ಎಚ್. ಡಿ. ಕೋಟೆ: ಪೊಲೀಸ್ ಠಾಣೆಗಳಿರುವುದು ನೊಂದವರು, ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಲು. ಅದಕ್ಕಾಗಿ ದಿನದ ೨೪ ಗಂಟೆಗಳ ಕಾಲವೂ ಠಾಣೆಯ ಬಾಗಿಲು ತೆರೆದು ಕೆಲಸ ನಿರ್ವಹಿಸಬೇಕಾಗಿದ್ದ ಪೊಲೀಸರೇ ರಾತ್ರಿಯಿಂದ ಬೆಳಿಗ್ಗೆಯವರೆಗೆ ಠಾಣೆಯ ಬಾಗಿಲು ಮುಚ್ಚುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ಎಚ್. ಡಿ. ಕೋಟೆಯ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್ ಠಾಣೆಯಲ್ಲಿ ಇಂತಹ ಬೇಜವಾಬ್ದಾರಿ ಕೆಲಸ ಅನೇಕ ತಿಂಗಳಿಂದ ನಡೆಯುತ್ತಿದೆ.
ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಗೆ ೮೦ಕ್ಕೂ ಹೆಚ್ಚು ಹಳ್ಳಿಗಳು ಸೇರುತ್ತವೆ. ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ, ಜಮೀನಿನ ವಿಚಾರವಾಗಿ ಗಲಾಟೆ, ಹೊಡೆದಾಟ, ಕುಡುಕರ ಹಾವಳಿ ಇತ್ಯಾದಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೊಂದವರು, ದೌರ್ಜನ್ಯಕ್ಕೆ ಒಳಗಾದವರು ನ್ಯಾಯಕ್ಕಾಗಿ ಹಗಲು ರಾತ್ರಿ ಎನ್ನದೆ ಪೊಲೀಸ್ ಠಾಣೆ ಮೆಟ್ಟಿಲೇರುವ ಪರಿಸ್ಥಿತಿ ಎದುರಾಗಿದೆ.
ಇಂತಹ ಸಂದರ್ಭದಲ್ಲಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆಯಲ್ಲಿ ದಿನದ ೨೪ ಗಂಟೆಗಳ ಕಾಲವೂ ಕಾರ್ಯನಿರ್ವಹಿಸಬೇಕಾದ ಪೊಲೀಸರು ರಾತ್ರಿ ವೇಳೆ ಠಾಣೆಯ ಬಾಗಿಲು ಮುಚ್ಚುತ್ತಿದ್ದಾರೆ. ಬೆಳಗಿನ ಜಾವ ಬಾಗಿಲು ತೆರೆದು ಕೆಲಸ ನಿರ್ವಹಿಸುತ್ತಿದ್ದಾರೆ.
ಯಾರಾದರೂ ದೂರು ನೀಡಲು ರಾತ್ರಿ ಸಮಯ ಬಂದರೆ ಬಾಗಿಲು ಮುಚ್ಚಿರುವುದನ್ನು ನೋಡಿ ವಾಪಸ್ ಹೋಗಬೇಕು. ಇಲ್ಲದಿದ್ದರೆ ಬೆಳಿಗ್ಗೆವರೆಗೆ ಕಾದು ಬಾಗಿಲು ತೆರೆದ ಮೇಲೆ ದೂರು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಿಯಮದಂತೆ ಯಾವುದೇ ಪೊಲೀಸ್ ಠಾಣೆಗಳು ದಿನದ ೨೪ ಗಂಟೆಗಳ ಕಾಲವೂ ಬಾಗಿಲು ತೆರೆದು ಕಾರ್ಯನಿರ್ವಹಿಸುತ್ತಾ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಆದರೆ, ಇದಕ್ಕೆ ತದ್ವಿರುದ್ಧವಾಗಿ ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್ ಠಾಣೆಯಲ್ಲೇ ಇಂಥ ಪರಿಸ್ಥಿತಿ ಎದುರಾದರೆ ಇನ್ನು ಗ್ರಾಮಾಂತರ ಪ್ರದೇಶದ ಪೊಲೀಸ್ ಠಾಣೆಗಳ ಪರಿಸ್ಥಿತಿ ಏನೆಂಬುದನ್ನು ಊಹಿಸಬಹುದಾಗಿದೆ. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಹಿಂದುಳಿದ, ಗಡಿ ಭಾಗದ ಪೊಲೀಸ್ ಠಾಣೆಗಳಲ್ಲಿ ಪೊಲೀಸರ ಕಾರ್ಯಗಳನ್ನು ಚುರುಕುಗೊಳಿಸಿ ಈ ರೀತಿಯ ಸಮಸ್ಯೆಗಳು ಮರುಕಳಿಸದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಪೊಲೀಸ್ ಠಾಣೆಗಳಲ್ಲಿ ಪೊಲೀಸರು ೨೪ ಗಂಟೆಗಳ ಕಾಲವೂ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕು. ಠಾಣೆಗಳ ಬಾಗಿಲು ಮುಚ್ಚುವಂತಿಲ್ಲ. ಬಾಗಿಲು ಮುಚ್ಚಿದ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. -ವಿಷ್ಣುವರ್ಧನ್, ಎಸ್ಪಿ
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…