Andolana originals

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ

ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ ಲಭ್ಯವಾಗುತ್ತಿದ್ದ ಪಟ್ಟಣದ ಪೊಲೀಸ್ ಕ್ಯಾಂಟೀನ್ ಶಾಸಕರ ಪರಿಶ್ರಮದಿಂದ ಮತ್ತೆ ಪ್ರಾರಂಭಗೊಂಡಿದ್ದು, ಅನೇಕ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರಲ್ಲಿ ಸಂತಸ ಮೂಡಿಸಿದೆ.

ಹುಣಸೂರಿನ ಪೊಲೀಸ್ ಕ್ಯಾಂಟೀನ್ ಅನ್ನು ಪೊಲೀಸರು, ದೂರುದಾರರು, ಮಧ್ಯವರ್ತಿಗಳು ಅಡ್ಡವನ್ನಾಗಿ ಮಾಡಿ ಕೊಂಡಿದ್ದನ್ನು ಗಮನಿಸಿದ್ದ ಎಸ್‌ಪಿ ವಿಷ್ಣುವರ್ಧನ್ ಅವರು ಮೈಸೂರು ಜಿಲ್ಲೆಯ ಹುಣಸೂರು, ಎಚ್.ಡಿ.ಕೋಟೆ, ಹುಲ್ಲಹಳ್ಳಿ, ನಂಜನಗೂಡು, ತಿ.ನರಸೀಪುರ ದಲ್ಲಿ  ಪೊಲೀಸ್ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರು ವವರಿಗೆ ಸಂಪೂರ್ಣವಾಗಿ ಬಂದ್ ಮಾಡುವಂತೆ ಕಳೆದ ವಾರ ಆದೇಶಿಸಿದ್ದರು. ಇದರಿಂದ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುತ್ತಿದ್ದ ಕ್ಯಾಂಟೀನ್ಗಳು ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರುಬೇಸರ ವ್ಯಕ್ತಪಡಿಸಿದ್ದರು.

ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ಸಮಗ್ರ ವರದಿ ಪ್ರಕಟಿಸಿತ್ತು. ಇದನ್ನು ಶಾಸಕ ಅನಿಲ್ ಚಿಕ್ಕಮಾದು ಗಮನಿಸಿ ಹಾಗೂ ತಾಲ್ಲೂಕಿನ ಹಲವು ವಿದ್ಯಾರ್ಥಿಗಳು, ಬಡವರು, ಕಾರ್ಮಿಕರು, ಮುಖಂಡರು ದೂರವಾಣಿ ಕರೆ ಮಾಡಿ ಪೊಲೀಸ್ ಕ್ಯಾಂಟೀನ್ ಅನ್ನು ಪ್ರಾರಂಭಿಸಬೇಕೆಂದು ತಮಗೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಎಸ್‌ಪಿ ವಿಷ್ಣುವರ್ಧನ್ ರವರ ಜೊತೆ ದೂರವಾಣಿಯಲ್ಲಿ ಮಾತನಾಡಿ, ಯಾವ ಪೊಲೀಸ್ ಕ್ಯಾಂಟೀನ್ ಅಡ್ಡಾ ಆಗಿ ಪರಿವರ್ತನೆಯಾಗಿದೆಯೋ ಅದನ್ನು ಮುಚ್ಚಿಸಿ. ನಮ್ಮ ತಾಲ್ಲೂಕಿನ ಪೊಲೀಸ್ ಕ್ಯಾಂಟೀನ್ ಬಹಳ ಜನರಿಗೆ ಉಪಯುಕ್ತವಾಗಿದೆ. ಅದು ಯಾವುದೇ ಕಾರಣಕ್ಕೂ ಬಂದ್ ಆಗಬಾರದು. ಅದನ್ನು ಮತ್ತೆ ಪ್ರಾರಂಭಿಸಲು ಸಂಬಂಧ ಪಟ್ಟವರಿಗೆ ಸೂಚಿಸಬೇಕೆಂದು ತಿಳಿಸಿದ್ದರು.

ಬಳಿಕ ಎಸ್‌ಪಿ ವಿಷ್ಣುವರ್ಧನ್ ಅವರು ೨ ದಿನಗಳ ಕಾಲ ಪರಿಶೀಲನೆ ನಡೆಸಿ, ಪಟ್ಟಣದಲ್ಲಿ ಪೊಲೀಸ್ ಕ್ಯಾಂಟೀನ್‌ನ್ನು ಮತ್ತೆ ಪ್ರಾರಂಭಿಸಿ ಕೆಲಸ ನಿರ್ವಹಿಸುವಂತೆ ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ್ ಅವರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಕ್ಯಾಂಟೀನ್ ನಿರ್ವಾಹಕರಾದ ಉಡುಪಿ ಅರುಣ್ ಅವರು ಪ್ರಾರಂಭಿಸಿದ್ದಾರೆ. ಈಗ ಎಂದಿನಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು, ಕಾರ್ಮಿಕರು, ಪೊಲೀಸರು, ಬಡವರು ಕಡಿಮೆ ದರದಲ್ಲಿ ತಿಂಡಿ, ಊಟವನ್ನು ಪಡೆದುಕೊಳ್ಳುತ್ತಿದ್ದಾರೆ.

” ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಪೊಲೀಸ್ ಕ್ಯಾಂಟೀನ್ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಅನೇಕ ಜನರಿಗೆ ಉಪಯುಕ್ತವಾಗಿದೆ. ಯಾವುದೇ ಲೋಪಗಳು ಆಗದಿದ್ದರೂ ಬಂದ್ ಆಗಿದ್ದರಿಂದ ಬಡವರಿಗೆ ತೊಂದರೆಯಾಗಿತ್ತು. ಇದನ್ನು ಗಮನಿಸಿ ಎಸ್‌ಪಿ ಅವರ ಜೊತೆ ಮಾತನಾಡಿ ಕ್ಯಾಂಟೀನ್ ಅನ್ನು ಮತ್ತೆ ಪ್ರಾರಂಭಿಸಲು ಸೂಚಿಸಿದ್ದು, ಆರಂಭವಾಗಿದೆ.”

-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

38 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago