Andolana originals

ಕೋಟೆ ಠಾಣೆ ; ರಾತ್ರಿ ಕಾಣೆ !

  • ಸಂಜೆಯಾದರೆ ಪೊಲೀಸ್ ಠಾಣೆ ಬಾಗಿಲು ಬಂದ್
  • ೨೪ ಗಂಟೆ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸರ ಬೇಜವಾಬ್ದಾರಿ ನಡೆ
  • ೮೦ ಗ್ರಾಮಗಳನ್ನು ಒಳಗೊಂಡ ಠಾಣೆ

ಎಚ್. ಡಿ. ಕೋಟೆ: ಪೊಲೀಸ್ ಠಾಣೆಗಳಿರುವುದು ನೊಂದವರು, ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಲು. ಅದಕ್ಕಾಗಿ ದಿನದ ೨೪ ಗಂಟೆಗಳ ಕಾಲವೂ ಠಾಣೆಯ ಬಾಗಿಲು ತೆರೆದು ಕೆಲಸ ನಿರ್ವಹಿಸಬೇಕಾಗಿದ್ದ ಪೊಲೀಸರೇ ರಾತ್ರಿಯಿಂದ ಬೆಳಿಗ್ಗೆಯವರೆಗೆ ಠಾಣೆಯ ಬಾಗಿಲು ಮುಚ್ಚುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಎಚ್. ಡಿ. ಕೋಟೆಯ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್ ಠಾಣೆಯಲ್ಲಿ ಇಂತಹ ಬೇಜವಾಬ್ದಾರಿ ಕೆಲಸ ಅನೇಕ ತಿಂಗಳಿಂದ ನಡೆಯುತ್ತಿದೆ.

ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಗೆ ೮೦ಕ್ಕೂ ಹೆಚ್ಚು ಹಳ್ಳಿಗಳು ಸೇರುತ್ತವೆ. ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ, ಜಮೀನಿನ ವಿಚಾರವಾಗಿ ಗಲಾಟೆ, ಹೊಡೆದಾಟ, ಕುಡುಕರ ಹಾವಳಿ ಇತ್ಯಾದಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೊಂದವರು, ದೌರ್ಜನ್ಯಕ್ಕೆ ಒಳಗಾದವರು ನ್ಯಾಯಕ್ಕಾಗಿ ಹಗಲು ರಾತ್ರಿ ಎನ್ನದೆ ಪೊಲೀಸ್ ಠಾಣೆ ಮೆಟ್ಟಿಲೇರುವ ಪರಿಸ್ಥಿತಿ ಎದುರಾಗಿದೆ.

ಇಂತಹ ಸಂದರ್ಭದಲ್ಲಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆಯಲ್ಲಿ ದಿನದ ೨೪ ಗಂಟೆಗಳ ಕಾಲವೂ ಕಾರ್ಯನಿರ್ವಹಿಸಬೇಕಾದ ಪೊಲೀಸರು ರಾತ್ರಿ ವೇಳೆ ಠಾಣೆಯ ಬಾಗಿಲು ಮುಚ್ಚುತ್ತಿದ್ದಾರೆ. ಬೆಳಗಿನ ಜಾವ ಬಾಗಿಲು ತೆರೆದು ಕೆಲಸ ನಿರ್ವಹಿಸುತ್ತಿದ್ದಾರೆ.

ಯಾರಾದರೂ ದೂರು ನೀಡಲು ರಾತ್ರಿ ಸಮಯ ಬಂದರೆ ಬಾಗಿಲು ಮುಚ್ಚಿರುವುದನ್ನು ನೋಡಿ ವಾಪಸ್ ಹೋಗಬೇಕು. ಇಲ್ಲದಿದ್ದರೆ ಬೆಳಿಗ್ಗೆವರೆಗೆ ಕಾದು ಬಾಗಿಲು ತೆರೆದ ಮೇಲೆ ದೂರು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಿಯಮದಂತೆ ಯಾವುದೇ ಪೊಲೀಸ್ ಠಾಣೆಗಳು ದಿನದ ೨೪ ಗಂಟೆಗಳ ಕಾಲವೂ ಬಾಗಿಲು ತೆರೆದು ಕಾರ್ಯನಿರ್ವಹಿಸುತ್ತಾ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಆದರೆ, ಇದಕ್ಕೆ ತದ್ವಿರುದ್ಧವಾಗಿ ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್ ಠಾಣೆಯಲ್ಲೇ ಇಂಥ ಪರಿಸ್ಥಿತಿ ಎದುರಾದರೆ ಇನ್ನು ಗ್ರಾಮಾಂತರ ಪ್ರದೇಶದ ಪೊಲೀಸ್ ಠಾಣೆಗಳ ಪರಿಸ್ಥಿತಿ ಏನೆಂಬುದನ್ನು ಊಹಿಸಬಹುದಾಗಿದೆ. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಹಿಂದುಳಿದ, ಗಡಿ ಭಾಗದ ಪೊಲೀಸ್ ಠಾಣೆಗಳಲ್ಲಿ ಪೊಲೀಸರ ಕಾರ್ಯಗಳನ್ನು ಚುರುಕುಗೊಳಿಸಿ ಈ ರೀತಿಯ ಸಮಸ್ಯೆಗಳು ಮರುಕಳಿಸದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಪೊಲೀಸ್ ಠಾಣೆಗಳಲ್ಲಿ ಪೊಲೀಸರು ೨೪ ಗಂಟೆಗಳ ಕಾಲವೂ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕು. ಠಾಣೆಗಳ ಬಾಗಿಲು ಮುಚ್ಚುವಂತಿಲ್ಲ. ಬಾಗಿಲು ಮುಚ್ಚಿದ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. -ವಿಷ್ಣುವರ್ಧನ್, ಎಸ್‌ಪಿ

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago