ ಅಡ್ಡಾ ಆಗಿ ಪರಿವರ್ತನೆಯಾಗಿದೆಯೋ ಅದನ್ನು ಮುಚ್ಚಿಸಿ. ನಮ್ಮ ತಾಲ್ಲೂಕಿನ ಪೊಲೀಸ್ ಕ್ಯಾಂಟೀನ್ ಬಹಳ ಜನರಿಗೆ ಉಪಯುಕ್ತವಾಗಿದೆ. ಅದು ಯಾವುದೇ ಕಾರಣಕ್ಕೂ ಬಂದ್ ಆಗಬಾರದು. ಅದನ್ನು ಮತ್ತೆ ಪ್ರಾರಂಭಿಸಲು ಸಂಬಂಧ ಪಟ್ಟವರಿಗೆ ಸೂಚಿಸಬೇಕೆಂದು ತಿಳಿಸಿದ್ದರು.

ಬಳಿಕ ಎಸ್‌ಪಿ ವಿಷ್ಣುವರ್ಧನ್ ಅವರು ೨ ದಿನಗಳ ಕಾಲ ಪರಿಶೀಲನೆ ನಡೆಸಿ, ಪಟ್ಟಣದಲ್ಲಿ ಪೊಲೀಸ್ ಕ್ಯಾಂಟೀನ್‌ನ್ನು ಮತ್ತೆ ಪ್ರಾರಂಭಿಸಿ ಕೆಲಸ ನಿರ್ವಹಿಸುವಂತೆ ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ್ ಅವರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಕ್ಯಾಂಟೀನ್ ನಿರ್ವಾಹಕರಾದ ಉಡುಪಿ ಅರುಣ್ ಅವರು ಪ್ರಾರಂಭಿಸಿದ್ದಾರೆ. ಈಗ ಎಂದಿನಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು, ಕಾರ್ಮಿಕರು, ಪೊಲೀಸರು, ಬಡವರು ಕಡಿಮೆ ದರದಲ್ಲಿ ತಿಂಡಿ, ಊಟವನ್ನು ಪಡೆದುಕೊಳ್ಳುತ್ತಿದ್ದಾರೆ.

” ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಪೊಲೀಸ್ ಕ್ಯಾಂಟೀನ್ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಅನೇಕ ಜನರಿಗೆ ಉಪಯುಕ್ತವಾಗಿದೆ. ಯಾವುದೇ ಲೋಪಗಳು ಆಗದಿದ್ದರೂ ಬಂದ್ ಆಗಿದ್ದರಿಂದ ಬಡವರಿಗೆ ತೊಂದರೆಯಾಗಿತ್ತು. ಇದನ್ನು ಗಮನಿಸಿ ಎಸ್‌ಪಿ ಅವರ ಜೊತೆ ಮಾತನಾಡಿ ಕ್ಯಾಂಟೀನ್ ಅನ್ನು ಮತ್ತೆ ಪ್ರಾರಂಭಿಸಲು ಸೂಚಿಸಿದ್ದು, ಆರಂಭವಾಗಿದೆ.”

-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

8 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

8 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

9 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

9 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

9 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

9 hours ago