Andolana originals

ಕೃಷ್ಣರ ಮಾತು ಜ್ಯೋತಿರ್ಲಿಂಗವಾಗುತ್ತಿತ್ತು. . .

ಆರ್. ಟಿ. ವಿಠ್ಠಲಮೂರ್ತಿ

ಅದು ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಕಾಲ. ಆ ಸಂದರ್ಭದಲ್ಲಿ ಉಪ ಪ್ರಧಾನಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಕೇರಳಕ್ಕೆ ಭೇಟಿ ನೀಡಿದ್ದರು. ಹೀಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದ ರಾಜಕಾರಣದ ಬಗ್ಗೆ ಮಾತನಾಡುತ್ತಾ ಕರ್ನಾಟಕದಲ್ಲಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಟೀಕಾಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರ ಸಾಧನೆ ಶೂನ್ಯ ಎಂದು ಅಬ್ಬರಿಸಿದರು. ದೇಶದ ಉಪಪ್ರಧಾನಿ ಈ ರೀತಿ ವಾಗ್ಧಾಳಿ ಮಾಡಿದರೆ ಮುಖ್ಯಮಂತ್ರಿಯಾಗಿದ್ದವರು ಸುಮ್ಮನೆ ಕೂರಲು ಸಾಧ್ಯವೇ? ಹಾಗಂತಲೇ ಆಪ್ತರೆನ್ನಿಸಿಕೊಂಡವರು ಕೃಷ್ಣ ಅವರ ಬಳಿ ಹೋದರು. ಸಾರ್, ಉಪಪ್ರಧಾನಿಗಳು ನಿಮ್ಮ ಮೇಲೆ ಒಂದೇ ಸಮನೆ ವಾಗ್ಧಾಳಿ ನಡೆಸುತ್ತಿದ್ದಾರೆ. ಅವರ ಆರೋಪಕ್ಕೆ ನೀವು ತಕ್ಕ ಉತ್ತರ ನೀಡದಿದ್ದರೆ ದೇಶಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಯಾಕೆಂದರೆ ಇವತ್ತು ದೇಶದಲ್ಲಿ ಕಾಂಗ್ರೆಸ್ ಪಾಲಿಗೆ ಶಕ್ತಿ ಅಂತಿರುವುದೇ ಕರ್ನಾಟಕದಲ್ಲಿ. ಹೀಗಾಗಿ ನೀವು ಅಡ್ವಾಣಿಯವರಿಗೆ ತಕ್ಕ ಉತ್ತರ ನೀಡಬೇಕು ಎಂದರು.

ಸರಿ, ಕೃಷ್ಣ ಅವರೂ ಅಡ್ವಾಣಿ ಅವರಿಗೆ ಉತ್ತರ ನೀಡಲು ತಯಾರಾದರು. ಇದಕ್ಕಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸರ್ಕಾರದ ಸಾಧನೆ ಏನು ಅನ್ನುವುದರ ಇಂಚಿಂಚು ವಿವರ ನೀಡಿದರು. ಅಷ್ಟೇ ಅಲ್ಲ, ನನ್ನ ಸರ್ಕಾರದ ಸಾಧನೆ ಶೂನ್ಯವೇ ಅಂತ ನೀವೇ ನಿರ್ಧರಿಸಿ ಎಂದುಬಿಟ್ಟರು. ಆದರೆ ಇಷ್ಟೆಲ್ಲದರ ನಡುವೆ ಅವರು ತಪ್ಪಿಯೂ ಅಡ್ವಾಣಿ ಅವರ ವಿರುದ್ಧ ಟೀಕೆ ಮಾಡಲಿಲ್ಲ. ಕೇಳಿದರೆ, ಟೀಕೆಗೆ ಪ್ರತಿ ಟೀಕೆ ಉತ್ತರವಲ್ಲ ಎಂದು ಕೂಲ್ ಆಗಿ ಉತ್ತರಿಸಿದರು.

ಕೃಷ್ಣರ ಉತ್ತರದಿಂದ ಕೆಲವರಿಗೆ ನಿರಾಸೆ ಆಯಿತು. ಏಕೆಂದರೆ ಅಡ್ವಾಣಿ ಅವರ ವಿರುದ್ಧ ಕೃಷ್ಣ ಟೀಕಾಪ್ರಹಾರ ನಡೆಸಿದ್ದರೆ ಅದು ರಾಷ್ಟ್ರ ಮಟ್ಟದ ಸುದ್ದಿಯಾಗುತ್ತಿತ್ತು ಎಂಬುದು ಅವರ ಹಳಹಳಿಕೆ. ಅಂದ ಹಾಗೆ ಇದೊಂದು ಘಟನೆ ಅಂತಲ್ಲ, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ದಲ್ಲಿ ಎಸ್. ಎಂ. ಕೃಷ್ಣ ಅಗತ್ಯ ಮೀರಿ ಯಾವತ್ತೂ ಮಾತನಾಡಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಯಾವಾಗ ಮಾತನಾಡಬೇಕು? ಯಾವಾಗ ಮೌನ ಧರಿಸಬೇಕು ಎಂಬುದು ಗೊತ್ತಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಮಾತು ಜ್ಯೋತಿರ್ಲಿಂಗವಾಗುವುದು ಹೇಗೆ ಅಂತ ಅವರಿಗೆ ಗೊತ್ತಿತ್ತು. ಹೀಗಾಗಿ ಅವರು ಯಾವ ಸಂದರ್ಭದಲ್ಲೇ ಬಾಯಿ ತೆರೆಯಲಿ, ಅವರೇನು ಹೇಳುತ್ತಾರೆ? ಎಂಬ ಕುತೂಹಲ ಇದ್ದೇ ಇರುತ್ತಿತ್ತು.

 

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago