Andolana originals

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ 

ಮಂಜು ಕೋಟೆ

ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ ಖಾಲಿಯಾಗಿ ಎರಡು ತಿಂಗಳು ಕಳೆಯುತ್ತಿದ್ದರೂ ಅಧ್ಯಕ್ಷರನ್ನು ನೇಮಕ ಮಾಡದ ವರಿಷ್ಠರ ನಡೆಯ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು  ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಶಂಭುಗೌಡ ತಮ್ಮ ಸ್ಥಾನಕ್ಕೆ ಕಾರಣಾಂತರಗಳಿಂದ ೨ ತಿಂಗಳ ಹಿಂದೆ ಜಿಲ್ಲಾಧ್ಯಕ್ಷರಾದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನವನ್ನು ಅಲಂಕರಿಸಲು ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿ ಅಣ್ಣೂರು ಟಿ.ವೆಂಕಟೇಶ್, ಟಿಎಪಿಸಿ ಎಂಎಸ್ ಅಧ್ಯಕ್ಷ ಮೊತ್ತ ಬಸವರಾಜಪ್ಪ, ನಂಜನಾಯಕ್, ಗುರುಸ್ವಾಮಿ, ಸೋಮಾಚಾರಿ, ಶಿವಸ್ವಾಮಿ, ಚಂದ್ರ ಮೌಳಿ, ಈಶ್ವರ್, ರಿಯಲ್ ಎಸ್ಟೇಟ್ ನಂದೀಶ್, ಯೋಗೇಶ, ಕೆಂಡಗಣ್ಣ ಇನ್ನಿತರ ಮುಖಂಡರು ಪೈಪೋಟಿ ನಡೆಸುತ್ತಿದ್ದು, ಅಧ್ಯಕ್ಷರಾಗುವ ನಿಟ್ಟಿನಲ್ಲಿ ಕಾರ್ಯತಂತ್ರದಲ್ಲಿ ತೊಡಗಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿರೋಧಪಕ್ಷವೇ ಕೆಲಸ ನಿರ್ವಹಿ ಸದಂತಹ ಪರಿಸ್ಥಿತಿ ಹಲವು ವರ್ಷಗಳಿಂದ ನಿರ್ಮಾಣಗೊಂಡಿರುವುದರಿಂದ ತಾಲ್ಲೂಕಿನಲ್ಲಿ ವಿರೋಧ ಪಕ್ಷಗಳು, ಮುಖಂಡರು, ಕಾರ್ಯಕರ್ತರು ಸಕ್ರಿಯವಾಗಬೇಕಾದರೆ ಪಕ್ಷದ ಅಧ್ಯಕ್ಷರ ನೇಮಕ ಅಗತ್ಯವಾಗಿದೆ. ಆದ್ದರಿಂದ ಜಿಲ್ಲಾ ವರಿಷ್ಠರು ಇದರ ಬಗ್ಗೆ ಗಮನ ಹರಿಸಬೇಕಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ.ಎಂ. ಕೃಷ್ಣನಾಯಕ ಎರಡನೇ ಸ್ಥಾನ ಪಡೆದು, ಕಳೆದ ವರ್ಷ ಜಾ.ದಳಕ್ಕೆ ಸೇರ್ಪಡೆಗೊಂಡಿರುವುದರಿಂದ ಆ ಸ್ಥಾನವೂ ತೆರವಾಗಿದೆ. ಕಳೆದ ಬಾರಿ ವಿಧಾನಸಭೆಯ ಚುನಾವಣೆಯಲ್ಲಿ ಜಾ.ದಳದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ರಾದ ಬೀಚನಹಳ್ಳಿ ಚಿಕ್ಕಣ್ಣನವರ ಪುತ್ರ ಜಯಪ್ರಕಾಶ್ ಚಿಕ್ಕಣ್ಣರವರು ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಪಕ್ಷದ ಜಿಲ್ಲಾ ಮತ್ತು ರಾಜ್ಯದ ನಾಯಕರ ಜೊತೆ ಮಾತುಕತೆ ನಡೆಸಲಾಗಿದ್ದು ಕಾರಣಾಂತರಗಳಿಂದ ಇನ್ನೂ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ.

ಹೀಗಾಗಿ ಪಕ್ಷದ ಪ್ರಮುಖ ಎರಡು ಸ್ಥಾನಗಳು ಖಾಲಿಯಾಗಿರುವುದರಿಂದ ಶೀಘ್ರದಲ್ಲೇ ಇವುಗಳನ್ನು ಭರ್ತಿ ಮಾಡಿ ಪಕ್ಷದ ಸಂಘಟನೆಗೆ ಮುಂದಾಗಬೇಕಿದೆ. ಮತ್ತೆ ವಿರೋಧ ಪಕ್ಷವಾಗಿಯೂ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕಿದೆ. ಆಗ ಮಾತ್ರ ಕ್ಷೇತ್ರ ದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿ ಕೊಂಡು ಮುಂಬರುವ ಚುನಾ ವಣೆಗಳನ್ನು ಎದುರಿಸುವ ಶಕ್ತಿ ಹೊಂದ ಲಿದೆ ಎಂಬ ಆಶಾಭಾವನೆಯಲ್ಲಿ ಕಾರ್ಯಕರ್ತರು, ಮುಖಂಡರು ಕಾಯುತ್ತಿದ್ದಾರೆ.

” ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇ ಶೀಘ್ರದಲ್ಲೇ ನೇಮಕ ಮಾಡಲಾಗುವುದು. ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದ್ದು, ತಾಲ್ಲೂಕು ಕೇಂದ್ರ ಸ್ಥಾನದಲ್ಲೇ ಅಧ್ಯಕ್ಷರ ನೇಮಕ ಮಾಡಲಾಗುವುದು. ಜಯಪ್ರಕಾಶ್ ಚಿಕ್ಕಣ್ಣನವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ರಾಜ್ಯಾಧ್ಯಕ್ಷರು ಸಮಯ ನಿಗದಿ ಮಾಡಿದ ತಕ್ಷಣ ಕಾರ್ಯಕ್ರಮ ರೂಪಿಸಲಾಗುವುದು.”

-ಕುಂಬ್ರಳ್ಳಿ ಸುಬ್ಬಣ್ಣ, ಅಧ್ಯಕ್ಷರು, ಜಿಲ್ಲಾ ಬಿಜೆಪಿ ಘಟಕ 

 

 

ಆಂದೋಲನ ಡೆಸ್ಕ್

Recent Posts

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 mins ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

35 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

5 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

8 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

8 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 hours ago