Andolana originals

ಕೋಟೆ: ಇಬ್ಬರು ಮುಖ್ಯಶಿಕ್ಷಕರ ಅಮಾನತು

‘ಆಂದೋಲನ’ ವರದಿಯಿಂದ ಎಚ್ಚೆತ್ತು ಡಿಡಿಪಿಐ ಕ್ರಮ

ಮಂಜು ಕೋಟೆ
ಎಚ್. ಡಿ. ಕೋಟೆ: ಸರ್ಕಾರಿ ಶಾಲೆಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಇಬ್ಬರು ಮುಖ್ಯ ಶಿಕ್ಷಕರುಗಳನ್ನು ಅಮಾನತ್ತುಗೊಳಿಸಲಾಗಿದೆ.

ಆರೋಪ ಎದುರಿಸುತ್ತಿರುವ ಮುಖ್ಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳದ ಶಿಕ್ಷಣ ಇಲಾಖೆ ಅಧಿಕಾರಿಗಳು ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಮೇಲೆ ಎಚ್ಚೆತ್ತುಕೊಂಡು ೨ ಶಾಲೆಗಳ ಮುಖ್ಯ ಶಿಕ್ಷಕರುಗಳನ್ನು ಅಮಾನತ್ತುಗೊಳಿಸಿದ್ದಾರೆ. ತಾಲ್ಲೂಕಿನ ಅಂತರಸಂತೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಸುನೀತಾ ವಿಲಿಯಂ, ಹ್ಯಾಂಡ್ ಪೋಸ್ಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದದ ನೂರಿ ಇಮ್ರಾನ್ ಕರ್ತವ್ಯದಿಂದ ಅಮಾನತ್ತುಗೊಂಡವರು.

ಅಂತರಸಂತೆಯ ಸರ್ಕಾರಿ ಶಾಲೆಯಲ್ಲಿ ವಾರದ ಹಿಂದೆ ಬಿಸಿಯೂಟದ ಆಹಾರ ಪದಾರ್ಥ ಸಮರ್ಪಕವಾಗಿ ಸದ್ಬಳಕೆ ಮಾಡದೆ ಹುಳು ಹಿಡಿದಿದ್ದ ನಾಲ್ಕೈದು ಮೂಟೆ ಗೋಧಿಯನ್ನು ಸುಟ್ಟು ಹಾಕಿದ್ದರು. ಶಿಕ್ಷಣ ಇಲಾಖೆಯವರಿಗೆ ಈ ವಿಚಾರ ತಿಳಿದಿದ್ದರೂ ಕ್ರಮ ಕೈಗೊಳ್ಳುವಲ್ಲಿ ಮೀನಮೇಷ ಎಣಿಸುತ್ತಿದ್ದರು. ಈ ಸಂಬಂಧ ‘ಆಂದೋಲನ’ ದಿನ ಪತ್ರಿಕೆಯಲ್ಲಿ ನ. ೨೭ರಂದು ‘ಮಕ್ಕಳ ಬಿಸಿಯೂಟದ ಗೋಧಿಗೆ ಬೆಂಕಿ ಹಚ್ಚಿ ನಾಶ’ ಎಂಬ ಶೀರ್ಷಿಕೆ ಯಡಿ ವರದಿ ಪ್ರಕಟವಾಗಿತ್ತು.

ಇದನ್ನು ಗಮನಿಸಿದ ಡಿಡಿಪಿಐ ಜವರೇಗೌಡ, ತಾಲ್ಲೂಕು ಶಿಕ್ಷಣ ಇಲಾಖೆಯಿಂದ ಮತ್ತಷ್ಟು ಸಮಗ್ರ ವರದಿ ಪಡೆದುಕೊಂಡು ಕರ್ತವ್ಯ ಲೋಪ ಎಸಗಿರುವ ಮುಖ್ಯ ಶಿಕ್ಷಕಿಯಾದ ಸುನಿತಾ ವಿಲಿಯಂ ಅವರನ್ನು ಅಮಾನತ್ತುಗೊಳಿಸಿ ಕ್ರಮ ಕೈಗೊಂಡಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿರುವ ಹ್ಯಾಂಡ್ ಪೋಸ್ಟ್‌ನ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನ. ೧ರ ಕನ್ನಡ ರಾಜ್ಯೋತ್ಸವದಂದು ರಾಷ್ಟ್ರಧ್ವಜ ಹಾರಿಸಿ ರಾತ್ರಿ ೧೦ ಗಂಟೆಯಾದರೂ ಧ್ವಜವನ್ನು ಕೆಳಗಿಳಿಸುವ ಕೆಲಸಕ್ಕೆ ಮುಖ್ಯ ಶಿಕ್ಷಕರು ಮುಂದಾಗಿರಲಿಲ್ಲ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಗಣ್ಯರು ಕ್ಷೇತ್ರ ಶಿಕ್ಷಣಾಽಕಾರಿ ಕಾಂತರಾಜ್ ಅವರಿಗೆ ವಿಚಾರ ತಿಳಿಸಿದ್ದರು. ಮುಖ್ಯ ಶಿಕ್ಷಕರಾದ ನೂರು ಇಮ್ರಾನ್ ದೂರವಾಣಿ ಕರೆ ಮಾಡಿ ಧ್ವಜವನ್ನು ನಿಯಮದ ಪ್ರಕಾರ ಇಳಿಸದೆ ಅವಮಾನ ಮಾಡಿದ್ದೀರಿ ಎಂದು ಪ್ರಶ್ನಿಸಿದಾಗ ಎಸ್‌ಡಿಎಂಸಿ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದರು.

ನಂತರ ತಹಸಿಲ್ದಾರ್ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಶಿಕ್ಷಣ ಇಲಾಖೆಯ ಇಸಿಒ ನಂಜಯ್ಯ ಅವರನ್ನು ಕರೆಸಿ ಗೌರವದಿಂದ ಧ್ವಜವನ್ನು ಕೆಳಗಿಳಿಸಿ ತಪ್ಪಿಸಸ್ಥರಿಗೆ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಪತ್ರ ಬರೆದಿದ್ದರು. ಈ ಪ್ರಕರಣ ನಡೆದು ೧೦ ದಿನಗಳಾದರೂ ಶಿಕ್ಷಣ ಇಲಾಖೆಯವರು ಕ್ರಮ ಕೈಗೊಳ್ಳುವಲ್ಲಿ ಮುಂದಾಗಿರಲಿಲ್ಲ. ಈ ವಿಚಾರವಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ನ. ೧೧ರಂದು ‘ಶಾಲೆಯಲ್ಲಿ ರಾತ್ರಿಯಲ್ಲೂ ಹಾರಾಡಿದ ರಾಷ್ಟ್ರಧ್ವಜ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆಯವರು ತಪ್ಪಿತಸ್ಥರ ವಿರುದ್ಧ ಕ್ಷೇತ್ರ ಶಿಕ್ಷಣಾಽಕಾರಿ ಕಾಂತರಾಜು ಮತ್ತು ಕೃಷ್ಣಯ್ಯ ಅವರು ವರದಿ ತಯಾರಿಸಿ ಡಿಡಿಪಿಐ ಕಚೇರಿಗೆ ಕಳುಹಿಸಿದ್ದರಿಂದ ಅಂದೇ ಮುಖ್ಯ ಶಿಕ್ಷಕರಾದ ನೂರ್ ಇಮ್ರಾನ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಡಿಡಿಪಿಐ ಜವರೇಗೌಡ ಕ್ರಮ ಕೈಗೊಂಡಿದ್ದಾರೆ.

ಹ್ಯಾಂಡ್‌ಪೋಸ್ಟ್ ಮತ್ತು ಅಂತರಸಂತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರನ್ನು ಕರ್ತವ್ಯಲೋಪದ ಹಿನ್ನೆಲೆ ಯಲ್ಲಿ ಅಮಾನತ್ತುಗೊಳಿಸಲಾಗಿದೆ. ತಾಲ್ಲೂಕಿನ ಬಿಇಒ, ಬಿಆರ್‌ಸಿ ತಕ್ಷಣ ವರದಿ ಕಳುಹಿಸಿದ್ದರೆ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಆಧರಿಸಿ ಅಮಾನತ್ತುಗೊಳಿಸಿದ್ದೇನೆ. -ಜವರೇಗೌಡ, ಡಿಡಿಪಿಐ, ಮೈಸೂರು

 

ಆಂದೋಲನ ಡೆಸ್ಕ್

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

2 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

2 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

2 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

2 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

13 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

13 hours ago