Andolana originals

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ

ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ ಲಭ್ಯವಾಗುತ್ತಿದ್ದ ಪಟ್ಟಣದ ಪೊಲೀಸ್ ಕ್ಯಾಂಟೀನ್ ಶಾಸಕರ ಪರಿಶ್ರಮದಿಂದ ಮತ್ತೆ ಪ್ರಾರಂಭಗೊಂಡಿದ್ದು, ಅನೇಕ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರಲ್ಲಿ ಸಂತಸ ಮೂಡಿಸಿದೆ.

ಹುಣಸೂರಿನ ಪೊಲೀಸ್ ಕ್ಯಾಂಟೀನ್ ಅನ್ನು ಪೊಲೀಸರು, ದೂರುದಾರರು, ಮಧ್ಯವರ್ತಿಗಳು ಅಡ್ಡವನ್ನಾಗಿ ಮಾಡಿ ಕೊಂಡಿದ್ದನ್ನು ಗಮನಿಸಿದ್ದ ಎಸ್‌ಪಿ ವಿಷ್ಣುವರ್ಧನ್ ಅವರು ಮೈಸೂರು ಜಿಲ್ಲೆಯ ಹುಣಸೂರು, ಎಚ್.ಡಿ.ಕೋಟೆ, ಹುಲ್ಲಹಳ್ಳಿ, ನಂಜನಗೂಡು, ತಿ.ನರಸೀಪುರ ದಲ್ಲಿ  ಪೊಲೀಸ್ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರು ವವರಿಗೆ ಸಂಪೂರ್ಣವಾಗಿ ಬಂದ್ ಮಾಡುವಂತೆ ಕಳೆದ ವಾರ ಆದೇಶಿಸಿದ್ದರು. ಇದರಿಂದ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುತ್ತಿದ್ದ ಕ್ಯಾಂಟೀನ್ಗಳು ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರುಬೇಸರ ವ್ಯಕ್ತಪಡಿಸಿದ್ದರು.

ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ಸಮಗ್ರ ವರದಿ ಪ್ರಕಟಿಸಿತ್ತು. ಇದನ್ನು ಶಾಸಕ ಅನಿಲ್ ಚಿಕ್ಕಮಾದು ಗಮನಿಸಿ ಹಾಗೂ ತಾಲ್ಲೂಕಿನ ಹಲವು ವಿದ್ಯಾರ್ಥಿಗಳು, ಬಡವರು, ಕಾರ್ಮಿಕರು, ಮುಖಂಡರು ದೂರವಾಣಿ ಕರೆ ಮಾಡಿ ಪೊಲೀಸ್ ಕ್ಯಾಂಟೀನ್ ಅನ್ನು ಪ್ರಾರಂಭಿಸಬೇಕೆಂದು ತಮಗೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಎಸ್‌ಪಿ ವಿಷ್ಣುವರ್ಧನ್ ರವರ ಜೊತೆ ದೂರವಾಣಿಯಲ್ಲಿ ಮಾತನಾಡಿ, ಯಾವ ಪೊಲೀಸ್ ಕ್ಯಾಂಟೀನ್ ಅಡ್ಡಾ ಆಗಿ ಪರಿವರ್ತನೆಯಾಗಿದೆಯೋ ಅದನ್ನು ಮುಚ್ಚಿಸಿ. ನಮ್ಮ ತಾಲ್ಲೂಕಿನ ಪೊಲೀಸ್ ಕ್ಯಾಂಟೀನ್ ಬಹಳ ಜನರಿಗೆ ಉಪಯುಕ್ತವಾಗಿದೆ. ಅದು ಯಾವುದೇ ಕಾರಣಕ್ಕೂ ಬಂದ್ ಆಗಬಾರದು. ಅದನ್ನು ಮತ್ತೆ ಪ್ರಾರಂಭಿಸಲು ಸಂಬಂಧ ಪಟ್ಟವರಿಗೆ ಸೂಚಿಸಬೇಕೆಂದು ತಿಳಿಸಿದ್ದರು.

ಬಳಿಕ ಎಸ್‌ಪಿ ವಿಷ್ಣುವರ್ಧನ್ ಅವರು ೨ ದಿನಗಳ ಕಾಲ ಪರಿಶೀಲನೆ ನಡೆಸಿ, ಪಟ್ಟಣದಲ್ಲಿ ಪೊಲೀಸ್ ಕ್ಯಾಂಟೀನ್‌ನ್ನು ಮತ್ತೆ ಪ್ರಾರಂಭಿಸಿ ಕೆಲಸ ನಿರ್ವಹಿಸುವಂತೆ ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ್ ಅವರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಕ್ಯಾಂಟೀನ್ ನಿರ್ವಾಹಕರಾದ ಉಡುಪಿ ಅರುಣ್ ಅವರು ಪ್ರಾರಂಭಿಸಿದ್ದಾರೆ. ಈಗ ಎಂದಿನಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು, ಕಾರ್ಮಿಕರು, ಪೊಲೀಸರು, ಬಡವರು ಕಡಿಮೆ ದರದಲ್ಲಿ ತಿಂಡಿ, ಊಟವನ್ನು ಪಡೆದುಕೊಳ್ಳುತ್ತಿದ್ದಾರೆ.

” ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಪೊಲೀಸ್ ಕ್ಯಾಂಟೀನ್ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಅನೇಕ ಜನರಿಗೆ ಉಪಯುಕ್ತವಾಗಿದೆ. ಯಾವುದೇ ಲೋಪಗಳು ಆಗದಿದ್ದರೂ ಬಂದ್ ಆಗಿದ್ದರಿಂದ ಬಡವರಿಗೆ ತೊಂದರೆಯಾಗಿತ್ತು. ಇದನ್ನು ಗಮನಿಸಿ ಎಸ್‌ಪಿ ಅವರ ಜೊತೆ ಮಾತನಾಡಿ ಕ್ಯಾಂಟೀನ್ ಅನ್ನು ಮತ್ತೆ ಪ್ರಾರಂಭಿಸಲು ಸೂಚಿಸಿದ್ದು, ಆರಂಭವಾಗಿದೆ.”

-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

7 mins ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

11 mins ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

17 mins ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

22 mins ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

26 mins ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

31 mins ago