ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ
ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ ಲಭ್ಯವಾಗುತ್ತಿದ್ದ ಪಟ್ಟಣದ ಪೊಲೀಸ್ ಕ್ಯಾಂಟೀನ್ ಶಾಸಕರ ಪರಿಶ್ರಮದಿಂದ ಮತ್ತೆ ಪ್ರಾರಂಭಗೊಂಡಿದ್ದು, ಅನೇಕ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರಲ್ಲಿ ಸಂತಸ ಮೂಡಿಸಿದೆ.
ಹುಣಸೂರಿನ ಪೊಲೀಸ್ ಕ್ಯಾಂಟೀನ್ ಅನ್ನು ಪೊಲೀಸರು, ದೂರುದಾರರು, ಮಧ್ಯವರ್ತಿಗಳು ಅಡ್ಡವನ್ನಾಗಿ ಮಾಡಿ ಕೊಂಡಿದ್ದನ್ನು ಗಮನಿಸಿದ್ದ ಎಸ್ಪಿ ವಿಷ್ಣುವರ್ಧನ್ ಅವರು ಮೈಸೂರು ಜಿಲ್ಲೆಯ ಹುಣಸೂರು, ಎಚ್.ಡಿ.ಕೋಟೆ, ಹುಲ್ಲಹಳ್ಳಿ, ನಂಜನಗೂಡು, ತಿ.ನರಸೀಪುರ ದಲ್ಲಿ ಪೊಲೀಸ್ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರು ವವರಿಗೆ ಸಂಪೂರ್ಣವಾಗಿ ಬಂದ್ ಮಾಡುವಂತೆ ಕಳೆದ ವಾರ ಆದೇಶಿಸಿದ್ದರು. ಇದರಿಂದ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುತ್ತಿದ್ದ ಕ್ಯಾಂಟೀನ್ಗಳು ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರುಬೇಸರ ವ್ಯಕ್ತಪಡಿಸಿದ್ದರು.
ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ಸಮಗ್ರ ವರದಿ ಪ್ರಕಟಿಸಿತ್ತು. ಇದನ್ನು ಶಾಸಕ ಅನಿಲ್ ಚಿಕ್ಕಮಾದು ಗಮನಿಸಿ ಹಾಗೂ ತಾಲ್ಲೂಕಿನ ಹಲವು ವಿದ್ಯಾರ್ಥಿಗಳು, ಬಡವರು, ಕಾರ್ಮಿಕರು, ಮುಖಂಡರು ದೂರವಾಣಿ ಕರೆ ಮಾಡಿ ಪೊಲೀಸ್ ಕ್ಯಾಂಟೀನ್ ಅನ್ನು ಪ್ರಾರಂಭಿಸಬೇಕೆಂದು ತಮಗೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಎಸ್ಪಿ ವಿಷ್ಣುವರ್ಧನ್ ರವರ ಜೊತೆ ದೂರವಾಣಿಯಲ್ಲಿ ಮಾತನಾಡಿ, ಯಾವ ಪೊಲೀಸ್ ಕ್ಯಾಂಟೀನ್ ಅಡ್ಡಾ ಆಗಿ ಪರಿವರ್ತನೆಯಾಗಿದೆಯೋ ಅದನ್ನು ಮುಚ್ಚಿಸಿ. ನಮ್ಮ ತಾಲ್ಲೂಕಿನ ಪೊಲೀಸ್ ಕ್ಯಾಂಟೀನ್ ಬಹಳ ಜನರಿಗೆ ಉಪಯುಕ್ತವಾಗಿದೆ. ಅದು ಯಾವುದೇ ಕಾರಣಕ್ಕೂ ಬಂದ್ ಆಗಬಾರದು. ಅದನ್ನು ಮತ್ತೆ ಪ್ರಾರಂಭಿಸಲು ಸಂಬಂಧ ಪಟ್ಟವರಿಗೆ ಸೂಚಿಸಬೇಕೆಂದು ತಿಳಿಸಿದ್ದರು.
ಬಳಿಕ ಎಸ್ಪಿ ವಿಷ್ಣುವರ್ಧನ್ ಅವರು ೨ ದಿನಗಳ ಕಾಲ ಪರಿಶೀಲನೆ ನಡೆಸಿ, ಪಟ್ಟಣದಲ್ಲಿ ಪೊಲೀಸ್ ಕ್ಯಾಂಟೀನ್ನ್ನು ಮತ್ತೆ ಪ್ರಾರಂಭಿಸಿ ಕೆಲಸ ನಿರ್ವಹಿಸುವಂತೆ ಸರ್ಕಲ್ ಇನ್ಸ್ಪೆಕ್ಟರ್ ಗಂಗಾಧರ್ ಅವರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಕ್ಯಾಂಟೀನ್ ನಿರ್ವಾಹಕರಾದ ಉಡುಪಿ ಅರುಣ್ ಅವರು ಪ್ರಾರಂಭಿಸಿದ್ದಾರೆ. ಈಗ ಎಂದಿನಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು, ಕಾರ್ಮಿಕರು, ಪೊಲೀಸರು, ಬಡವರು ಕಡಿಮೆ ದರದಲ್ಲಿ ತಿಂಡಿ, ಊಟವನ್ನು ಪಡೆದುಕೊಳ್ಳುತ್ತಿದ್ದಾರೆ.
” ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಪೊಲೀಸ್ ಕ್ಯಾಂಟೀನ್ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಅನೇಕ ಜನರಿಗೆ ಉಪಯುಕ್ತವಾಗಿದೆ. ಯಾವುದೇ ಲೋಪಗಳು ಆಗದಿದ್ದರೂ ಬಂದ್ ಆಗಿದ್ದರಿಂದ ಬಡವರಿಗೆ ತೊಂದರೆಯಾಗಿತ್ತು. ಇದನ್ನು ಗಮನಿಸಿ ಎಸ್ಪಿ ಅವರ ಜೊತೆ ಮಾತನಾಡಿ ಕ್ಯಾಂಟೀನ್ ಅನ್ನು ಮತ್ತೆ ಪ್ರಾರಂಭಿಸಲು ಸೂಚಿಸಿದ್ದು, ಆರಂಭವಾಗಿದೆ.”
-ಅನಿಲ್ ಚಿಕ್ಕಮಾದು, ಶಾಸಕರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…