Andolana originals

ರೈತರನ್ನು ಕೈಬೀಸಿ ಕರೆಯುತ್ತಿರುವ ಕೃಷಿ ಮೇಳ

ಶ್ರೀಧರ್ ಆರ್.ಭಟ್

ನಂಜನಗೂಡು: ಸುತ್ತೂರು ಶ್ರೀ ಶಿವರಾತ್ರೀಶ್ವರರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಕ ಕೇಂದ್ರವಾಗಿ ಹೊರಹೊಮ್ಮಿರುವುದು ಈ ಕೃಷಿ ತೋಟ.

ಸುತ್ತೂರಿನ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಶತ ದಿನಗಳ ಶ್ರಮದ ಫಲವನ್ನು ಜಾತ್ರೆಗೆ ಬಂದವರೆಲ್ಲರೂ ಈ ಕೃಷಿ ತೋಟದಲ್ಲಿ ಕಾಣಬಹುದಾಗಿದೆ. ಕೃಷಿಕರಿಂದಲೇ ತುಂಬಿರುವ ಸಮಾಜದಲ್ಲಿ ಆಧುನಿಕ ಕೃಷಿಯೊಂದಿಗೆ ಪ್ರಾಚೀನ ಕೃಷಿ ಪದ್ಧತಿಯನ್ನು ಅನಾವರಣಗೊಳಿಸಿರುವುದು ಸುತ್ತೂರು ಜಾತ್ರೆಯ ಕೃಷಿಮೇಳದ ಹೆಗ್ಗಳಿಕೆಯಾಗಿದೆ.

ಕೃಷಿಮೇಳವನ್ನು ಪ್ರವೇಶಿಸುತ್ತಿದ್ದಂತೆ ಎಡ-ಬಲಗಳಲ್ಲಿ ನಮಗೆ ಕಾಣುವುದು ಮಾನವನ ಸಮಗ್ರ ಆಹಾರಗಳಾದ ಏಕದಳ, ದ್ವಿದಳ, ಎಣ್ಣೆಕಾಳುಗಳು, ವಾಣಿಜ್ಯಬೆಳೆಗಳು, ತೋಟಗಾರಿಕೆ ಬೆಳೆಗಳಾದ ಸೊಪ್ಪು- ತರಕಾರಿ, ಹನಿ ನೀರಾವರಿ ಬಳಸಿಕೊಂಡು ಬೆಳೆದ ಆಹಾರ ಪದಾರ್ಥಗಳು ನೋಡುಗರ ಕಣ್ಮನ ಸೆಳೆಯುತ್ತವೆ.

ಕೃಷಿ ಬೆಳೆಯೊಂದಿಗೆ ವಿವಿಧ ಜಾತಿಯ ಹೂವುಗಳನ್ನೂ ಬೆಳೆದು ರೈತರ ಆದಾಯವನ್ನು ಹೆಚ್ಚಿಸಬಹುದಾದ ಪದ್ಧತಿಯನ್ನು ಇಲ್ಲಿ ತೋರಿಸಿರುವುದಲ್ಲದೇ ಆ ಬೆಳೆಗಳ ಮಾರುಕಟ್ಟೆ ದರಗಳ ಪರಿಚಯವನ್ನು ಆಸಕ್ತ ಕೃಷಿಕರಿಗೆ ಉಣಬಡಿಸುವುದು ಈ ಮೇಳದ ಆಯೋಜಕರಾದ ಕೆವಿಕೆಯ ಹೆಗ್ಗಳಿಕೆ.

ಕೃಷಿಯ ಅವಿಭಾಜ್ಯ ಅಂಗವಾಗಿರುವ ಪಶು ಸಂಗೋ ಪನೆ ಮತ್ತು ಅದರಿಂದಾಗುವ ಲಾಭಗಳನ್ನೂ ಇಲ್ಲಿ ಪರಿಚಯಿಸಲಾಗುತ್ತಿದೆ.

ಪ್ರತಿವರ್ಷ ಒಂದೆರಡು ವಿಜ್ಞಾನ ಆವಿಷ್ಕಾರಗಳನ್ನು ಕೃಷಿಕರಿಗೆ ಪರಿಚಯಿಸುವ ವ್ಯವಸ್ಥೆ ಎರಡು ದಶಕ  ಗಳಿಂದಲೂ ಈ ಕೃಷಿಮೇಳದಲ್ಲಿ ನಡೆದು ಬಂದಿದೆ.

ಅತೀ ಸಣ್ಣ ರೈತರ ಅಭ್ಯುದಯವನ್ನು ಮನದಲ್ಲಿಟ್ಟುಕೊಂಡ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಒಂದು ಎಕರೆ ಪ್ರದೇಶದಲ್ಲಿ ಇಲ್ಲಿ ಸೃಷ್ಟಿಸಿದ ಕೃಷಿ ಬ್ರಹ್ಮಾಂಡ ಕಡಿಮೆ ಖರ್ಚಿನಲ್ಲಿ ಸುಸ್ಥಿರ ಕೃಷಿಲೋಕವನ್ನು ಅನಾವರಣಗೊಳಿಸಿದೆ. ಇದರೊಂದಿಗೆ ಕಬ್ಬು ಕಟಾವು ಮಾಡುವ ಬೃಹತ್ ಯಂತ್ರ ಗಮನ ಸೆಳೆಯುತ್ತಿದ್ದು,ಈ ಯಂತ್ರದ ಸಹಾಯದಿಂದ ಪ್ರತಿ ಟನ್ ಕಬ್ಬಿನ ಶೇ. ೪೫ರಷ್ಟು ವೆಚ್ಚ ಕಡಿಮೆಯಾಗುವುದರೊಂದಿಗೆ ಇದೇ ಯಂತ್ರ ಕಬ್ಬಿನ ಸೋಗನ್ನು ಪುಡಿಮಾಡುವುದರಿಂದ ಈ ಯಂತ್ರ ರೈತನಿಗೆ ಸಹಕಾರಿಯಾಗುವುದನ್ನು ಇಲ್ಲಿ ತೋರಿಸಿಕೊಡಲಾಗುತ್ತದೆ.

ಆ ಮೂಲಕ ಕೃಷಿಕರಲ್ಲಿ ಅರಿವು ಮೂಡಿಸುವ ಯತ್ನ ಸಾಗಿದೆ. ಕೃಷಿಯೊಂದಿಗೆ ಪಶು ಸಂಗೋಪನೆಗೆ ಒತ್ತು ಕೊಟ್ಟಿರುವುದು ಕೃಷಿಮೇಳದ ಹಿರಿಮೆಯಾಗಿದೆ. ಈ ಬಾರಿ ಕೃಷಿ ಮೇಳದ ಪ್ರಮುಖ ಆಕರ್ಷಣೆಯಾಗಿರುವುದು ಜೈವಿಕ ಇದ್ದಿಲು (ಬಯೋಚಾರ್). ಕೃಷಿ ಭೂಮಿಯನ್ನು ಸುಧಾರಿಸುವ ಉದ್ದೇಶದಿಂದ ಬಯೋಚಾರ್‌ನ್ನು iಣ್ಣಿನಲ್ಲಿ ಸೇರಿಸಿ ಆ ಪ್ರದೇಶವನ್ನು ನೈಸರ್ಗಿಕ ಹಸಿರು ಪ್ರದೇಶವಾಗಿಸುವ ಯತ್ನ ಪ್ರಾತ್ಯಕ್ಷಿಕೆ ಇಲ್ಲಿ ಸಾಕಾರಗೊಂಡಿದೆ. ಜೈವಿಕ ವಸ್ತುಗಳನ್ನು ಮಿತವಾದ ಆಮ್ಲ ಜನಕದ ಪೂರೈಕೆಯೊಂದಿಗೆ ಕಾಯಿಸಿದಾಗ ಸಿಗುವುದೇ ಬಯೋಚಾರ್.

ತರಗೆಲೆ, ಸೋಗೆ, ಹಾಳೆ, ಗರಿಗಳು, ಅಡಕೆ ಸಿಪ್ಪೆ, ತೆಂಗಿನ ಮಟ್ಟೆಗಳನ್ನು ಸುಟ್ಟಾಗ ದೊರೆಯುವ ಬಯೋ ಚಾರ್‌ನ್ನು ಕೃಷಿಕನೇ ಉತ್ಪಾದಿಸಿಕೊಳ್ಳುವ ಪ್ರಾತ್ಯಕ್ಷಿಕೆಯನ್ನು ಸಹ ಇಲ್ಲಿ ಕೈಗೊಳ್ಳಲಾಗಿದೆ. ಈ ರೀತಿಯಾಗಿ ಉತ್ಪಾದನೆಯಾಗುವ ಬಯೋಚಾರ್ ಮಣ್ಣಿನಲ್ಲಿ ಬಹಳ ಕಾಲ ಉಳಿಯುವುದರೊಂದಿಗೆ ರೋಗ ನಿರೋಧಕ ಶಕ್ತಿಯನ್ನೂ ಪಡೆದುಕೊಂಡಿರುತ್ತದೆ. ಈ ಬಯೋಚಾರ್ ನಿಂದ ತೈಲ ಮತ್ತು ಅನಿಲ ಉತ್ಪಾದನೆಯನ್ನು ಸಿದ್ಧಪಡಿಸುವ ಆವಿಷ್ಕಾರವನ್ನು ಇಲ್ಲಿ ಕಾಣಬಹುದು. ೨೦೦ ಲೀಟರ್ ಸಾಮರ್ಥ್ಯದ ಲೋಹದ ಡ್ರಮ್‌ನ್ನು ಉಪಯೋಗಿಸಿಕೊಂಡು ಅತೀ ಕಡಿಮೆ ಖರ್ಚಿನಲ್ಲಿ ಬಯೋಚಾರ್ ಕುಲುಮೆ ಉತ್ಪಾದಿಸುವುದನ್ನು ಇಲ್ಲಿ ರೈತರಿಗೆ ಪರಿಚಯಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

2 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

6 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

6 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

7 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

7 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

7 hours ago