Andolana originals

ಕೃಷ್ಣರ ಮಾತು ಜ್ಯೋತಿರ್ಲಿಂಗವಾಗುತ್ತಿತ್ತು. . .

ಆರ್. ಟಿ. ವಿಠ್ಠಲಮೂರ್ತಿ

ಅದು ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಕಾಲ. ಆ ಸಂದರ್ಭದಲ್ಲಿ ಉಪ ಪ್ರಧಾನಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಕೇರಳಕ್ಕೆ ಭೇಟಿ ನೀಡಿದ್ದರು. ಹೀಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದ ರಾಜಕಾರಣದ ಬಗ್ಗೆ ಮಾತನಾಡುತ್ತಾ ಕರ್ನಾಟಕದಲ್ಲಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಟೀಕಾಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರ ಸಾಧನೆ ಶೂನ್ಯ ಎಂದು ಅಬ್ಬರಿಸಿದರು. ದೇಶದ ಉಪಪ್ರಧಾನಿ ಈ ರೀತಿ ವಾಗ್ಧಾಳಿ ಮಾಡಿದರೆ ಮುಖ್ಯಮಂತ್ರಿಯಾಗಿದ್ದವರು ಸುಮ್ಮನೆ ಕೂರಲು ಸಾಧ್ಯವೇ? ಹಾಗಂತಲೇ ಆಪ್ತರೆನ್ನಿಸಿಕೊಂಡವರು ಕೃಷ್ಣ ಅವರ ಬಳಿ ಹೋದರು. ಸಾರ್, ಉಪಪ್ರಧಾನಿಗಳು ನಿಮ್ಮ ಮೇಲೆ ಒಂದೇ ಸಮನೆ ವಾಗ್ಧಾಳಿ ನಡೆಸುತ್ತಿದ್ದಾರೆ. ಅವರ ಆರೋಪಕ್ಕೆ ನೀವು ತಕ್ಕ ಉತ್ತರ ನೀಡದಿದ್ದರೆ ದೇಶಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಯಾಕೆಂದರೆ ಇವತ್ತು ದೇಶದಲ್ಲಿ ಕಾಂಗ್ರೆಸ್ ಪಾಲಿಗೆ ಶಕ್ತಿ ಅಂತಿರುವುದೇ ಕರ್ನಾಟಕದಲ್ಲಿ. ಹೀಗಾಗಿ ನೀವು ಅಡ್ವಾಣಿಯವರಿಗೆ ತಕ್ಕ ಉತ್ತರ ನೀಡಬೇಕು ಎಂದರು.

ಸರಿ, ಕೃಷ್ಣ ಅವರೂ ಅಡ್ವಾಣಿ ಅವರಿಗೆ ಉತ್ತರ ನೀಡಲು ತಯಾರಾದರು. ಇದಕ್ಕಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸರ್ಕಾರದ ಸಾಧನೆ ಏನು ಅನ್ನುವುದರ ಇಂಚಿಂಚು ವಿವರ ನೀಡಿದರು. ಅಷ್ಟೇ ಅಲ್ಲ, ನನ್ನ ಸರ್ಕಾರದ ಸಾಧನೆ ಶೂನ್ಯವೇ ಅಂತ ನೀವೇ ನಿರ್ಧರಿಸಿ ಎಂದುಬಿಟ್ಟರು. ಆದರೆ ಇಷ್ಟೆಲ್ಲದರ ನಡುವೆ ಅವರು ತಪ್ಪಿಯೂ ಅಡ್ವಾಣಿ ಅವರ ವಿರುದ್ಧ ಟೀಕೆ ಮಾಡಲಿಲ್ಲ. ಕೇಳಿದರೆ, ಟೀಕೆಗೆ ಪ್ರತಿ ಟೀಕೆ ಉತ್ತರವಲ್ಲ ಎಂದು ಕೂಲ್ ಆಗಿ ಉತ್ತರಿಸಿದರು.

ಕೃಷ್ಣರ ಉತ್ತರದಿಂದ ಕೆಲವರಿಗೆ ನಿರಾಸೆ ಆಯಿತು. ಏಕೆಂದರೆ ಅಡ್ವಾಣಿ ಅವರ ವಿರುದ್ಧ ಕೃಷ್ಣ ಟೀಕಾಪ್ರಹಾರ ನಡೆಸಿದ್ದರೆ ಅದು ರಾಷ್ಟ್ರ ಮಟ್ಟದ ಸುದ್ದಿಯಾಗುತ್ತಿತ್ತು ಎಂಬುದು ಅವರ ಹಳಹಳಿಕೆ. ಅಂದ ಹಾಗೆ ಇದೊಂದು ಘಟನೆ ಅಂತಲ್ಲ, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ದಲ್ಲಿ ಎಸ್. ಎಂ. ಕೃಷ್ಣ ಅಗತ್ಯ ಮೀರಿ ಯಾವತ್ತೂ ಮಾತನಾಡಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಯಾವಾಗ ಮಾತನಾಡಬೇಕು? ಯಾವಾಗ ಮೌನ ಧರಿಸಬೇಕು ಎಂಬುದು ಗೊತ್ತಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಮಾತು ಜ್ಯೋತಿರ್ಲಿಂಗವಾಗುವುದು ಹೇಗೆ ಅಂತ ಅವರಿಗೆ ಗೊತ್ತಿತ್ತು. ಹೀಗಾಗಿ ಅವರು ಯಾವ ಸಂದರ್ಭದಲ್ಲೇ ಬಾಯಿ ತೆರೆಯಲಿ, ಅವರೇನು ಹೇಳುತ್ತಾರೆ? ಎಂಬ ಕುತೂಹಲ ಇದ್ದೇ ಇರುತ್ತಿತ್ತು.

 

ಆಂದೋಲನ ಡೆಸ್ಕ್

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

36 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago