ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ
ಮಂಜು ಕೋಟೆ
ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ ಖಾಲಿಯಾಗಿ ಎರಡು ತಿಂಗಳು ಕಳೆಯುತ್ತಿದ್ದರೂ ಅಧ್ಯಕ್ಷರನ್ನು ನೇಮಕ ಮಾಡದ ವರಿಷ್ಠರ ನಡೆಯ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಶಂಭುಗೌಡ ತಮ್ಮ ಸ್ಥಾನಕ್ಕೆ ಕಾರಣಾಂತರಗಳಿಂದ ೨ ತಿಂಗಳ ಹಿಂದೆ ಜಿಲ್ಲಾಧ್ಯಕ್ಷರಾದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನವನ್ನು ಅಲಂಕರಿಸಲು ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿ ಅಣ್ಣೂರು ಟಿ.ವೆಂಕಟೇಶ್, ಟಿಎಪಿಸಿ ಎಂಎಸ್ ಅಧ್ಯಕ್ಷ ಮೊತ್ತ ಬಸವರಾಜಪ್ಪ, ನಂಜನಾಯಕ್, ಗುರುಸ್ವಾಮಿ, ಸೋಮಾಚಾರಿ, ಶಿವಸ್ವಾಮಿ, ಚಂದ್ರ ಮೌಳಿ, ಈಶ್ವರ್, ರಿಯಲ್ ಎಸ್ಟೇಟ್ ನಂದೀಶ್, ಯೋಗೇಶ, ಕೆಂಡಗಣ್ಣ ಇನ್ನಿತರ ಮುಖಂಡರು ಪೈಪೋಟಿ ನಡೆಸುತ್ತಿದ್ದು, ಅಧ್ಯಕ್ಷರಾಗುವ ನಿಟ್ಟಿನಲ್ಲಿ ಕಾರ್ಯತಂತ್ರದಲ್ಲಿ ತೊಡಗಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿರೋಧಪಕ್ಷವೇ ಕೆಲಸ ನಿರ್ವಹಿ ಸದಂತಹ ಪರಿಸ್ಥಿತಿ ಹಲವು ವರ್ಷಗಳಿಂದ ನಿರ್ಮಾಣಗೊಂಡಿರುವುದರಿಂದ ತಾಲ್ಲೂಕಿನಲ್ಲಿ ವಿರೋಧ ಪಕ್ಷಗಳು, ಮುಖಂಡರು, ಕಾರ್ಯಕರ್ತರು ಸಕ್ರಿಯವಾಗಬೇಕಾದರೆ ಪಕ್ಷದ ಅಧ್ಯಕ್ಷರ ನೇಮಕ ಅಗತ್ಯವಾಗಿದೆ. ಆದ್ದರಿಂದ ಜಿಲ್ಲಾ ವರಿಷ್ಠರು ಇದರ ಬಗ್ಗೆ ಗಮನ ಹರಿಸಬೇಕಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ.ಎಂ. ಕೃಷ್ಣನಾಯಕ ಎರಡನೇ ಸ್ಥಾನ ಪಡೆದು, ಕಳೆದ ವರ್ಷ ಜಾ.ದಳಕ್ಕೆ ಸೇರ್ಪಡೆಗೊಂಡಿರುವುದರಿಂದ ಆ ಸ್ಥಾನವೂ ತೆರವಾಗಿದೆ. ಕಳೆದ ಬಾರಿ ವಿಧಾನಸಭೆಯ ಚುನಾವಣೆಯಲ್ಲಿ ಜಾ.ದಳದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ರಾದ ಬೀಚನಹಳ್ಳಿ ಚಿಕ್ಕಣ್ಣನವರ ಪುತ್ರ ಜಯಪ್ರಕಾಶ್ ಚಿಕ್ಕಣ್ಣರವರು ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಪಕ್ಷದ ಜಿಲ್ಲಾ ಮತ್ತು ರಾಜ್ಯದ ನಾಯಕರ ಜೊತೆ ಮಾತುಕತೆ ನಡೆಸಲಾಗಿದ್ದು ಕಾರಣಾಂತರಗಳಿಂದ ಇನ್ನೂ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ.
ಹೀಗಾಗಿ ಪಕ್ಷದ ಪ್ರಮುಖ ಎರಡು ಸ್ಥಾನಗಳು ಖಾಲಿಯಾಗಿರುವುದರಿಂದ ಶೀಘ್ರದಲ್ಲೇ ಇವುಗಳನ್ನು ಭರ್ತಿ ಮಾಡಿ ಪಕ್ಷದ ಸಂಘಟನೆಗೆ ಮುಂದಾಗಬೇಕಿದೆ. ಮತ್ತೆ ವಿರೋಧ ಪಕ್ಷವಾಗಿಯೂ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕಿದೆ. ಆಗ ಮಾತ್ರ ಕ್ಷೇತ್ರ ದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿ ಕೊಂಡು ಮುಂಬರುವ ಚುನಾ ವಣೆಗಳನ್ನು ಎದುರಿಸುವ ಶಕ್ತಿ ಹೊಂದ ಲಿದೆ ಎಂಬ ಆಶಾಭಾವನೆಯಲ್ಲಿ ಕಾರ್ಯಕರ್ತರು, ಮುಖಂಡರು ಕಾಯುತ್ತಿದ್ದಾರೆ.
” ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇ ಶೀಘ್ರದಲ್ಲೇ ನೇಮಕ ಮಾಡಲಾಗುವುದು. ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದ್ದು, ತಾಲ್ಲೂಕು ಕೇಂದ್ರ ಸ್ಥಾನದಲ್ಲೇ ಅಧ್ಯಕ್ಷರ ನೇಮಕ ಮಾಡಲಾಗುವುದು. ಜಯಪ್ರಕಾಶ್ ಚಿಕ್ಕಣ್ಣನವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ರಾಜ್ಯಾಧ್ಯಕ್ಷರು ಸಮಯ ನಿಗದಿ ಮಾಡಿದ ತಕ್ಷಣ ಕಾರ್ಯಕ್ರಮ ರೂಪಿಸಲಾಗುವುದು.”
-ಕುಂಬ್ರಳ್ಳಿ ಸುಬ್ಬಣ್ಣ, ಅಧ್ಯಕ್ಷರು, ಜಿಲ್ಲಾ ಬಿಜೆಪಿ ಘಟಕ
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…